ಅರುಣಾಚಲ ಪ್ರದೇಶದಲ್ಲಿ ಹಿಮಪಾತ: 7 ಸೈನಿಕರು ಹುತಾತ್ಮ

Public TV
1 Min Read
snowfall

ಇಟಾನಗರ: ಫೆಬ್ರವರಿ 6 ರಂದು ಅರುಣಾಚಲ ಪ್ರದೇಶದಲ್ಲಿ ನಡೆದ ಹಿಮಕುಸಿತದಲ್ಲಿ 7 ಸೈನಿಕರು ಹಿಮದ ಅಡಿ ಹೂತು ಹೋಗಿದ್ದರು. ಹಿಮದಲ್ಲಿ ಸಿಲುಕಿಕೊಂಡಿದ್ದ 7 ಸೈನಿಕರು ಮೃತಪಟ್ಟಿದ್ದಾರೆ ಎಂದು ಮಂಗಳವಾರ ಘೋಷಿಸಲಾಗಿದೆ.

ಹಿಮಪಾತವಾಗಿದ್ದ ಚುಮೆ ಗಯಾಟರ್ ಪ್ರದೇಶಕ್ಕೆ ರಕ್ಷಣಾ ತಂಡಗಳನ್ನು ವಿಮಾನದ ಮೂಲಕ ಕಳುಹಿಸಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ಪ್ರದೇಶ ತವಾಂಗ್ ಜಿಲ್ಲಾ ಕೇಂದ್ರದಿಂದ 100 ಕಿಮೀ ದೂರದಲ್ಲಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಮೃತ 7 ಮಂದಿ ಸೈನಿಕರು 19ನೇ ಜಮ್ಮು ಹಾಗೂ ಕಾಶ್ಮೀರ ರೈಫಲ್ಸ್‍ಗೆ ಸೇರಿದವರು ಎನ್ನಲಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶಕ್ಕೂ ಹಿಜಬ್‌ ವಿವಾದ ಎಂಟ್ರಿ – ನಿಷೇಧ ಮಾಡ್ತೀವಿ ಎಂದ ಶಿಕ್ಷಣ ಸಚಿವ

snowfall

ಅರುಣಾಚಲ ಪ್ರದೇಶದಲ್ಲಿನ ಹಿಮಪಾತದಲ್ಲಿ ನಮ್ಮ 7 ವೀರ ಯೋಧರ ದುರದೃಷ್ಟಕರ ನಿಧನದ ಬಗ್ಗೆ ತಿಳಿದು ತೀವ್ರ ದುಃಖವಾಗಿದೆ. ಯೋಧರು ನಿಸ್ವಾರ್ಥವಾಗಿ ನಮ್ಮ ಸುರಕ್ಷತೆ ಮತ್ತು ಭದ್ರತೆಗಾಗಿ ಶ್ರಮಿಸುತ್ತಿದ್ದರು. ಯೋಧರಿಗೆ ನನ್ನ ನಮನಗಳು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: Karnataka Hijab Row: ಹೈಸ್ಕೂಲ್‌, ಕಾಲೇಜುಗಳಿಗೆ 3 ದಿನ ರಜೆ

Share This Article
Leave a Comment

Leave a Reply

Your email address will not be published. Required fields are marked *