ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಇಂದು 847 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 20 ಜನರನ್ನು ಮಹಾಮಾರಿ ಬಲಿ ಪಡೆದಿದೆ. 6 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಇಂದು 946 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 13,621 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,70,208 ಜನರಿಗೆ ಕೊರೊನಾ ಸೋಂಕು ತಗುಲಿದೆ. 29,18,890 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.57ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.2.36ರಷ್ಟಿದೆ. ಇದನ್ನೂ ಓದಿ: ಭಾರತದ ಎಚ್ಚರಿಕೆ ಬೆನ್ನಲ್ಲೇ ಇಂಗ್ಲೆಂಡ್ನ ಅನುಮೋದಿತ ಲಸಿಕೆಗಳ ಪಟ್ಟಿಗೆ ಕೋವಿಶೀಲ್ಡ್ ಸೇರ್ಪಡೆ
ಇಂದು ರಾಜ್ಯದಲ್ಲಿ ಒಟ್ಟು 7,82,106 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,46,772 ಸ್ಯಾಂಪಲ್ (ಆರ್ ಟಿ ಪಿಸಿಆರ್ 1,16,216 + 30,556 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 312 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 6 ಜನ ಮರಣ ಹೊಂದಿದ್ದಾರೆ. 219 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಬಳ್ಳಾರಿ, ಬೀದರ್, ಹಾವೇರಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 23, ಬೆಂಗಳೂರು ನಗರ 312, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 31, ಚಿತ್ರದುರ್ಗ 3, ದಕ್ಷಿಣ ಕನ್ನಡ 108, ದಾವಣಗೆರೆ 8, ಧಾರವಾಡ 4, ಗದಗ 3, ಹಾಸನ 46, ಕಲಬುರಗಿ 3, ಕೊಡಗು 26, ಕೋಲಾರ 14, ಮಂಡ್ಯ 18, ಮೈಸೂರು 74, ರಾಯಚೂರು 1, ರಾಮನಗರ 1, ಶಿವಮೊಗ್ಗ 52, ತುಮಕೂರು 25, ಉಡುಪಿ 48, ಉತ್ತರ ಕನ್ನಡ 22 ಹಾಗೂ ವಿಜಯಪುರದಲ್ಲಿ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.