ಬೆಂಗಳೂರು: ಬಜೆಟ್ ಸನಿಹದಲ್ಲಿ ರಾಜ್ಯ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದೆ. 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಕೋಲಾರ, ಮಂಡ್ಯ, ಉತ್ತರ ಕನ್ನಡ, ಚಿಕ್ಕಮಗಳೂರು, ರಾಯಚೂರು, ತುಮಕೂರು ಜಿಲ್ಲೆಗಳ ಡಿಸಿಗಳನ್ನು ಬದಲಾಯಿಸಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆಯನ್ನು ವರ್ಗಾವಣೆ ಮಾಡಿ, ತ್ರಿಲೋಕ್ ಚಂದ್ರರನ್ನು ನೇಮಿಸಲಾಗಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿದ್ದ ರಶ್ಮಿ ಮಹೇಶ್ ಅವರನ್ನು ಹಿಂದುಳಿದ ವರ್ಗಗಳ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ವರ್ಗಾವಣೆಗೊಳಿಸಲಾಗಿದ್ದು, ಸ್ಥಳ ತೋರಿಸಿಲ್ಲ. ಡಾ. ತ್ರಿಲೋಕ್ ಚಂದ್ರ ಅವರನ್ನ ನೂತನ ಆರೋಗ್ಯ ಇಲಾಖೆ ಆಯುಕ್ತರನ್ನಾಗಿ ಮಾಡಲಾಗಿದೆ