Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ

Bengaluru City

Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ

Public TV
Last updated: March 7, 2025 12:25 pm
Public TV
Share
3 Min Read
olympics
SHARE

– ಕಂಬಳ, ಎತ್ತಿನ ಬಂಡಿ, ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ

ಬೆಂಗಳೂರು: ʻಗುರಿ-ಒಲಿಂಪಿಕ್ ಪದಕʼ (Target Olympics Medal) ಯೋಜನೆ ಅಡಿಯಲ್ಲಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು 3 ವರ್ಷಗಳ ವರೆಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು.

BENGALURU KAMBALA 1

ದಾಖಲೆಯ 16ನೇ ಬಜೆಟ್‌ ಮಂಡಿಸಿದ ಅವರು ಈ ಬಾರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಬಂಪರ್‌ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ. ಅದರಂತೆ ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ (Olympics 2028) ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನ ಮೂರು ವರ್ಷ ನೀಡಲಾಗುವುದು. ಅದಕ್ಕಾಗಿ ಪ್ರಸಕ್ತ ವರ್ಷಕ್ಕೆ 6 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು


ಬಜೆಟ್‌ ಘೋಷಣೆಗಳೇನು?

ಅಲ್ಲದೇ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು. ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಪ್ರತಿ ವಷ ಕ್ರೀಡಾಕೂಟ ಆಯೋಜಿಸಲಾಗುವುದು. 2025-26ನೇ ಸಾಲಿನಲ್ಲಿ ಈ ಉದ್ದೇಶಕ್ಕೆ 2 ಕೋಟಿ ರೂ. ಒದಗಿಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ. ಒದಗಿಸಲಾಗುವುದು. ನಿವೇಶನ ಲಭ್ಯವಿರುವ 12 ತಾಲ್ಲೂಕು ಕೇಂದ್ರಗಳಿಗೆ ತಲಾ 2 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಟ್ಟು 12 ಕೋಟಿ ರೂ ಒದಗಿಸಲಾಗುವುದು.

Manu Bhaker and Sarabjot Singh

ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ಹಾಗೂ ಟಿ.ನರಸೀಪುರ ತಾಲ್ಲೂಕು ಕ್ರೀಡಾಂಗಣವನ್ನು 6 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾಗುವುದು. ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದರಂತೆ ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್ ರೇಂಜ್ ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್‌

ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಒದಗಿಸಲಾಗುವುದು. ಯಾದಗಿರಿಯ ಶಹಾಪುರದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು. ಮೈಸೂರು ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು 7 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳವನ್ನು ಹೀಟಿಂಗ್ ಮತ್ತು ಡೈವಿಂಗ್ ಪೂಲ್ ವ್ಯವಸ್ಥೆಗಳನ್ನೊಳಗೊಂಡು ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗುವುದು. ಚಾಮರಾಜನಗರದಲ್ಲಿ ಒಲಿಂಪಿಕ್ಸ್‌ ಮಾದರಿಯ (50 ಮೀಟರ್) ಈಜುಕೊಳವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್, ಖೋಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರೂ. ಒದಗಿಸಲಾಗುವುದು.

ಕ್ರೀಡಾಪಟುಗಳು ತರಬೇತಿ ಪಡೆಯಲು ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಹಕಾರಿಯಾಗುವಂತೆ ಶಾಲಾ-ಕಾಲೇಜುಗಳ (ವೃತ್ತಿಪರ ಕಾಲೇಜುಗಳು ಸೇರಿದಂತೆ) ವಾರ್ಷಿಕ ಹಾಜರಾತಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗಿನ ಕ್ರೀಡಾಪಟುಗಳಿಗೆ ಶೇ.15 ರಷ್ಟು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ ನೀಡಲಾಗುವುದು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಶೇ.5ರಷ್ಟು ಕೃಪಾಂಕವನ್ನು ವೃತ್ತಿಪರ, ಪದವಿ ಮತ್ತು ಉನ್ನತ ಶಿಕ್ಷಣದ ಪ್ರವೇಶದಲ್ಲಿ ನೀಡಲಾಗುವುದು. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು. ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000 ರೂ.ಗಳಿಗೆ, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ರೂ.ಗಳಿಗೆ ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ. ಗಳಿಗೆ ಹೆಚ್ಚಿಸಲಾಗುವುದು.

ಒಲಿಂಪಿಕ್ಸ್‌, ಕಾಮನ್ ವೆಲ್ತ್ ಹಾಗೂ ಏಷಿಯನ್ ಗೇಮ್ಸ್‌ಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳ ಸೇವೆಯನ್ನು ವಿವಿಧ ಕ್ರೀಡಾ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಪಡೆಯಲಾಗುವುದು.

 

TAGGED:bengaluruKarnataka Budget 2025Olympics 2028siddaramaiahsportsಒಲಿಂಪಿಕ್ಸ್‌ 2028ಕಂಬಳಕರ್ನಾಟಕ ಬಜೆಟ್ಕ್ರೀಡಾಪಟುಗಳುಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
22 minutes ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
48 minutes ago
CT Ravi
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
55 minutes ago
Shivamogga Sanketh Murder Case
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
56 minutes ago
Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
1 hour ago
Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?