ಕಲುಷಿತ ಆಹಾರ ಸೇವನೆ 60 ವಿದ್ಯಾರ್ಥಿಗಳು ಅಸ್ವಸ್ಥ – ಪ್ರಾಣಾಪಾಯದಿಂದ ಪಾರು

Public TV
1 Min Read
morarji desai school

ಚಿಕ್ಕಬಳ್ಳಾಪುರ: ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿ ಮಸ್ತೇನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕೆಲವು ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿದ್ದರು. ಇದನ್ನು ತಿಂದಾಕ್ಷಣ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ, ಹೊಟ್ಟೆನೋವು ಕಾಣಿಸಿಕೊಂಡಿದೆ.

morarji desai school 1

ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿ ಇತರರಿಗೆ ತಿಂಡಿಯನ್ನು ಕೊಡುವುದನ್ನು ನಿಲ್ಲಿಸಿದ್ದಾರೆ. ಜೊತೆಗೆ ಅಸ್ವಸ್ಥರಾಗಿರುವ ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಿದ್ದಾರೆ. ವಿದ್ಯಾರ್ಥಿಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಇದನ್ನೂ ಓದಿ: 22 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗಳು- ತಬ್ಬಿ ಕಣ್ಣೀರಿಟ್ಟ ವೀಡಿಯೋ ವೈರಲ್

ಈ ವಸತಿ ಶಾಲೆಯಲ್ಲಿ ಒಟ್ಟಾರೆಯಾಗಿ 380 ವಿದ್ಯಾರ್ಥಿಗಳಿದ್ದು, ಈ ಪೈಕಿ ಮೊದಲು ತಿಂಡಿ ಸೇವಿಸಿದ್ದ 60 ಮಕ್ಕಳಲ್ಲಿ 7 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕೈವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅವರು ಸಹ ಚೇತರಿಸಿಕೊಂಡಿದ್ದು, ಉಳಿದ ಮಂದಿಗೆ ವಸತಿ ನಿಲಯದಲ್ಲಿ ಚಿಕಿತ್ಸೆ ನೀಡಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ. ಇದನ್ನೂ ಓದಿ: BBMP ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

morarji desai school 2

ಮೇಲ್ನೋಟಕ್ಕೆ ಉಪಹಾರದಲ್ಲಿ ಬಳಸಿದ್ದ ಸೋಯಾಬೀನ್ ಕೆಡದಂತೆ ಇಟ್ಟಿದ್ದ ಮಾತ್ರೆಗಳನ್ನು ತೆಗೆಯದೇ ಉಪಹಾರಕ್ಕೆ ಬಳಸಿದ ಪರಿಣಾಮವಾಗಿ ಆಹಾರ ಹಾಳಾಗಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಅಸ್ವಸ್ಥ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು, ಎಲ್ಲರೂ ನಿಟ್ಟುಸಿರುಬಿಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *