ಬೆಂಗಳೂರು: ರಾಜ್ಯದಲ್ಲಿ ಇಂದು 803 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಪಾಸಿಟಿವಿಟಿ ರೇಟ್ ಶೇ.0.80ಕ್ಕೆ ಹೆಚ್ಚಳವಾಗಿದೆ.
ಇಂದು 802 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 16,656 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 29,61,735 ಜನರಿಗೆ ಸೋಂಕು ತಗುಲಿದೆ. 29,07,548 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.80ಕ್ಕೆ ತಲುಪಿದೆ. ಕೋವಿಡ್-19 ಮರಣ ಪ್ರಮಾಣ ಶೇ.2.11ರಷ್ಟಿದೆ. ಇದನ್ನೂ ಓದಿ: ಆರೋಗ್ಯ ಕವಚ ಸೇವೆಯಡಿ 120 ಅಂಬುಲೆನ್ಸ್ ಸೇರ್ಪಡೆ – ಸಿಎಂ ಲೋಕಾರ್ಪಣೆ
ಒಟ್ಟು 1,00,176 ಸ್ಯಾಂಪಲ್ (ಆರ್ಟಿ ಪಿಸಿಆರ್ 72,507 + 27,669 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 255 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 6 ಜನ ಮರಣ ಹೊಂದಿದ್ದಾರೆ. 107 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೀದರ್, ಗದಗ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 1, ಬಳ್ಳಾರಿ 4, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 255, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 14, ಚಿತ್ರದುರ್ಗ 4, ದಕ್ಷಿಣ ಕನ್ನಡ 153, ದಾವಣಗೆರೆ 9, ಧಾರವಾಡ 9, ಹಾಸನ 30, ಹಾವೇರಿ 1, ಕಲಬುರಗಿ 2, ಕೊಡಗು 63, ಕೋಲಾರ 8, ಮಂಡ್ಯ 11, ಮೈಸೂರು 36, ರಾಯಚೂರು 2, ರಾಮನಗರ 1, ಶಿವಮೊಗ್ಗ 24, ತುಮಕೂರು 22, ಉಡುಪಿ 90 ಮತ್ತು ಉತ್ತರ ಕನ್ನಡದಲ್ಲಿ 28 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.