ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಇಂದು 836 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 15 ಜನರನ್ನು ಮಹಾಮಾರಿ ಬಲಿ ಪಡೆದಿದೆ. 7 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಇಂದು 852 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 13,590 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,71,044 ಜನರಿಗೆ ಕೊರೊನಾ ಸೋಂಕು ತಗುಲಿದೆ. 29,19,742 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.57ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.79ರಷ್ಟಿದೆ.
ಇಂದು ರಾಜ್ಯದಲ್ಲಿ ಒಟ್ಟು 1,59,049 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,45,085 ಸ್ಯಾಂಪಲ್ (ಆರ್ಟಿ ಪಿಸಿಆರ್ 1,18,033+ 27,052 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 310 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಮರಣ ಹೊಂದಿದ್ದಾರೆ. 239 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳಿಗೆ ಲಸಿಕೆ: ಪ್ರಭು ಚವ್ಹಾಣ್
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಚಿಕ್ಕಮಗಳೂರು, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 01, ಬಳ್ಳಾರಿ 03, ಬೆಳಗಾವಿ 07, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 310, ಬೀದರ್ 03, ಚಾಮರಾಜನಗರ 05, ಚಿಕ್ಕಮಗಳೂರು 26, ಚಿತ್ರದುರ್ಗ 2, ದಕ್ಷಿಣ ಕನ್ನಡ 106, ದಾವಣಗೆರೆ 2, ಧಾರವಾಡ 3, ಹಾಸನ 47, ಕಲಬುರಗಿ 5, ಕೊಡಗು 37, ಕೋಲಾರ 15, ಮಂಡ್ಯ 18, ಮೈಸೂರು 78, ರಾಮನಗರ 3, ಶಿವಮೊಗ್ಗ 22, ತುಮಕೂರು 25, ಉಡುಪಿ 69 ಹಾಗೂ ಉತ್ತರ ಕನ್ನಡ 32 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.