Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹೊಸ ಕಾನೂನಿನಡಿ ಮೊದಲ ದಿನವೇ ರಾಜ್ಯಾದ್ಯಂತ 63 FIR ದಾಖಲು

Public TV
Last updated: July 1, 2024 10:12 pm
Public TV
Share
2 Min Read
Criminal Law 3
SHARE

ಬೆಂಗಳೂರು: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು (New Criminal Laws) ಜಾರಿಯಾಗಿದೆ. ಭಾರತೀಯ ದಂಡ ಸಂಹಿತೆಯು (IPC) ಭಾರತೀಯ ನ್ಯಾಯ ಸಂಹಿತೆಯಾಗಿ (BSN), ಅಪರಾಧ ಪ್ರಕ್ರಿಯಾ ಸಂಹಿತೆಯು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಾಗಿ ಮತ್ತು ಸಾಕ್ಷ್ಯ ಕಾಯ್ದೆಯು ಭಾರತೀಯ ಸಾಕ್ಷ್ಯ ಕಾಯ್ದೆಯಾಗಿ ಜಾರಿಗೆ ಬಂದಿದೆ. ಹೊಸ ಕಾನೂನು ಜಾರಿಯಾದ ಮೊದಲ ದಿನವೇ ರಾಜ್ಯಾದ್ಯಂತ 63 ಎಫ್‌ಐಆರ್ ದಾಖಲಾಗಿವೆ ಎಂದು ಪೊಲೀಸ್‌ ಇಲಾಖೆ (Police department) ಮಾಹಿತಿ ನೀಡಿದೆ.

ಭಾರತೀಯ ನ್ಯಾಯ ಸಂಹಿತೆ ಕಾನೂನು ಅಡಿಯಲ್ಲಿ ಸೋಮವಾರ (ಜು.1) ಒಂದೇ ದಿನ ರಾತ್ರಿ 8 ಗಂಟೆ ವರೆಗೆ 63 ಎಫ್‌ಐಆರ್ (FIR) ದಾಖಲಾಗಿದೆ ಎಂದು ಮಾಹಿತಿ ನೀಡಿದೆ.

Criminal Law 33 1

ಬ್ರಿಟಿಷ್ ಕಾಲದ ಕಾನೂನಿಗೆ ಗುಡ್‌ಬೈ:
ಹೊಸ ಕ್ರಿಮಿನಲ್ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯನ್ನು ವಸಾಹತು ಕಾಲದ ಜಡತ್ವದಿಂದ ಹೊರತರುತ್ತದೆ ಎಂಬುದು ಕೇಂದ್ರ ಸರ್ಕಾರದ ಪ್ರತಿಪಾದನೆ. ಹೊಸ ಕಾನೂನು ಪ್ರಯೋಗಕ್ಕೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಇನ್ಪೆಕ್ಟರ್‌ಗಳಿಗೆ ತರಬೇತಿ ನೀಡಲಾಗಿದೆ. ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು, ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಹಾಗೂ ಹಿರಿಯ ವಕೀಲರಿಂದ ತರಬೇತಿ ಕೊಡಿಸಲಾಗಿದೆ. ಸಿವಿಲ್ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಆದ್ಯತೆ ಮೇರೆಗೆ ತರಬೇತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Criminal Law 2 1

163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ 126 ವರ್ಷಗಳ ಹಿಂದಿನ ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಕಾನೂನುಗಳಲ್ಲಿ 20 ಹೊಸ ಅಪರಾಧಗಳ ಸೇರ್ಪಡೆಯಾಗಿದೆ. 33 ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. 83 ಅಪರಾಧಗಳಿಗೆ ಅಧಿಕ ದಂಡ ವಿಧಿಸುವ ಜೊತೆಗೆ 23 ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಪ್ರಮುಖ ಸೆಕ್ಷನ್‌ಗಳು ಯಾವುವು?
420 – ಹಣಕಾಸು ಅಥವಾ ಬೇರೆ ಯಾವುದೇ ಆಮಿಷ ಒಡ್ಡಿ ವಂಚಿಸಿದ ಆರೋಪದ ಅಡಿ ಐಪಿಸಿ ಸೆಕ್ಷನ್ 420ರ ಅಡಿ ಕೇಸ್ ದಾಖಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ ಸೆಕ್ಷನ್ 318 ಆಗಿದೆ.
302 – ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಪ್ರಕರಣಕ್ಕೆ ಈ ಸೆಕ್ಷನ್ ಬಳಸಲಾಗುತ್ತಿತ್ತು. ಇದೀಗ ಭಾರತೀಯ ನ್ಯಾಯ ಸಂಹಿತೆಯಲ್ಲಿ 103 ಆಗಿದೆ.
307 – ಭಾರತೀಯ ದಂಡ ಸಂಹಿತೆಯಲ್ಲಿ ಕೊಲೆ ಯತ್ನಕ್ಕೆ ಬಳಸಲಾಗುತ್ತಿತ್ತು. ಇದೀಗ ಸೆಕ್ಷನ್ 103 ಆಗಿದೆ.
376 – ಭಾರತೀಯ ದಂಡ ಸಂಹಿತೆಯಲ್ಲಿ ಅತ್ಯಾಚಾರ ಪ್ರಕಣಗಳಿಗೆ ಈ ಸೆಕ್ಷನ್ ಬಲಸಲಾಗುತ್ತಿತ್ತು. ಇದೀಗ 64 ಆಗಿದೆ.
304(ಬಿ) – ಐಪಿಸಿ ನಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಬಳಸುತ್ತಿದ್ದ ಸೆಕ್ಷನ್ ಈಗ ಬಿಎನ್‌ಎಸ್‌ನಲ್ಲಿ 80 ಆಗಿದೆ.
304(ಎ) – ಐಪಿಸಿ ನಲ್ಲಿ ನಿರ್ಲಕ್ಷ್ಯದಿಂದ ಮರಣ (ರಸ್ತೆ ಅಪಘಾತ ಅಥವಾ ಇತರೇ ಸಂದರ್ಭ) ವೇಳೆ ಬಳಸಲಾಗುತ್ತಿತ್ತು. ಇದೀಗ ಬಿಎನ್‌ಎಸ್‌ನಲ್ಲಿ 106 ಆಗಿದೆ.
359 – ವ್ಯಕ್ತಿ ಅಪಹರಣ ಪ್ರಕರಣದಲ್ಲಿ ಐಪಿಸಿ ನಲ್ಲಿ ಈ ಸೆಕ್ಷನ್ ಬಳಕೆಯಾಗುತ್ತಿತ್ತು. ಈಗ ಸೆಕ್ಷನ್ 137 ಆಗಿದೆ.
309 – ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದರೆ ಆತನ ವಿರುದ್ಧ ಐಪಿಸಿ ಅಡಿ ಈ ಸೆಕ್ಷನ್ ವಿಧಿಸಲಾಗುತ್ತಿತ್ತು. ಈಗ ಬಿಎನ್‌ಎಸ್ ಅಡಿ 226 ಆಗಿದೆ.

TAGGED:Amit ShahBNSIPCNew Criminal Lawsparliamentpolice departmentSystemಐಪಿಸಿಕರ್ನಾಟಕಕ್ರಿಮಿನಲ್ ಕಾನೂನುಬಿಎಸ್‌ಎನ್‌
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
3 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Ahmedabad Planecrash
Latest

ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್‌ ಕೊಟ್ಟ ಕೊನೆಯ ಸಂದೇಶ

Public TV
By Public TV
43 seconds ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
2 minutes ago
Air India Crash CM Siddaramaiah
Bengaluru City

ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

Public TV
By Public TV
5 minutes ago
Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
19 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
21 minutes ago
train
Latest

ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ

Public TV
By Public TV
39 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?