Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 90 ದಿನದಲ್ಲಿ ಉದ್ದಿಮೆದಾರರ ಮನೆ ಬಾಗಿಲಿಗೆ ಎನ್‍ಒಸಿ: ಸಚಿವ ನಿರಾಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 90 ದಿನದಲ್ಲಿ ಉದ್ದಿಮೆದಾರರ ಮನೆ ಬಾಗಿಲಿಗೆ ಎನ್‍ಒಸಿ: ಸಚಿವ ನಿರಾಣಿ

Bengaluru City

90 ದಿನದಲ್ಲಿ ಉದ್ದಿಮೆದಾರರ ಮನೆ ಬಾಗಿಲಿಗೆ ಎನ್‍ಒಸಿ: ಸಚಿವ ನಿರಾಣಿ

Public TV
Last updated: March 17, 2021 8:58 pm
Public TV
Share
4 Min Read
murugesh nirani
SHARE

– ಒನ್ ಟೈಮ್ ಸೆಟ್ಲ್ ಮೆಂಟ್ ಯೋಜನೆ ಪ್ರಾರಂಭ

ಬೆಂಗಳೂರು: ಕಂದಾಯ, ಸಾರಿಗೆ, ಅರಣ್ಯ ಮತ್ತು ಪರಿಸರ ಇಲಾಖೆ ಒಳಗೊಂಡ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತಂದು 90 ದಿನಗಳಲ್ಲಿ ಉದ್ಯಮಿಗಳ ಮನೆ ಬಾಗಿಲಿಗೆ ಎನ್‍ಒಸಿ (ನಿರಪೇಕ್ಷಣ ಪತ್ರ) ತಲುಪಿಸುವ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಘೋಷಣೆ ಮಾಡಿದರು.

ನಗರದ ಅರಮನೆ ಮೈದಾನದಲ್ಲಿ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ಸ್ ಉದ್ಯಮಿಗಳಿಗೆ ಹಮ್ಮಿಕೊಂಡಿದ್ದ ಸುರಕ್ಷತಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

murugesh nirani 2 1

ಕಲ್ಲು ಕ್ವಾರಿ ಮತ್ತು ಗಣಿಗಾರಿಕೆ ನಡೆಸುವ ಉದ್ಯಮಿಗಳಿಗೆ ಅನುಕೂಲವಾಗುವಂತೆ ನಾಲ್ಕು ಇಲಾಖೆಗಳನ್ನು ಒಳಗೊಂಡ ಏಕಗವಾಕ್ಷಿ ಪದ್ಧತಿಯನ್ನು ಜಾರಿ ಮಾಡಿ ಅರ್ಜಿ ಸಲ್ಲಿಸಿದ 90 ದಿನದೊಳಗೆ ಉದ್ಯಮಿದಾರರ ಮನೆ ಬಾಗಿಲಿಗೆ ಇಲಾಖೆ ವತಿಯಿಂದಲೇ ಎನ್‍ಒಸಿ ಪತ್ರಗಳನ್ನು ತಲುಪಿಸುವ ವ್ಯವಸ್ಥೆ ಜಾರಿ ಮಾಡಲಿದ್ದೇವೆ. ಉದ್ದಿಮೆದಾರರು ಇಲಾಖೆಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ಕರಾವಳಿ ಭಾಗದಲ್ಲಿ ಪ್ರತ್ಯೇಕವಾಗಿ ಮಂಗಳೂರಿನಲ್ಲಿ ಹಾಗೂ ರಾಜ್ಯದ ನಾಲ್ಕು ಕಂದಾಯ ಭಾಗಗಳಲ್ಲಿ ಗಣಿ ಅದಾಲ್ ನಡೆಸಲಾಗುವುದು. ಇದರಿಂದ ಸ್ಥಳದಲ್ಲೇ ಉದ್ದಿಮೆದಾರರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಅನುಕೂಲವಾಗುತ್ತದೆ ಎಂದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಜನಸ್ನೇಹಿ ಹಾಗೂ ಜನಪರವಾಗಿ ಇರಬೇಕೆಂಬ ಗುರಿ ಇಟ್ಟುಕೊಂಡಿದೆ. 24/7 ಕೆಲಸ ಮಾಡಬೇಕು, ಉದ್ದಿಮೆದಾರರಿಗೆ ಯಾವುದೇ ರೀತಿಯ ಕಾನೂನಿನ ತೊಡಕು ಉಂಟಾಗದಂತೆ ಸರಳೀಕರಣವಾಗಿ ಉದ್ಯಮ ನಡೆಸಲು ವೇದಿಕೆ ಕಲ್ಪಿಸಿಕೊಡುವುದು ನಮ್ಮ ಮುಖ್ಯ ಗುರಿ ಎಂದರು.

ಉದ್ದಿಮೆದಾರರಿಗೆ ಪ್ರಸ್ತುತ ಐದು ಪಟ್ಟು ದಂಡ ವಿಧಿಸುವ ನಿಯಮ ಇಲಾಖೆಯಲ್ಲಿದೆ. ಸುಮಾರು 6,700ಕೋಟಿ ರಾಜಸ್ವ ಸರ್ಕಾರಕ್ಕೆ ಬರಬೇಕಾಗಿದೆ. ಇನ್ನು ಮುಂದೆ ಏಕಕಂತು ತಿರುವಳಿ ಯೋಜನೆ (ಒನ್ ಟೈಮ್ ಸಟ್ಲ್‍ಮೆಂಟ್ ಸ್ಕೀಮ್) ಪ್ರಾರಂಭಿಸಲಾಗುವುದು. ಬಹುದಿನಗಳ ಬೇಡಿಕೆಯಂತೆ ಜಿಲ್ಲಾ ಗಣಿ ನಿಧಿ (ಡಿಎಂಎಫ್) ಪ್ರಸ್ತುತ ಶೇ.30ರಷ್ಟಿದೆ. ಇದನ್ನು ಶೇ.10ಕ್ಕೆ ಇಳಿಕೆ ಮಾಡಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಡುವುದಾಗಿ ತಿಳಿಸಿದರು.

ಉದ್ದಿಮೆದಾರರು ರಾಜಸ್ವ ಹಾಗೂ ಜಿಎಸ್‍ಟಿ ಕಟ್ಟುತ್ತಾರೆ. ಇದರಿಂದಲೇ ಕೋಟ್ಯಂತರ ರೂ. ತೆರಿಗೆ ಸರ್ಕಾರಕ್ಕೆ ಪಾವತಿಯಾಗುತ್ತದೆ. ನಿಮಗೆ ಅನುಕೂಲ ಕಲ್ಪಿಸಿಕೊಟ್ಟರೆ ಉದ್ಯಮ ಸುಲಭವಾಗಿ ನಡೆಯಲಿದೆ. ಶೀಘ್ರದಲ್ಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವತಿಯಿಂದ ಜನಪರವಾದ ಹಾಗೂ ಜನ ಸ್ನೇಹಿ ಗಣಿ ನೀತಿಯನ್ನು ಜಾರಿ ಮಾಡಲಿದ್ದೇವೆ. ಇದರಲ್ಲಿ ನಿಮ್ಮ ಪ್ರತಿನಿಧಿಗಳನ್ನು ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದರು.

murugesh nirani 2 4

ದೇಶಕ್ಕೆ ಮಾದರಿಯಾದ ಗಣಿ ನೀತಿಯನ್ನು ಜಾರಿ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ. ಕರ್ನಾಟಕದ ನೀತಿಯನ್ನು ಬೇರೆ ರಾಜ್ಯಗಳು ಮಾದರಿಯಾಗಿಟ್ಟುಕೊಳ್ಳಬೇಕು. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರುವುದಾಗಿ ಆಶ್ವಾಸನೆ ನೀಡಿದರು. ನಾನೂ ಕೂಡ ಮೂಲತಃ ಉದ್ಯಮಿಯಾಗಿದ್ದು, ಉದ್ಯಮಿದಾರರ ಸಮಸ್ಯೆಗಳು ಏನೆಂಬುದರ ಬಗ್ಗೆ ಅರಿವಿದೆ. ನೀವು ಮುಂದಿಟ್ಟಿರುವ ಬೇಡಿಕೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಗೌರವಯುತವಾಗಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ವಾಗ್ದಾನ ಮಾಡಿದರು.

ಎಲ್ಲ ಜಿಲ್ಲೆಗಳಲ್ಲಿ ಖನಿಜ ಭವನ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಇಲಾಖೆವತಿಯಿಂದ ಪ್ರತ್ಯೇಕ ಖನಿಜ ಭವನಗಳನ್ನು ಪ್ರಾರಂಭ ಮಾಡಲಾಗುವುದು. ಕೆಲವು ಜಿಲ್ಲೆಗಳಲ್ಲಿ ಖನಿಜ ಭವನಗಳು ಇಲ್ಲದಿರುವುದು ಗಮನಕ್ಕೆ ಬಂದಿದೆ. ಹಂತ ಹಂತವಾಗಿ ಎಲ್ಲ ಜಿಲ್ಲೆಗಳಲ್ಲೂ ಖನಿಜ ಭವನಗಳನ್ನು ತೆರೆಯಲಾಗುವುದು. ಇದರಿಂದ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟರು.

ನಾನು 20-25 ವರ್ಷಗಳ ಹಿಂದೆ ಸಣ್ಣ ಉದ್ಯಮಿಯಾಗಿದ್ದೆ. ಅಂದು ನನ್ನ ಬಳಿ ಹೆಚ್ಚಿನ ಹಣಕಾಸು ಇರಲಿಲ್ಲ. ಇಂದು ಏಷ್ಯಾದಲ್ಲೇ ಅತಿ ದೊಡ್ಡ ಸಕ್ಕರೆ ಕಾರ್ಖಾನೆಯನ್ನು ನಾನು ನಡೆಸುತ್ತಿದ್ದೇನೆ. ನನ್ನ ಪರಿಶ್ರಮ ಹಾಗೂ ಸಾಧಿಸಬೇಕೆಂಬ ಗುರಿ ಇದ್ದಿದ್ದರಿಂದಲೇ ಇದು ಸಾಧ್ಯವಾಯಿತು ಎಂದು ಅಭಿಪ್ರಾಯಪಟ್ಟರು.

murugesh nirani 2 3

ಸಕ್ಕರೆ ಕಾರ್ಖಾನೆ ಜೊತೆಗೆ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದೇವೆ. ಅಲ್ಲದೆ ಸಹಕಾರ ಕ್ಷೇತ್ರದಲ್ಲೂ ಬ್ಯಾಂಕಿಂಗ್ ಸೇವೆ ಒದಗಿಸುತ್ತಿದ್ದೇವೆ. ಎಥಿನಾಲ್, ಸಿಮೆಂಟ್ ಉತ್ಪಾದನೆ ಸೇರಿದಂತೆ ವಾರ್ಷಿಕ 5 ಸಾವಿರ ಕೋಟಿ ವಹಿವಾಟು ನಡೆಸುತ್ತಿದ್ದೇವೆ. ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಕಾರ್ಖಾನೆ ಉದ್ಘಾಟನಾ ಸಮಾರಂಭಕ್ಕೆ ಬಂದಿದ್ದರು. ನಮ್ಮ ಫೌಂಡೇಶನ್ ಬೆಳದು ಬಂದ ಹಾದಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು ಎಂದರು.

ಇಲಾಖೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಶಿವಮೊಗ್ಗದ ಹುಣಸೋಡು, ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಬಳಿ ನಡೆದ ಘಟನೆಯ ನಂತರ ಬಿಗಿಯಾದ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಈ ಎರಡು ಘಟನೆ ನಡೆದ ನಂತರ ವಿರೋಧ ಪಕ್ಷದವರು ನನಗೆ ಮಾಲೀಕರನ್ನು ಬಂಧಿಸುವಂತೆ ಒತ್ತಡ ಹಾಕಿದರು. ಇದು ಮಾಲೀಕರಿಂದ ಪ್ರಮಾದವಾಗಿಲ್ಲ ಎಂದು ನಾನು ಮನವರಿಕೆ ಮಾಡಿಕೊಟ್ಟೆ. ಸ್ಪೋಟಕಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವಾಗ ಉಂಟಾದ ಅತಾಚುರ್ಯದಿಂದ ಇದು ಸಂಭವಿಸಿತು. ಮುಂದೆ ಈ ರೀತಿ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಹೇಳಿದರು.

ಮಾಲೀಕರು ಬಂಡವಾಳ ಹೂಡಿ ಉದ್ಯಮ ಆರಂಭಿಸುತ್ತಾರೆ. ಅವರ ಮೇಲೆ ಕ್ರಮ ಜರುಗಿಸಿದರೆ ಕ್ರಷರ್‍ಗಳು ನಿಂತು ಹೋಗುತ್ತವೆ. ಬ್ಯಾಂಕ್‍ನಲ್ಲಿ ಪಡೆದ ಸಾಲದ ಮೇಲಿನ ಬಡ್ಡಿ ಹೆಚ್ಚಾಗುತ್ತದೆ. ಕಾರ್ಮಿಕರಿಗೆ ಕೆಲಸ ಇಲ್ಲದಂತಾಗುತ್ತದೆ. ಇದರಿಂದ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತದೆ ಎಂದು ತಿಳಿಸಿದರು.

WhatsApp Image 2021 03 17 at 6.40.20 PM 1

ಕಾರ್ಯಕ್ರಮದಲ್ಲಿ ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಉಪಾಧ್ಯಕ್ಷ ಎಸ್.ದತ್ತಾತ್ರೀ, ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಅಸೋಸಿಯೇಷನ್ಸ್ ಅಧ್ಯಕ್ಷ ಎಸ್.ಸಂಜೀವ ಹಟ್ಟಿಹೊಳಿ, ಗಣಿ ಸುರಕ್ಷತಾ ಮಹಾನಿದೇರ್ಶಕರಾದ ಮುರಳಿಧರ್ (ಬೆಂಗಳೂರು ವಲಯ), ಶ್ಯಾಮ್ ಸುಂದರ್ ಸೋನಿ(ಗೋವಾ ವಲಯ) ಹಾಗೂ ಉಮೇಶ್ ಎಂ.ಸಾವರ್ಕರ್ (ಬಳ್ಳಾರಿ ವಲಯ) ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

TAGGED:bengaluruindustryMurugesh niraniNOCPublic TVstone miningಉದ್ಯಮಎನ್‍ಒಸಿಕಲ್ಲು ಗಣಿಗಾರಿಕೆಪಬ್ಲಿಕ್ ಟಿವಿಬೆಂಗಳೂರುಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

GBA
Bengaluru City

ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಹರಾಜು

Public TV
By Public TV
7 minutes ago
Mysuru Fire Accident Nursing College
Districts

ಮೈಸೂರು | ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ – ಧಗಧಗ ಹೊತ್ತಿ ಉರಿದ ಕಟ್ಟಡ

Public TV
By Public TV
35 minutes ago
pratap simha siddaramaiah
Districts

ಸಿದ್ದರಾಮಯ್ಯಗೆ ತಾಖತ್ ಇದ್ರೆ ಮೈಸೂರು ಸಿಟಿಯಲ್ಲಿ ಸ್ಪರ್ಧೆ ಮಾಡೋಕೆ ಹೇಳಿ ನೋಡೋಣ: ಯತೀಂದ್ರಗೆ ಪ್ರತಾಪ್ ಸಿಂಹ ಸವಾಲ್‌

Public TV
By Public TV
41 minutes ago
Bengaluru Mahadevapura Child Death Protest
Bengaluru City

ರಸ್ತೆ ಗುಂಡಿಗೆ ಮಗು ಬಲಿ – ರಸ್ತೆ ಸರಿಯಿಲ್ಲ ಅಂತ ಪ್ರತಿಭಟಿಸಿದವರ ವಿರುದ್ಧ FIR

Public TV
By Public TV
48 minutes ago
Accident
Crime

ವ್ಯಾನ್‌ಗೆ ಬಸ್ ಡಿಕ್ಕಿ – ಐವರು ಸಾವು, 6 ಮಂದಿಗೆ ಗಾಯ

Public TV
By Public TV
1 hour ago
Chikkaballapura 3
Chikkaballapur

ಮಗಳನ್ನ ಪ್ರೀತಿಸಿದ್ದ ಯುವಕನ ಮೇಲೆ ಕೇಸ್ ಕೊಟ್ಟ ತಾಯಿ – ಜೈಲಿಂದ ಹೊರಬಂದಿದ್ದ ಯುವಕನಿಂದ ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?