ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು 8ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ

Public TV
0 Min Read
GIRL

ಚಿಕ್ಕಬಳ್ಳಾಪುರ: ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಡಣದ ಕೊತ್ತಕೋಟೆ ರಸ್ತೆಯಲ್ಲಿ ನಡೆದಿದೆ.

CKB GIRL 3

ಪುಷ್ಪಾ-ನಾಗರಾಜ್ ದಂಪತಿಯ ಪುತ್ರಿಯಾದ 14 ವರ್ಷದ ಮಧುರಿಮಾ ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ. ತಾಯಿ ಪುಷ್ಪಾ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಬಾಗೇಪಲ್ಲಿ ಪಟ್ಟಣದ ಯಂಗ್ ಇಂಡಿಯಾ ಖಾಸಗಿ ಶಾಲೆಯಲ್ಲಿ ಮಧುರಿಮಾ ವ್ಯಾಸಂಗ ಮಾಡುತ್ತಿದ್ದಳು.

ಚೆನ್ನಾಗಿ ಓದುವಂತೆ ತಾಯಿ ಬುದ್ಧಿವಾದ ಹೇಳಿದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತ ಹೇಳಲಾಗ್ತಿದೆ. ಬಾಗೇಪಲ್ಲಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಈ ಸಂಬಂಧ ಇನ್ನೂ ದೂರು ದಾಖಲಾಗಿಲ್ಲ.

CKB GIRL

Share This Article
Leave a Comment

Leave a Reply

Your email address will not be published. Required fields are marked *