ಹಲ್ಲೆಗೊಳಗಾದ ವಲಸೆ ಕಾರ್ಮಿಕ ಬಾಲಕನನ್ನು ಐಷಾರಾಮಿ ಕಾರಿನಲ್ಲಿ ಜಾಲಿ ರೈಡ್ ಮಾಡಿಸಿದ ಚಿನ್ನದಂಗಡಿ ಮಾಲೀಕ

Public TV
1 Min Read
Kerala Kannur Boy Car

ತಿರುವನಂತಪುರಂ: ಕಳೆದ ತಿಂಗಳು ಕೇರಳದ (Kerala) ಕಣ್ಣೂರಿನಲ್ಲಿ (Kannur) ವ್ಯಕ್ತಿಯೊಬ್ಬನಿಂದ ಹಲ್ಲೆಗೊಳಗಾದ 6 ವರ್ಷದ ಬಾಲಕ (Boy) ಮತ್ತು ಆತನ ಕುಟುಂಬವನ್ನು ಚಿನ್ನದಂಗಡಿಯ ಮಾಲೀಕನೊಬ್ಬ (Gold Shop Owner) ತನ್ನ ಐಷಾರಾಮಿ ಕಾರಿನಲ್ಲಿ (luxury car) ಜಾಲಿ ರೈಡ್ ಹಾಗೂ ಶಾಪಿಂಗ್‌ಗೆ ಕರೆದುಕೊಂಡು ಹೋಗಿದ್ದಾರೆ. ಈ ಮೂಲಕ ಚಿನ್ನದಂಗಡಿ ಮಾಲೀಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕೊಟ್ಟಾಯಂ ಮೂಲದ ಜುವೆಲ್ಲರಿ ಗ್ರೂಪ್‌ನ ಆಚಾಯನ್ಸ್ ಗೋಲ್ಡ್‌ನ ಮಾಲೀಕ ಟೋನಿ ವರ್ಕಿಚನ್ ರಾಜಸ್ಥಾನ ಮೂಲದ ವಲಸೆ ಕಾರ್ಮಿಕ ಕುಟುಂಬದ 6 ವರ್ಷದ ಬಾಲಕ ಗಣೇಶ್‌ನನ್ನು ಆತನ ಕುಟುಂಬದ ಜೊತೆಗೆ ಕೋಝಿಕ್ಕೋಡ್‌ನಾದ್ಯಂತ ನಗರದಲ್ಲಿ ಜಾಲಿ ರೈಡ್ ಕರೆದುಕೊಂಡು ಹೋಗಿದ್ದಾರೆ. ಮಾತ್ರವಲ್ಲದೇ ಬಾಲಕನಿಗೆ ಬೇಕೆನಿಸಿದ್ದನ್ನೆಲ್ಲವನ್ನೂ ತೆಗೆಸಿ ಕೊಟ್ಟಿದ್ದಾರೆ.

Kerala Kannur Boy Car 1

ಕಳೆದ ತಿಂಗಳು ವಲಸೆ ಕಾರ್ಮಿಕ ಕುಟುಂಬದ ಬಾಲಕ ಕಣ್ಣೂರಿನಲ್ಲಿ ಕಾರೊಂದಕ್ಕೆ ಒರಗಿ ನಿಂತಿದ್ದಕ್ಕಾಗಿ ಕಾರ್‌ನ ಮಾಲೀಕ ಕೋಪಗೊಂಡು ಬಾಲಕನಿಗೆ ಕಾಲಿನಿಂದ ಒದ್ದಿದ್ದ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಶಿಹಸಾದ್‌ನನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆಯ ಬಳಿಕ ರಾಜ್ಯಾದ್ಯಂತ ವಲಸೆ ಕಾರ್ಮಿಕರ ಬಗ್ಗೆ ಹಲವರು ಅನುಕಂಪ ತೋರಿ ಅತಿಥಿ ಕೆಲಸಗಾರರು ಎಂದು ಸಂಬೋಧಿಸಿದರು. ಇದನ್ನೂ ಓದಿ: ಕಾಂತಾರ ಚಿತ್ರ ವೀಕ್ಷಿಸಲು ಥಿಯೇಟರ್‌ಗೆ ಬಂದ ಜೋಡಿ ಮೇಲೆ ಹಲ್ಲೆ

kerala boy car

ಈ ಘಟನೆ ನಡೆದ 1 ತಿಂಗಳ ಬಳಿಕ ಟೋನಿ ಅವರು ಹಲ್ಲೆಗೊಳಗಾದ ಬಾಲಕನನ್ನು ಗುರುತಿಸಿ, ಆತನಿಗೆ ಹಾಗೂ ಆತನ ಕುಟುಂಬದವರಿಗೆ ಜಾಲಿ ರೈಡ್ ಹಾಗೂ ಶಾಪಿಂಗ್ ಕರೆದುಕೊಂಡು ಹೋಗಲು ಮುಂದಾದರು. ಬಾಲಕನ ಕುಟುಂಬಕ್ಕೆ ಟೋನಿ 3 ತಿಂಗಳ ಕಾಲ ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಕೇಸ್- ಪೀಸ್ ಪೀಸ್ ಪ್ರೇಮಿಗೆ ಜೈಲು ಅವಧಿ ವಿಸ್ತರಣೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *