ನವದೆಹಲಿ: ರಾಷ್ಟ್ರ ರಾಜಧಾನಿಯ ಗೋಕುಲಪುರಿಯಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಜನ ಸಾವನ್ನಪ್ಪಿದ ಘಟನೆ ನಡೆದಿದೆ.
ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗೋಕುಲಪುರಿ ಪಿಎಸ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ದೆಹಲಿ ಅಗ್ನಿಶಾಮಕ ಸೇವೆಯ ಮಾಹಿತಿಯ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ 7 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದೆ.
ಈ ಬಗ್ಗೆ ಈಶಾನ್ಯ ದೆಹಲಿ ಹೆಚ್ಚುವರಿ ಡಿಸಿಪಿ ಮಾತನಾಡಿ, ಘಟನೆ ನಡೆದಾಕ್ಷಣ ನಾವು ಕಾರ್ಯಪ್ರವೃತ್ತರಾಗಿದ್ದು, ಸ್ಥಳಕ್ಕೆ ತಲುಪಿದ್ದೆವು. ಜೊತೆಗೆ ಅಗ್ನಿ ಶಾಮಕದಳದವರನ್ನು ಸಂಪರ್ಕಿಸಿದ್ದೇವೆ. ಅವರು ಕೂಡ ಉತ್ತಮಾಗಿ ಸ್ಪಂದನೆ ನೀಡಿದ್ದಾರೆ. ಬೆಂಕಿಯನ್ನು ಸುಮಾರು 4 ಗಂಟೆ ವೇಳೆಗೆ ನಂದಿಸಿದ್ದೇವೆ. ಆದರೆ ಅಷ್ಟರಲ್ಲಾಗಲೇ 30 ಗುಡಿಸಲು ಸುಟ್ಟುಹೋಗಿದ್ದು, 7 ಜನರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ ಸೇನೆ
At 1 am there was a fire incident in Gokulpuri PS area. Immediately teams reached the spot with all rescue equipment. We also contacted the Fire Dept that responded very well.We could douse the fire by around 4 am. 30 shanties burned & 7 lives are lost: Addl DCP, North East Delhi pic.twitter.com/UT8XzgaNMR
— ANI (@ANI) March 12, 2022
ಘಟನೆ ಕುರಿತು ಮಾಹಿತಿ ಕಲೆಹಾಕಿದ ಬಳಿಕ ಸ್ಥಳಕ್ಕೆ 13 ಅಗ್ನಿಶಾಮಕ ವಾಹನಗಳು ಧಾವಿಸಿವೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದನ್ನು ತನಿಖೆ ನಡೆಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೂರು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ನಾಲ್ವರು ಉಗ್ರರ ಹತ್ಯೆ