ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಇಂದು ಒಟ್ಟು 944 ಪಾಸಿಟಿವ್ ಕೇಸ್ ಮತ್ತು ಏಕೈಕ ಮರಣ ಪ್ರಕರಣ ದಾಖಲಾಗಿದೆ.
ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 7,569ಕ್ಕೆ ತಲುಪಿದೆ. 3 ಜಿಲ್ಲೆಗಳಾದ ಗದಗ, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ಹೊರತು ಪಡಿಸಿ ಉಳಿದ 27 ಜಿಲ್ಲೆಗಳಲ್ಲೂ ಕೇಸ್ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಇಂದು 799 ಪ್ರಕರಣ ಪತ್ತೆಯಾಗಿದ್ದು, 625 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 6,878ಕ್ಕೆ ತಲುಪಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಧಾರವಾಡದಲ್ಲಿ ಒಟ್ಟು 17 ಕೇಸ್ ಮತ್ತು ಏಕೈಕ ಮರಣ ವರದಿಯಾಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 3.25ಕ್ಕೆ ತಲುಪಿದೆ. ಈವರೆಗೆ ಒಟ್ಟು 40,089 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 670 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: 10ನೇ ತರಗತಿ ಐಸಿಎಸ್ಸಿ ಫಲಿತಾಂಶ ಪ್ರಕಟ: ಬೆಂಗಳೂರು ಬಾಲಕನ ಉತ್ತಮ ಸಾಧನೆ
ಈವರೆಗೆ ರಾಜ್ಯದಲ್ಲಿ ಒಟ್ಟು 39,86,320 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,38,620 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 24,063 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 29,022 ಸ್ಯಾಂಪಲ್ (ಆರ್ಟಿಪಿಸಿಆರ್ 22,160 + 6,862 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕುಡಿದು ವಾಹನ ಚಲಾಯಿಸಿದ್ರೆ ರಕ್ತದಾನ ಮಾಡುವ ಶಿಕ್ಷೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 3, ಬಳ್ಳಾರಿ 5, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 799, ಬೀದರ್ 3, ಚಾಮರಾಜನಗರ 1, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 16, ದಾವಣಗೆರೆ 3, ಧಾರವಾಡ 17, ಹಾಸನ 6, ಹಾವೇರಿ 1, ಕಲಬುರಗಿ 5, ಕೋಲಾರ 5, ಕೊಪ್ಪಳ 2, ಮಂಡ್ಯ 4, ಮೈಸೂರು 4, ರಾಯಚೂರು 4, ರಾಮನಗರ 4, ಶಿವಮೊಗ್ಗ 2, ತುಮಕೂರು 8, ಉಡುಪಿ 8, ಉತ್ತರ ಕನ್ನಡ 11, ವಿಜಯಪುರ 5, ಗದಗ, ಕೊಡಗು ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.