ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 977 ಪಾಸಿಟಿವ್ ಕೇಸ್ ಮತ್ತು ಏಕೈಕ ಮರಣ ಪ್ರಕರಣ ದಾಖಲಾಗಿದೆ.
ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 6,702ಕ್ಕೆ ತಲುಪಿದೆ. ಇಂದು ರಾಜ್ಯದಲ್ಲಿ 1,013 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ ಇಂದು 871 ಪ್ರಕರಣ ಪತ್ತೆಯಾಗಿದೆ. ನಗರದಲ್ಲಿ ಇಂದು ಒಂದೇ ದಿನ 927 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 6,196ಕ್ಕೆ ತಲುಪಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಧಾರವಾಡದಲ್ಲಿ ಒಟ್ಟು 21 ಕೇಸ್ ಮತ್ತು ಏಕೈಕ ಮರಣ ವರದಿಯಾಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 3.73ಕ್ಕೆ ತಲುಪಿದೆ. ಈವರೆಗೆ ಒಟ್ಟು 40,085 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಸಾರಿಗೆ ಸಂಸ್ಥೆ – ಐರಾವತ ಬಸ್ನ್ನು ಜಪ್ತಿ ಮಾಡಿದ ನ್ಯಾಯಾಲಯ
ಈವರೆಗೆ ರಾಜ್ಯದಲ್ಲಿ ಒಟ್ಟು 39,84,002 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,37,173 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 1,03,426 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 26,150 ಸ್ಯಾಂಪಲ್ (ಆರ್ಟಿಪಿಸಿಆರ್ 18,934 + 7,216 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮುಂದಿನ 5 ದಿನವೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 1, ಬಳ್ಳಾರಿ 10, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 871, ಬೀದರ್ 3, ಚಾಮರಾಜನಗರ 1, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 8, ದಾವಣಗೆರೆ 3, ಧಾರವಾಡ 21, ಹಾಸನ 2, ಹಾವೇರಿ 1, ಕೋಲಾರ 11, ಕೊಪ್ಪಳ 4, ಮೈಸೂರು 7, ರಾಮನಗರ 1, ಶಿವಮೊಗ್ಗ 4, ತುಮಕೂರು 3, ಉಡುಪಿ 6, ಗದಗ, ಕಲಬುರಗಿ, ಕೊಡಗು, ಉತ್ತರ ಕನ್ನಡ, ಮಂಡ್ಯ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.