[Ruby_E_Template id="1354606"]
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

8 ನಗರಗಳಲ್ಲಿ ನೈಟ್‍ಕರ್ಫ್ಯೂ ಮೊದಲ ದಿನ ಅಂತ್ಯ – ಕಂಡಕಂಡಲ್ಲಿ ಬ್ಯಾರಿಕೇಡ್, ಖಾಕಿ ಗಸ್ತು

Public TV
Last updated: April 11, 2021 7:37 am
Public TV
3 Min Read

– ದಂಡ, ಲಾಠಿ ಏಟು, ವಾಹನ ಸೀಜ್

ಬೆಂಗಳೂರು: ರಾಜ್ಯದ 7 ಜಿಲ್ಲೆಗಳ 8 ನಗರಗಳಲ್ಲಿ ಮೊದಲ ದಿನದ ನೈಟ್‍ಕರ್ಫ್ಯೂ ಮುಕ್ತಾಯವಾಗಿದ್ದು, ಇನ್ನೂ 9 ದಿನ ನೈಟ್‍ಕರ್ಫ್ಯೂ ಇರಲಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ತುಮಕೂರು, ಕಲಬುರಗಿ, ಬೀದರ್, ಉಡುಪಿ, ಮಣಿಪಾಲದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‍ಕರ್ಫ್ಯೂ ಜಾರಿಯಲ್ಲಿದೆ. ಏಪ್ರಿಲ್ 20ರವರೆಗೆ ನೈಟ್‍ಕರ್ಫ್ಯೂ ಇರಲಿದೆ.

ನೈಟ್‍ಕರ್ಫ್ಯೂ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆಗೆ ಎಲ್ಲ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಿದ್ದವು. ಹೋಟೆಲ್, ಬೀದಿಬದಿ ಹೋಟೆಲ್‍ಗಳು, ಅಂಗಡಿ ಮುಂಗಟ್ಟುಗಳು, ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್, ಮಾಲ್, ಥಿಯೇಟರ್ ಎಲ್ಲವೂ 10 ಗಂಟೆಯಷ್ಟೊತ್ತಿಗೆ ಬಾಗಿಲು ಹಾಕಿದ್ದವು. ನೈಟ್‍ಕರ್ಫ್ಯೂ ಹೇರಿಕೆ ಆಗಿರುವ ನಗರಗಳಲ್ಲಿ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಪೊಲೀಸರು ನಾಕಾಬಂಧಿ ಹಾಕಿದ್ದರು. ಮುಖ್ಯರಸ್ತೆ, ಫ್ಲೈಓವರ್ ಗಳನ್ನು ಬಂದ್ ಮಾಡಿದ್ದರು. ಆದರೆ ಖಾಸಗಿ ಕಂಪನಿಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರು ಐಡಿ ಕಾರ್ಡ್ ತೋರಿಸಿದರೆ ಓಡಾಡಲು ಅವಕಾಶ ಇದೆ. ಝೊಮ್ಯಾಟೋ, ಸ್ವಿಗ್ಗಿ ಸೇರಿದಂತೆ ಆನ್‍ಲೈನ್ ಹೋಂ ಡೆಲಿವರಿ ಸೇವೆ, ಆಸ್ಪತ್ರೆ, ಔಷಧಿ ಅಂಗಡಿಗಳಿಗೆ ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ.

ಬೆಂಗಳೂರು: ನೈಟ್‍ಕರ್ಫ್ಯೂ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆಯ ಬಳಿಕ ಬೆಂಗಳೂರು ನಗರ ಬಹುತೇಕ ಬಿಕೋ ಎನ್ನುತ್ತಿತ್ತು. ರಾಜಧಾನಿಯ ಪ್ರಮುಖ ಫ್ಲೈಓವರ್ ಗಳು, ಮುಖ್ಯರಸ್ತೆಗಳನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದರು. 10 ಗಂಟೆ ಬಳಿಕವೂ ಓಡಾಡ್ತಿದ್ದ ವಾಹನ ಸವಾರರನ್ನು ತಪಾಸಣೆ ಬಿಗಿ ಆಗಿತ್ತು. ಯಶವಂತಪರದಲ್ಲಿ ಮಾಸ್ಕ್ ಹಾಕದೇ ಒಂದೇ ಕಾರಲ್ಲಿ ಪ್ರಯಾಣಿಸ್ತಿದ್ದ ನಾಲ್ವರಿಗೆ ಪೊಲೀಸರು ದಂಡ ವಿಧಿಸಿದರು. ನೈಟ್‍ಪಾರ್ಟಿಯ ಹಾಟ್‍ಸ್ಪಾಟ್ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್‍ಸ್ಟ್ರೀಟ್, ಇಂದಿರಾ ನಗರದಲ್ಲಿ ರಾತ್ರಿ 10 ಗಂಟೆಯ ಬಳಿಕ ಎಲ್ಲವೂ ಬಂದ್ ಆಗಿತ್ತು. ಬನ್ನೇರುಘಟ್ಟದಲ್ಲಿ ಪೊಲೀಸರು ಬೈಕ್‍ಗಳನ್ನು ವಶಕ್ಕೆ ಪಡೆದು ದಂಡ ಹಾಕಿದರು.

ಕಲಬುರಗಿ: ಕಲಬುರಗಿ ನಗರದಲ್ಲೂ ನೈಟ್‍ಕರ್ಫ್ಯೂ ಬಿಗಿಯಾಗಿತ್ತು. ನೈಟ್‍ಕರ್ಫ್ಯೂ ವೇಳೆಯೂ ಸಂಚರಿಸ್ತಿದ್ದ ಬೈಕ್ ಸವಾರನಿಗೆ ಪೊಲೀಸ್ ಅಧಿಕಾರಿಯೊಬ್ಬರು ಲಾಠಿಯಿಂದ ಬಾರಿಸಿದರು. ರಾತ್ರಿ 11 ಗಂಟೆ ವೇಳೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ನೈಟ್‍ಕರ್ಫ್ಯೂ ನಡುವೆಯೂ ಓಡಾಡಿದರು. ಆದರೆ ಅವರ ವಾಹನವನ್ನು ಪೊಲೀಸರು ತಡೆಯಲಿಲ್ಲ. ಬಸವಕಲ್ಯಾಣದಲ್ಲಿ ಉಪ ಚುನಾವಣೆ ಪ್ರಚಾರ ಮುಗಿಸಿಕೊಂಡು ಖಾಸಗಿ ಕಾರ್ಯಕ್ರಮಕ್ಕಾಗಿ ಜಮೀರ್ ಕಲಬುರಗಿಗೆ ಬಂದಿದ್ದರು.

ಮಂಗಳೂರು: ನೈಟ್‍ಕರ್ಫ್ಯೂ ವೇಳೆ ಮಂಗಳೂರಲ್ಲಿ ಪೊಲೀಸ್ ಜೀಪ್ ಮೇಲೆ ದುಷ್ಕರ್ಮಿಯೊಬ್ಬ ಕಲ್ಲು ತೂರಾಟ ನಡೆಸಿದ. ತೊಕ್ಕೊಟ್ಟು ಫ್ಲೈಓವರ್ ಕೆಳಗೆ ನಿಲ್ಲಿಸಿದ ಪೊಲೀಸ್ ಜೀಪ್‍ಗೆ ಕಲ್ಲು ಎಸೆದು ಬಳಿಕ ಪಕ್ಕದಲ್ಲೇ ಇದ್ದ ದೇವಸ್ಥಾನಕ್ಕೆ ನುಗ್ಗಿದ. ಆತನನ್ನು ಹಿಡಿದ ಸ್ಥಳೀಯರು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದರು. ನೈಟ್‍ಕರ್ಫ್ಯೂ ಹಿನ್ನೆಲೆಯಲ್ಲಿ ಖುದ್ದು ಪೊಲೀಸ್ ಆಯುಕ್ತ ಶಶಿಕುಮಾರ್ ಗಸ್ತು ಕೈಗೊಂಡರು. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ನಾಕಾಬಂಧಿ, ತಪಾಸಣೆಯನ್ನು ಬಿಗಿಗೊಳಿಸಿದ್ದರು. ಈ ವೇಳೆ ಯುವಕನೊಬ್ಬ ತನ್ನನ್ನು ಬಿಡುವಂತೆ ಪೊಲೀಸರ ಜೊತೆಗೆ ವಾಗ್ವಾದಕ್ಕಿಳಿದ ಘಟನೆಯೂ ನಡೆಯಿತು.

ಮೈಸೂರು: ಮೈಸೂರು ನಗರದಲ್ಲಿ ನೈಟ್‍ಕರ್ಫ್ಯೂ ಬಿಗಿ ಆಗಿತ್ತು. ರಾತ್ರಿ 10 ಗಂಟೆ ಬಳಿಕ ಜನರ ಓಡಾಟ ಸ್ತಬ್ಧವಾಗಿತ್ತು. ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ನೇತೃತ್ವದಲ್ಲಿ ಅಶ್ವಾರೋಹಿ ದಳ ಗಸ್ತು ತಿರುಗಿತು. ನಗರದಲ್ಲಿ ನೈಟ್‍ಕರ್ಫ್ಯೂ ಜಾರಿಗಾಗಿಯೇ 1,200 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ನಗರ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ನಾಕಾಬಂಧಿ, ತಪಾಸಣೆ ಎಲ್ಲವೂ ಬಿಗಿ ಆಗಿತ್ತು.

ಬೀದರ್: ಬೀದರ್ ನಗರದಲ್ಲೂ ನೈಟ್‍ಕರ್ಫ್ಯೂ ಜಾರಿ ಬಿಗಿ ಆಗಿತ್ತು. ನೈಟ್‍ಕರ್ಫ್ಯೂ ಉಲ್ಲಂಘಿಸಿ ಓಡಾಡ್ತಿದ್ದವರಿಗೆ ಪೊಲೀಸರು ದಂಡ ಹಾಕಿದರು. ಕೆಲವರಿಗೆ ಎಚ್ಚರಿಕೆಯನ್ನೂ ನೀಡಿದರು. ನಗರದ ಬಸವೇಶ್ವರ ವೃತ, ಅಂಬೇಡ್ಕರ್ ವೃತ, ಹರಳಯ್ಯ ವೃತ, ಚೌಬಾರ್, ಗವಾನ್ ಚೌಕ್, ಬೊಮ್ಮಗೊಂಡೆಶ್ವರ ವೃತದಲ್ಲಿ ಪೊಲೀಸರ ತಪಾಸಣೆ ಹೆಚ್ಚಿತ್ತು.

ಉಡುಪಿ: ಉಡುಪಿ, ಮಣಿಪಾಲದಲ್ಲೂ ಮೊದಲ ದಿನ ನೈಟ್‍ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಆಗಿತ್ತು. ವಿದೇಶಿ, ಹೊರರಾಜ್ಯದ ವಿದ್ಯಾರ್ಥಿಗಳೇ ಹೆಚ್ಚಿರುವ ಮಣಿಪಾಲ ತಡರಾತ್ರಿವರೆಗೂ ಗಿಜಿಗುಡುವ ನಗರ. ಆದ್ರೆ ನೈಟ್‍ಕರ್ಫ್ಯೂ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆಗೆ ಎಲ್ಲವೂ ಸ್ತಬ್ಧ ಆಗಿತ್ತು. ಖುದ್ದು ಜಿಲ್ಲಾಧಿಕಾರಿ ಜಗದೀಶ್ ನೈಟ್‍ಕರ್ಫ್ಯೂ ಉಲ್ಲಂಘಿಸಿ ಓಡಾಡ್ತಿದ್ದವರಿಗೆ ಎಚ್ಚರಿಕೆ ನೀಡಿದರು.

TAGGED:Corona CurfewCorona VirusCovid 19karnatakaKarnataka Night CurfewNightcurfewPublic Tಕರ್ನಾಟಕಕರ್ನಾಟಕ ನೈಟ್ ಕರ್ಫ್ಯೂಕೊರೊನಾ ಕರ್ಫ್ಯೂಕೊರೊನಾ ವೈರಸ್ಕೋವಿಡ್ 19ನೈಟ್‍ಕರ್ಫ್ಯೂಪಬ್ಲಿಕ್ ಟಿವಿ
Leave a Comment

Leave a Reply

Your email address will not be published. Required fields are marked *

You Might Also Like

Latest

ಮೃತದೇಹದಲ್ಲೂ ಹಮಾಸ್‌ ಕಳ್ಳಾಟ, ಇಸ್ರೇಲ್‌ ಕೆಂಡಾಮಂಡಲ – ಗಾಜಾ ಮೇಲೆ ಭಾರೀ ದಾಳಿಗೆ ಆದೇಶ

Public TV
By Public TV
4 hours ago
Latest

282 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ – ಚಂಡಮಾರುತದ ಹೊಡೆತಕ್ಕೆ ಜಮೈಕಾ ತತ್ತರ

Public TV
By Public TV
4 hours ago
Big Bulletin

ಬಿಗ್‌ ಬುಲೆಟಿನ್‌ 28 October 2025 ಭಾಗ-1

Public TV
By Public TV
5 hours ago
Big Bulletin

ಬಿಗ್‌ ಬುಲೆಟಿನ್‌ 28 October 2025 ಭಾಗ-2

Public TV
By Public TV
5 hours ago
Big Bulletin

ಬಿಗ್‌ ಬುಲೆಟಿನ್‌ 28 October 2025 ಭಾಗ-3

Public TV
By Public TV
5 hours ago
Districts

Mysuru| ರೈತನ ಬಲಿ ಪಡೆದಿದ್ದ ಹುಲಿ ಸೆರೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account