Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹನಿಮೂನ್ ಮರ್ಡರ್‌ ಕೇಸ್ | 790 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ – ಕೊಲೆಯಾದ ರಘುವಂಶಿ ಪತ್ನಿಯೇ ಪ್ರಮುಖ ಆರೋಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹನಿಮೂನ್ ಮರ್ಡರ್‌ ಕೇಸ್ | 790 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ – ಕೊಲೆಯಾದ ರಘುವಂಶಿ ಪತ್ನಿಯೇ ಪ್ರಮುಖ ಆರೋಪಿ

Crime

ಹನಿಮೂನ್ ಮರ್ಡರ್‌ ಕೇಸ್ | 790 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ – ಕೊಲೆಯಾದ ರಘುವಂಶಿ ಪತ್ನಿಯೇ ಪ್ರಮುಖ ಆರೋಪಿ

Public TV
Last updated: September 6, 2025 11:56 am
Public TV
Share
5 Min Read
Meghalaya Honeymoon 7
SHARE

– ಪ್ರಕರಣಕ್ಕೆ ಸ್ಫೋಟಕ ತಿರುವು ನೀಡಿದ್ದ ಟೂರಿಸ್ಟ್ ಗೈಡ್‌ ಹೇಳಿಕೆ
– ಪತಿ ಕೊಲ್ಲಲು ಕಾಂಟ್ರ್ಯಾಕ್ಟ್‌ ಕಿಲ್ಲರ್ಸ್‌ ನೇಮಿಸಿಕೊಂಡಿದ್ದ ಸೋನಮ್‌

ಶಿಲ್ಲಾಂಗ್‌: ಇಡೀ ದೇಶಾದ್ಯಂತ ವ್ಯಾಪಕ ಸದ್ದು ಮಾಡಿದ್ದ ಹನಿಮೂನ್‌ ಮರ್ಡರ್‌ ಕೇಸ್‌ (Honeymoon Murder Case) ಕೊನೆಗೂ ತಾರ್ಕಿಕ ಅಂತ್ಯಕ್ಕೆ ಬಂದಂತಿದೆ. ಇಂದೋರ್‌ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 790 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿರುವ ಮೇಘಾಲಯ ಪೊಲೀಸರ ವಿಶೇಷ ತನಿಖಾ ತಂಡ (Meghalaya SIT) ರಾಜಾ ಪತ್ನಿ ಸೋನಂ ರಘುವಂಶಿಯೇ ಪ್ರಮುಖ ಆರೋಪಿ ಎಂದು ತಿಳಿಸಿದೆ. ಅಲ್ಲದೇ ಆಕೆಯ ಪ್ರಿಯಕರ ರಾಜ್‌ ಕುಶ್ವಾಹ ಸೇರಿ ಇತರ ಮೂವರ ವಿರುದ್ಧವೂ ಕೊಲೆ ಆರೋಪ ಹೊರಿಸಿದೆ.

ಇಂದೋರ್ ಮೂಲದ ಉದ್ಯಮಿಯ ಕೊಲೆಗೆ ಸಂಬಂಧಿಸಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದ ಮೇಘಾಲಯ ಪೊಲೀಸರ ವಿಶೇಷ ತನಿಖಾ ತಂಡ ಸೊಹ್ರಾ ಸಬ್-ಡಿವಿಷನ್‌ನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯಕ್ಕೆ 790 ಪುಟಗಳ ದೋಷಾರೋಪ ಪಟ್ಟಿ (Chargesheet) ಸಲ್ಲಿಸಿದ್ದಾರೆ. ಇದನ್ನೂ ಓದಿ: Honeymoon Murder | ಕಾಂಟ್ರ್ಯಾಕ್ಟ್‌ ಕಿಲ್ಲರ್ಸ್‌.. ಫೋನ್‌ಕಾಲ್‌ನಲ್ಲೇ ಪಿನ್‌ ಟು ಪಿನ್‌ ಅಪ್ಡೇಟ್‌ – ಕೊಲೆ ರಹಸ್ಯ ಬಯಲಾಗಿದ್ದೇ ರೋಚಕ

Meghalaya Honeymoon

ಈಗಾಗಲೇ ಬಂಧಿಸಿರುವ ಸೋನಮ್‌ ರಘುವಂಶಿ (Sonam Raghuvanshi), ರಾಜ್ ಕುಶ್ವಾಹ, ಆಕಾಶ್ ರಜಪೂತ್, ಆನಂದ್ ಕುರ್ಮಿ ​​ಮತ್ತು ವಿಶಾಲ್ ಸಿಂಗ್ ಚೌಹಾಣ್ ಆರೋಪಿಗಳನ್ನ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಕಳೆದ ಮೇ 23ರಂದು ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದ ವೇಳೆ ಸೋನಮ್‌ ತನ್ನ ಗಂಡನನ್ನ ಕೊಲ್ಲಲು ಸಹಾಯ ಮಾಡಿದ್ದಾಗಿ ಆರೋಪ ಹೊರಿಸಲಾಗಿದೆ. ಇದನ್ನೂ ಓದಿ: Honeymoon Murder | ಕೊನೆಗೂ ತಮ್ಮಿಬ್ಬರ ಸಂಬಂಧ ಒಪ್ಪಿಕೊಂಡ ಸೋನಂ ರಘುವಂಶಿ – ರಾಜ್

ಎಲ್ಲ ಆರೋಪಿಗಳ ವಿರುದ್ಧ ಕೊಲೆಗಾಗಿ 103 (I), ಸಾಕ್ಷಿ ಕಣ್ಮರೆಗಾಗಿ 238 (a) ಹಾಗೂ ಕ್ರಿಮಿನಲ್‌ ಪಿತೂರಿಗಾಗಿ 61 (2) ಬಿಎನ್‌ಎಸ್‌ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚುವರಿ ಎಫ್‌ಐಎಲ್‌ ವರದಿಗಳು ಬಂದ ನಂತರ ಇತರ ಮೂವರು ಆರೋಪಿಗಳ ವಿರುದ್ಧ ಪೂರಕ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಪೂರ್ವ ಖಾಸಿ ಹಿಲ್ಸ್ ಎಸ್ಪಿ ವಿವೇಕ್ ಸೈಮ್ ತಿಳಿಸಿದ್ದಾರೆ. ಆಲ್ಲದೇ ಸಾಕ್ಷ್ಯ ನಾಶ ಮತ್ತು ಮರೆಮಾಚುವ ಆರೋಪದ ಮೇಲೆ ಬಂಧಿಸಲ್ಪಟ್ಟ ಜೇಮ್ಸ್, ತೋಮರ್ ಮತ್ತು ಅಹಿರ್ಬರ್ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಮೇಲೂ ನಿಗಾ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Honeymoon Murder | ರಾಜ್‌ನ ಆಭರಣ, 5 ಲಕ್ಷ ನಗದು, ಪಿಸ್ತೂಲ್ ಇದ್ದ ಹಂತಕಿಯ ಬ್ಯಾಗ್ ಮುಚ್ಚಿಟ್ಟಿದ್ದ ಫ್ಲ್ಯಾಟ್‌ ಓನರ್ ಅರೆಸ್ಟ್

Meghalaya Honeymoon 3

ಏನಿದು ಪ್ರಕರಣ?
ಇಂದೋರ್ ಮೂಲದ ರಾಜಾ ರಘುವಂಶಿ (Raja Raghuvanshi) ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನ ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ಮಧುಚಂದ್ರ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಡುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿಯ ಮೃತದೇಹ ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.

Meghalaya Honeymoon 4

ಸ್ಫೋಟಕ ತಿರುವು ಸಿಕ್ಕಿದ್ದೆಲ್ಲಿ?
ಮೇಘಾಲಯದ ಸೊಹ್ರಾ ಪ್ರದೇಶದಲ್ಲಿ ಈ ಮೊದಲು ಕೂಡ ಟೂರಿಸ್ಟ್‌ಗಳು ನಾಪತ್ತೆಯಾಗಿದ್ದರು. ಇದರಿಂದಾಗಿ ರಾಜಾ ರಘುವಂಶಿ ದಂಪತಿ ನಾಪತ್ತೆ ಪ್ರಕರಣ ಮೇಘಾಲಯದಲ್ಲಿ ಭಾರೀ ಸುದ್ದಿಯಾಗಿತ್ತು. ರಾಜಾ ರಘುವಂಶಿ ಮೃತದೇಹ ಪತ್ತೆ ಬಳಿಕ ಪ್ರಕರಣದ ಹಿಂದಿನ ಪಿತೂರಿ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಇದೇ ವೇಳೆ ಸ್ಥಳೀಯ ಟೂರಿಸ್ಟ್ ಗೈಡ್ ಒಬ್ಬರು ಸ್ಫೋಟಕ ಮಾಹಿತಿ ನೀಡಿದ್ದರು. ಇದನ್ನೂ ಓದಿ: Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

ಮೇ 23 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನೊಂಗ್ರಿಯಾತ್‌ನಿಂದ ಮಾವ್ಲಾಖಿಯಾತ್‌ಗೆ 3,000 ಮೆಟ್ಟಿಲುಗಳನ್ನು ಹತ್ತುತ್ತಿದ್ದಾಗ ಮೂವರು ಪುರುಷ ಪ್ರವಾಸಿಗರು ದಂಪತಿ ಜೊತೆಗೆ ಇದ್ದುದ್ದನ್ನು ನೋಡಿದೆ. ಮೇ.22ರಂದು ದಂಪತಿಯನ್ನ ನೊಂಗ್ರಿಯಾಟ್‌ಗೆ ಕರೆದೊಯ್ಯಲು ನಾನು ಮುಂದಾದೆ. ಆದರೆ, ಅವರು ನನ್ನ ಗೈಡ್ ಸೇವೆಯನ್ನ ಒಳ್ಳೆಯ ಮಾತುಗಳಿಂದಲೇ ಬೇಡವೆಂದರು. ಇದೇ ವೇಳೆ ಭಾ ವಾನ್ಸಾಯಿ ಎಂಬ ಇನ್ನೊಬ್ಬ ಗೈಡ್‌ನನ್ನು ನೇಮಕ ಮಾಡಿಕೊಂಡ ದಂಪತಿ, ಶಿವಾರಾ ಹೋಂಸ್ಟೇಯಲ್ಲಿ ರಾತ್ರಿ ಕಳೆದು, ಮರುದಿನ ಅವರಿಬ್ಬರೇ ಹೊರಬಂದರು. ನಾನು ಅವರನ್ನು ಮತ್ತೆ ನೋಡಿದಾಗ ನಾಲ್ವರು ಪುರುಷರಿದ್ದರು, ಆದ್ರೆ ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದರು. ಹಾಗಾಗಿ ನನಗೆ ಅದನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಆಗಲಿಲ್ಲ. ಪುರುಷರು ಮೌಲಖಿಯಾತ್ ತಲುಪಿದಾಗ, ದಂಪತಿಗಳ ಸ್ಕೂಟರ್ ಅಲ್ಲಿ ಇರಲಿಲ್ಲ ಎಂದು ಗೈಡ್ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಪೊಲೀಸ್ ತನಿಖೆಯ ದಿಕ್ಕನ್ನೇ ಬದಲಿಸಿತ್ತು.

Meghalaya Honeymoon 6

ಸುಳ್ಳಿನ ನಾಟಕವಾಡಿದ್ದ ಸೋನಂ
ಜೂ.9ರ ತಡರಾತ್ರಿ 1:42ರ ವೇಳೆ ಘಾಜಿಪುರ ಜಿಲ್ಲೆಯ ನಂದಗಂಜ್‌ನ ಡಾಬಾದಲ್ಲಿ ಭಯಭೀತ ಸ್ಥಿತಿಯಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದಾರೆ ಎಂಬ ಮಾಹಿತಿ ಬಂದಿತ್ತು. ಬಳಿಕ ಪೊಲೀಸರು ಸ್ಥಳಕ್ಕೆ ತಲುಪಿದಾಗ ಆಕೆ ತನ್ನನ್ನ ಸೋನಮ್‌ ರಘುವಂಶಿ ಎಂದು ಗುರುತಿಸಿಕೊಂಡಳು. ತನ್ನ ಪತಿಯೊಂದಿಗೆ ಮೇಘಾಲಯಕ್ಕೆ ಹೋಗಿರುವುದಾಗಿ ಹೇಳಿಕೊಂಡಿದ್ದಳು, ಡಾಬಾ ಮಾಲೀಕನ ಮುಂದೆಯೂ ಸುಳ್ಳಿನ ನಾಟಕವಾಡಿದ್ದಳು. ಅಲ್ಲಿ ಕೆಲ ಅಪರಿಚಿತ ವ್ಯಕ್ತಿಗಳು ತನ್ನ ಪತಿಯನ್ನು ಕೊಂದರು. ಬಳಿಕ ನನ್ನನ್ನ ಕಿಡ್ನ್ಯಾಪ್‌ ಮಾಡಿ ಇಲ್ಲಿ ಬಿಟ್ಟುಹೋದ್ರು ಎಂದು ಕಥೆ ಕಟ್ಟಿದ್ದಳು ಸೋನಮ್‌.

ಪ್ರೀ ಪ್ಲ್ಯಾನ್ಡ್‌ ಮರ್ಡರ್‌
ಕಿಡ್ನ್ಯಾಪ್‌ ಮಾಡಿದ್ಮೇಲೆ ನನ್ನ ಚಿನ್ನಾಭರಣ ದೋಚಿದ್ರು, ಪ್ರಜ್ಞೆ ಬರುತ್ತಿದ್ದಂತೆ ಘಾಜಿಪುರದ ಡಾಬಾ ಬಳಿ ಕತ್ತಲೆ ಕೋಣೆಯಲ್ಲಿ ಬಿಟ್ಟು ಹೋದ್ರು ಅಂತೆಲ್ಲ ಕಥೆ ಕಟ್ಟಿದ್ದಳು. ಆದ್ರೆ ಪೊಲೀಸರು ಇದ್ಯಾವುದನ್ನೂ ನಂಬಲಿಲ್ಲ. ಕೊಲೆಗಾರರು ಪತ್ತೆಯಾದ ಕೆಲವೇ ಸಮಯದಲ್ಲಿ ಸೋನಮ್‌ ಕೂಡ ಕಾಣಿಸಿಕೊಂಡಿದ್ದರಿಂದ ಅನುಮಾನ ಹೆಚ್ಚಾಗಿಯೇ ಇತ್ತು. ಆಕೆಯನ್ನು ಬಂಧಿಸಿದ ಬಳಿಕ ಇದು ಪೂರ್ವಯೋಜನೆಯಾಗಿತ್ತು ಎಂಬುದನ್ನು ಪೂರ್ವ ಖಾಸಿ ಹಿಲ್ಸ್ ಎಸ್ಪಿ ವಿವೇಕ್ ಸಿಮ್ ಬಹಿರಂಗಪಡಿಸಿದ್ದರು. ಪೊಲೀಸರು ಆಕೆಯನ್ನ ತೀವ್ರ ವಿಚಾರನೆಗೆ ಒಳಪಡಿಸಿದ ಬಳಿಕ ಸೋನಮ್‌ ಖುದ್ದು ತಪ್ಪೊಪ್ಪಿಕೊಂಡಿದ್ದಳು. ಇದನ್ನೂ ಓದಿ: ಯುವತಿಯನ್ನು ಪ್ರೀತಿಸಿ, ಮದುವೆಯಾಗಿ ಕಿರುಕುಳ ಆರೋಪ – ಮಾಜಿ ಕಾರ್ಪೊರೇಟರ್ ದಂಪತಿ, ಪುತ್ರನ ವಿರುದ್ಧ FIR

TAGGED:AffairHoneymoon MurderMeghalayaMeghalaya PoliceRaja RaghuvanshiSonam Raghuvanshiಮೇಘಾಲಯಮೇಘಾಲಯ ಪೊಲೀಸ್‌ಹನಿಮೂನ್ಹನಿಮೂನ್‌ ಮರ್ಡರ್‌
Share This Article
Facebook Whatsapp Whatsapp Telegram

Cinema news

Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories

You Might Also Like

Chalavadi Narayanswamy
Bengaluru City

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ ಆಗ್ರಹ – ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Public TV
By Public TV
49 minutes ago
POCSO Special Court
Bengaluru City

ಬೆಂಗಳೂರು | ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಅರೆಸ್ಟ್‌

Public TV
By Public TV
56 minutes ago
TIRUPATI LADDU
Latest

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Public TV
By Public TV
1 hour ago
KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
2 hours ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
2 hours ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?