ಚೆನ್ನೈನ ಸೈಕ್ಲೋನ್ ಹೊಡೆತಕ್ಕೆ ಸಿಲುಕಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ

Public TV
1 Min Read
FotoJet 1 31

ಕನ್ನಡದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸೈಕ್ಲೋನ್ ಹೊಡೆತಕ್ಕೆ ಸಿಕ್ಕು ತತ್ತರಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ತಾವು ಎದುರಿಸಿದ ಸೈಕ್ಲೋನ್ ರಾಡಾರ್ ಸಿನಿಮಾದ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ಇದ್ದೇವೆ ಎನ್ನುವಂತೆ ಭಾಸವಾಯಿತು ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಸಿನಿಮಾದ ನಿರ್ಮಾಪಕ ದೇವರಾಜ್.ಆರ್ ಕೂಡ ಇದ್ದರು ಎಂದು ಹೇಳಿದ್ದಾರೆ.

FotoJet 3 21

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿಅವರು, ‘ತುರ್ತು ಕೆಲಸದ ಮೇಲೆ ಚೆನ್ನೈಗೆ ಬಂದಿದ್ದೆ, ವಾಪಾಸ್ಸು ಬರಲು ಟಿಕೆಟ್ ಬುಕ್ ಆಗಿದ್ದ ವಿಮಾನ ರದ್ದಾದ ಕಾರಣ ನಾನು ನಮ್ಮ ನಿರ್ಮಾಪಕರು, ರಸ್ತೆಯ ಮೂಲಕ ಬೆಂಗಳೂರು ತಲುಪಲು ನಿರ್ಧರಿಸಿ ಚೆನ್ನೈ ಸಿಟಿಯಿಂದ ಒಂದು ಐವತ್ತು ಕಿಮೀ ಬಂದು ರಸ್ತೆ ಸಾಗಲು ಸಹ ತ್ರಾಸದಾಯಕವಾದ ಸೈಕ್ಲೋನ್ ನೋಡುತ್ತಾ ಕೂತಿರುವ ಕ್ಷಣ. ರಾಡಾರ್ ಚಿತ್ರದಲ್ಲಿ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ನಾವಿದ್ದೇವೆ ಎಂದು ತೋರಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

FotoJet 41

ಬರಹದ ಜೊತೆಗೆ ವಿಡಿಯೋ ಪೋಸ್ಟ್ ಮಾಡಿದ್ದು, ಅದನ್ನು ನೋಡಿದ ಹಲವರು ಇಂತಹ ಸಾಹಸವನ್ನು ಇನ್ನೊಮ್ಮೆ ಮಾಡಬೇಡಿ ಎಂದು ಪ್ರೀತಿಯಿಂದ ಗದರಿದ್ದಾರೆ. ಆ ಸೈಕ್ಲೋನ್ ನಿಂದ ಪಾರಾಗಿ ಬಂದಿರುವ ಮಂಸೋರೆ ಮತ್ತು ನಿರ್ಮಾಪಕರು ಸುರಕ್ಷಿತವಾಗಿ ಮನೆ ತಲುಪಿದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವಿಡಿಯೋ ವೀಕ್ಷಿಸಿದ ಹಲವರು ಆತಂಕವನ್ನು ವ್ಯಕ್ತಪಡಿಸುವ ಮೂಲಕ ಸುರಕ್ಷಿತವಾಗಿ ಮನೆ ತಲುಪಿ ಎಂದು ಹಾರೈಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *