ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಳಿತ ಕಂಡು ಬರುತ್ತಿದೆ. ಅದು ಇಂದು ಕೂಡ ಮುಂದುವರಿದಿದೆ. ಇಂದು ರಾಜ್ಯದಲ್ಲಿ ಒಟ್ಟು 670 ಪಾಸಿಟಿವ್ ಕೇಸ್ ಮತ್ತು ಏಕೈಕ ಮರಣ ಪ್ರಕರಣ ದಾಖಲಾಗಿದೆ.
- Advertisement 2-
ಗದಗ, ಕೊಪ್ಪಳ ಮತ್ತು ಯಾದಗಿರಿಯಲ್ಲಿ ಇಂದು ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಉಳಿದ 27 ಜಿಲ್ಲೆಗಳಲ್ಲೂ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ 730 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,269ಕ್ಕೆ ಇಳಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 337 ಕೇಸ್ ದಾಖಲಾಗಿದೆ. ಮೈಸೂರಿನಲ್ಲಿ ದಾಖಲಾದ 79 ಕೇಸ್ ಜಿಲ್ಲೆಗಳ ಪೈಕಿ ದಾಖಲಾದ ಹೆಚ್ಚಿನ ಪ್ರಕರಣವಾಗಿದೆ. ಇಂದು ಚಿತ್ರದುರ್ಗದಲ್ಲಿ ದಾಖಲಾದ ಏಕೈಕ ಮರಣ ಪ್ರಕರಣ ಸೇರಿ ಈವರೆಗೆ ಒಟ್ಟು 40,215 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ACB ರದ್ದು ತೀರ್ಪಿನ ಅನುಷ್ಠಾನ ಮಾಡಿ ಸರ್ಕಾರದಿಂದ ಆದೇಶ
- Advertisement 3-
- Advertisement 4-
ಈವರೆಗೆ ರಾಜ್ಯದಲ್ಲಿ ಒಟ್ಟು 40,57,589 ಮಂದಿಗೆ ಕೊರೊನಾ ಬಂದಿದೆ. ಒಟ್ಟು 40,13,063 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 38,353 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 27,429 ಸ್ಯಾಂಪಲ್ (ಆರ್ಟಿಪಿಸಿಆರ್ 20,073 + 7,356 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ರೇವಣ್ಣನನ್ನು ಹಿಟ್ಲರ್ಗೆ ಹೋಲಿಸಿದ ಶಾಸಕ ಪ್ರೀತಂ ಗೌಡ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 2, ಬಳ್ಳಾರಿ 14, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 337, ಬೀದರ್ 1, ಚಾಮರಾಜನಗರ 4, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 22, ಚಿತ್ರದುರ್ಗ 1, ದಕ್ಷಿಣ ಕನ್ನಡ 14, ದಾವಣಗೆರೆ 0, ಧಾರವಾಡ 11, ಗದಗ 1, ಹಾಸನ 17, ಹಾವೇರಿ 2, ಕಲಬುರಗಿ 9, ಕೊಡಗು 48, ಕೋಲಾರ 10, ಕೊಪ್ಪಳ 0, ಮಂಡ್ಯ 8, ಮೈಸೂರು 79, ರಾಯಚೂರು 3, ರಾಮನಗರ 34, ಶಿವಮೊಗ್ಗ 13, ತುಮಕೂರು 7, ಉಡುಪಿ 5, ಉತ್ತರ ಕನ್ನಡ 10, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.