Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ

Public TV
Last updated: March 7, 2025 12:25 pm
Public TV
Share
3 Min Read
olympics
SHARE

– ಕಂಬಳ, ಎತ್ತಿನ ಬಂಡಿ, ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ

ಬೆಂಗಳೂರು: ʻಗುರಿ-ಒಲಿಂಪಿಕ್ ಪದಕʼ (Target Olympics Medal) ಯೋಜನೆ ಅಡಿಯಲ್ಲಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು 3 ವರ್ಷಗಳ ವರೆಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು.

BENGALURU KAMBALA 1

ದಾಖಲೆಯ 16ನೇ ಬಜೆಟ್‌ ಮಂಡಿಸಿದ ಅವರು ಈ ಬಾರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಬಂಪರ್‌ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ. ಅದರಂತೆ ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ (Olympics 2028) ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನ ಮೂರು ವರ್ಷ ನೀಡಲಾಗುವುದು. ಅದಕ್ಕಾಗಿ ಪ್ರಸಕ್ತ ವರ್ಷಕ್ಕೆ 6 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು


ಬಜೆಟ್‌ ಘೋಷಣೆಗಳೇನು?

ಅಲ್ಲದೇ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು. ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಪ್ರತಿ ವಷ ಕ್ರೀಡಾಕೂಟ ಆಯೋಜಿಸಲಾಗುವುದು. 2025-26ನೇ ಸಾಲಿನಲ್ಲಿ ಈ ಉದ್ದೇಶಕ್ಕೆ 2 ಕೋಟಿ ರೂ. ಒದಗಿಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ. ಒದಗಿಸಲಾಗುವುದು. ನಿವೇಶನ ಲಭ್ಯವಿರುವ 12 ತಾಲ್ಲೂಕು ಕೇಂದ್ರಗಳಿಗೆ ತಲಾ 2 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಟ್ಟು 12 ಕೋಟಿ ರೂ ಒದಗಿಸಲಾಗುವುದು.

Manu Bhaker and Sarabjot Singh

ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ಹಾಗೂ ಟಿ.ನರಸೀಪುರ ತಾಲ್ಲೂಕು ಕ್ರೀಡಾಂಗಣವನ್ನು 6 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾಗುವುದು. ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದರಂತೆ ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್ ರೇಂಜ್ ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್‌

ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಒದಗಿಸಲಾಗುವುದು. ಯಾದಗಿರಿಯ ಶಹಾಪುರದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು. ಮೈಸೂರು ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು 7 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳವನ್ನು ಹೀಟಿಂಗ್ ಮತ್ತು ಡೈವಿಂಗ್ ಪೂಲ್ ವ್ಯವಸ್ಥೆಗಳನ್ನೊಳಗೊಂಡು ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗುವುದು. ಚಾಮರಾಜನಗರದಲ್ಲಿ ಒಲಿಂಪಿಕ್ಸ್‌ ಮಾದರಿಯ (50 ಮೀಟರ್) ಈಜುಕೊಳವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್, ಖೋಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರೂ. ಒದಗಿಸಲಾಗುವುದು.

ಕ್ರೀಡಾಪಟುಗಳು ತರಬೇತಿ ಪಡೆಯಲು ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಹಕಾರಿಯಾಗುವಂತೆ ಶಾಲಾ-ಕಾಲೇಜುಗಳ (ವೃತ್ತಿಪರ ಕಾಲೇಜುಗಳು ಸೇರಿದಂತೆ) ವಾರ್ಷಿಕ ಹಾಜರಾತಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗಿನ ಕ್ರೀಡಾಪಟುಗಳಿಗೆ ಶೇ.15 ರಷ್ಟು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ ನೀಡಲಾಗುವುದು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಶೇ.5ರಷ್ಟು ಕೃಪಾಂಕವನ್ನು ವೃತ್ತಿಪರ, ಪದವಿ ಮತ್ತು ಉನ್ನತ ಶಿಕ್ಷಣದ ಪ್ರವೇಶದಲ್ಲಿ ನೀಡಲಾಗುವುದು. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು. ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000 ರೂ.ಗಳಿಗೆ, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ರೂ.ಗಳಿಗೆ ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ. ಗಳಿಗೆ ಹೆಚ್ಚಿಸಲಾಗುವುದು.

ಒಲಿಂಪಿಕ್ಸ್‌, ಕಾಮನ್ ವೆಲ್ತ್ ಹಾಗೂ ಏಷಿಯನ್ ಗೇಮ್ಸ್‌ಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳ ಸೇವೆಯನ್ನು ವಿವಿಧ ಕ್ರೀಡಾ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಪಡೆಯಲಾಗುವುದು.

 

TAGGED:bengaluruKarnataka Budget 2025Olympics 2028siddaramaiahsportsಒಲಿಂಪಿಕ್ಸ್‌ 2028ಕಂಬಳಕರ್ನಾಟಕ ಬಜೆಟ್ಕ್ರೀಡಾಪಟುಗಳುಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
2 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
10 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
13 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
14 hours ago

You Might Also Like

Naveen Kumar
Crime

ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

Public TV
By Public TV
4 minutes ago
Omar Abdullah
Latest

ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

Public TV
By Public TV
11 minutes ago
virat kohli shreyas iyer 2
Cricket

ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

Public TV
By Public TV
30 minutes ago
Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
1 hour ago
Hemavati River
Districts

ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

Public TV
By Public TV
1 hour ago
Snehamayi Krishna 2
Districts

MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?