ಬೆಂಗಳೂರು: ಉಪಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸೋಮವಾರರಿಂದ ಬೆಂಗಳೂರು ವ್ಯಾಪ್ತಿಯ ನಾಲ್ಕು ಕ್ಷೇತ್ರಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸೋಮವಾರ ಬೆಂಗಳೂರು ನಗರದ ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹೀಗಾಗಿ ನಾಮಪತ್ರ ಸಲ್ಲಿಕೆಯಾಗಲಿರುವ ಚುನಾವಣಾ ಕಚೇರಿ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಸೋಮವಾರ ಬೆಳಗ್ಗೆ 10 ಗಂಟೆಯಿಂದ ನವೆಂಬರ್ 18ರ ಸಂಜೆ 4 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಉಪಚುನಾವಣೆಯಲ್ಲಿ ಮೆರವಣಿಗೆ, ಸಂಭ್ರಮಾಚರಣೆ, ಪ್ರತಿಭಟನೆ, ಗುಂಪು ಸೇರುವುದು ಮತ್ತು ಆಯುಧಗಳನ್ನ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಕಚೇರಿ ಎಲ್ಲಿದೆ?
ಕೆಆರ್ ಪುರ – ಹಳೇ ಮದ್ರಾಸ್ ರಸ್ತೆಯಲ್ಲಿರುವ ಕಂದಾಯ ಇಲಾಖೆಯೆ ಕಚೇರಿ
ಯಶವಂತಪುರ – ಕೆಂಗೇರಿ ಉಪನಗರದಲ್ಲಿರುವ ಕರ್ನಾಟಕ ಬ್ಯಾಂಕ್ ಕಟ್ಟಡದ ಎರಡನೇ ಮಹಡಿ
ಮಹಾಲಕ್ಷ್ಮಿ ಲೇಔಟ್ – ರಾಜಾಜಿನಗರ ಆರ್ಟಿಒ ಕಚೇರಿ ಸಂಕೀರ್ಣ
ಶಿವಾಜಿನಗರ – ಮತದಾರರ ನೋಂದಣಾಧಿಕಾರಿಗಳ ಕಚೇರಿ, ಕ್ವೀನ್ಸ್ ರಸ್ತೆ