ಇಂದೋರ್: ಮುತ್ತಾತನೊಬ್ಬ ತನ್ನ ಮರಿಮೊಮ್ಮಗನನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಮಧ್ಯಪ್ರದೇಶದ ಇಂದೋರ್ (Indore) ನಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ.
ಮೃತನನ್ನು ಶ್ರೇಯಾಂಶ್ (4) ಎಂದು ಗುರುತಿಸಲಾಗಿದೆ. ಈತನನ್ನು ಶೋಭರಾಮ್ ಚೌಧರಿ(80) ಕೊಲೆ ಮಾಡಿದ್ದು, ಇದೀಗ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮತ್ತೆ ಮಣಿಪುರದಲ್ಲಿ ಘರ್ಷಣೆ ಕರ್ಫ್ಯೂ ಜಾರಿ – ಇಂಟರ್ನೆಟ್ ಬಂದ್
ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಪೊಲೀಸರು ತನಿಖೆಯ ಬಳಿಕ ಹೇಳಿದ್ದಾರೆ. ಆಗಾಗ ನಡೆಯುತ್ತಿದ್ದ ಕೌಟುಂಬಿಕ ಕಲಹದ ಕಾರಣ ತಾಯಿ ನೀತು ಜೊತೆ ಶ್ರೇಯಾಂಶ್ ತವರು ಮನೆಯಲ್ಲಿ ನೆಲೆಸಿದ್ದರು. ಆದರೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ನೀತು ಹಾಗೂ ಆಕೆಯ ಪುತ್ರನನ್ನು ಹೊರೆ ಎಂದು ಪರಿಗಣಿಸಿ ತವರು ಮನೆಯಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದರು.
ಈ ವೇಳೆ ಆರೋಪಿ ಶೋಭರಾಮ್ (Shobharam) ಬಳಿ ಆಕೆಯ ಪೋಷಕರು ಮಗು ಬೆಳೆದು ದೊಡ್ಡವನಾದ ಮೇಲೆ ಆಸ್ತಿಯಲ್ಲಿ ಪಾಲು ಕೇಳಬಹುದು ಎಂದು ಹೇಳಿದ್ದಾರೆ. ಇದನ್ನು ಅರಿತ ಆರೋಪಿ ಮಗುವಿನಿಂದ ಸಮಸ್ಯೆಯಾಗುತ್ತಿದೆ ಎಂದು ಭಾವಿಸಿ ಆತನನ್ನು ಕೊಲೆ ಮಾಡಿದರೆ ಇದಕ್ಕೊಂದು ಅಂತ್ಯ ಹಾಡಬಹುದು ಎಂದು ಐಡಿಯಾ ಹುಡುಕಿದ್ದಾನೆ. ಅಂತೆಯೇ ಪತ್ರಿ ರಾತ್ರಿ ಮರಿಮೊಮ್ಮಗ ತನ್ನ ಜೊತೆ ಮಲಗುತ್ತಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿ ಉಸಿರುಗಟ್ಟಿಸಿ ಕೊಂದಿದ್ದಾನೆ.
ಇತ್ತ ಪ್ರಕರಣ ಸಂಬಂಧ ಶ್ರೇಯಾಂಸ್ ಕುಟುಂಬಸ್ಥರು ನೀಡಿರುವ ಹೇಳಿಕೆಯನ್ನು ಆಧರಿಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಿತುಕಾ ವಸಲ್ ತಿಳಿಸಿದ್ದಾರೆ.