Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

2 ಬಲಿ ಪಡೆದು, ಡ್ರೋನ್ ಕ್ಯಾಮೆರಾಕ್ಕೂ ಚಳ್ಳೆಹಣ್ಣು ತಿನ್ನಿಸಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಭೈರ ಕೊನೆಗೂ ಸಿಕ್ಕಿಬಿದ್ದ

Public TV
Last updated: December 11, 2022 9:18 pm
Public TV
Share
3 Min Read
Elephant Mudigere Bhaira finally caught 1
SHARE

ಚಿಕ್ಕಮಗಳೂರು: ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಹಾಗೂ ಜನರ ನಿದ್ದೆಗೆಡಿಸಿ ನೆಮ್ಮದಿ ಹಾಳು ಮಾಡಿದ್ದ ಒಂಟಿಸಲಗ, ನರಹಂತಕ ಕಾಡಾನೆ ಮೂಡಿಗೆರೆ ಭೈರನನ್ನು (Mudigere Bhaira) ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮೂಡಿಗೆರೆ ತಾಲೂಕಿನಾದ್ಯಂತ ದಾಂಧಲೆ ನಡೆಸಿಕೊಂಡು ಇಬ್ಬರ ಜೀವ ತೆಗೆದಿದ್ದ ಭೈರನಿಂದ ಜನ ರೋಸಿ ಹೋಗಿ, ಅರಣ್ಯ ಇಲಾಖೆ(Forest Department) ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು. ಆನೆ ಹಾವಳಿಯಿಂದ ತಿಂಗಳಿಗೊಂದು ಹೆಣ ಬಿದ್ದ ಪರಿಣಾಮ ತಾಳ್ಮೆಗೆಟ್ಟು ಕಂಗೆಟ್ಟಿದ್ದ ಜನ ಶಾಸಕ ಕುಮಾರಸ್ವಾಮಿ ಮೇಲೂ ಹಲ್ಲೆಗೆ ಮುಂದಾಗಿದ್ದರು.

Elephant Mudigere Bhaira finally caught 4

ಜನ ಯಾವಾಗ ಶಾಸಕರ ಮೇಲೆ ಹಲ್ಲೆಗೆ ಮುಂದಾದರೋ ಕೂಡಲೇ ಸರ್ಕಾರ ಮೂರು ಕಾಡಾನೆಗಳನ್ನು ಹಿಡಿಯಲು ಹಸಿರು ನಿಶಾನೆ ತೋರಿತ್ತು. ಸರ್ಕಾರ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಕಳೆದ ಎಂಟತ್ತು ದಿನಗಳಿಂದ ಆರು ಸಾಕಾನೆಗಳೊಂದಿಗೆ ಮೂರು ಕಾಡಾನೆಗಳನ್ನು ಹಿಡಿಯಲು ಅಧಿಕಾರಿಗಳು-ಸ್ಥಳೀಯರು ಹಗಲಿರುಳು ಕಷ್ಟ ಪಟ್ಟಿದ್ದರು. ಎರಡು ಕಾಡಾನೆಗಳನ್ನು ಸೆರೆ ಹಿಡಿದು ಮಡಿಕೇರಿಯ ಆನೆ ದುಬಾರೆ ಹಾಗೂ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆಬಿಡಾರಕ್ಕೆ ಬಿಟ್ಟಿದ್ದರು. ಆದರೆ ಪುಂಡ ಒಂಟಿಸಲಗ ಮೂಡಿಗೆರೆ ಭೈರ ಮಾತ್ರ ಎಲ್ಲರ ಕಣ್ತಪ್ಪಿಸಿ ನಾಪತ್ತೆಯಾಗುತ್ತಿದ್ದ.

ಅರಣ್ಯ ಅಧಿಕಾರಿಗಳ ಡ್ರೋನ್ ಕ್ಯಾಮೆರಾಕ್ಕೂ ಕಣ್ತಪ್ಪಿಸಿ ದಟ್ಟ ಕಾನನದಲ್ಲಿ ಪರಾರಿಯಾಗಿ ಓಡಾಡ್ತಿದ್ದ. ಆದರೆ ಭಾನುವಾರ ಮಧ್ಯಾಹ್ನ ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ಭೈರ ಇರುವ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿ ನರಹಂತಕನನ್ನು ಖೆಡ್ಡಾಕ್ಕೆ ಬೀಳಿಸಿದ್ದಾರೆ. ಈ ಮೂಡಿಗೆರೆ ಭೈರನನ್ನು ಸೆರೆ ಹಿಡಿಯುವಷ್ಟರಲ್ಲಿ ಅರಣ್ಯ ಅಧಿಕಾರಿಗಳು ಕೂಡ ಹೈರಾಣಾಗಿದ್ದಾರೆ. ನರಹಂತಕನಾಗಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಭೈರ ಸೆರೆಯಾದ ಕಾರಣ ಜನರ ಜೊತೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರೀ ಮಳೆಯ ಎಚ್ಚರಿಕೆ

Elephant Mudigere Bhaira finally caught 3

ಮೂಡಿಗೆರೆ ಭೈರನ ಹೆಜ್ಜೆಗುರುತು :
ಈ ಮೂಡಿಗೆರೆ ಭೈರನ ಹೆಜ್ಜೆ ಗುರುತುಗಳು ಮಲೆನಾಡ ಮಣ್ಣಲ್ಲಿ ಅಚ್ಚಳಿಯದೆ ಉಳಿದಿವೆ. ಯಾಕೆಂದರೆ ಮಲೆನಾಡಲ್ಲಿ ದಶಕಗಳಿಂದ ಆನೆ ಹಾವಳಿ ಇದೆ. ಆದರೆ ಜನರಿಗೆ ಹಾಗೂ ಅಧಿಕಾರಿಗಳಿಗೆ ಇವನಷ್ಟು ಯಾರೂ ಕಾಟ ಕೊಟ್ಟಿರಲಿಲ್ಲ. ಜೀವ ತೆಗೆದಿರಲಿಲ್ಲ. ಇವನ ಅಬ್ಬರಕ್ಕೆ ಎರಡು ತಿಂಗಳಲ್ಲಿ ಇಬ್ಬರು ಬಲಿಯಾಗಿದ್ದರು. ಕಳೆದ ತಿಂಗಳ ಹಿಂದೆ ಮಹಿಳೆಯೊಬ್ಬಳು ಸಾವನ್ನಪ್ಪಿದ್ದರಿಂದ ಜನ ರೊಚ್ಚಿಗೆದ್ದು ಅರಣ್ಯ ಇಲಾಖೆಯ ಕಳ್ಳ ಭೇಟೆ ನಿಗ್ರಹ ಕಚೇರಿಯನ್ನು ಧ್ವಂಸ ಮಾಡಿದ್ದರು. ಆನೆ ದಾಳಿಗೆ ಕಂಗೆಟ್ಟು ಶಾಸಕರ ಮೇಲೂ ಹಲ್ಲೆ ಮಾಡಿದ್ದರು. ಇವನ ಕಾಟಕ್ಕೆ ಬೇಸತ್ತು ಅಧಿಕಾರಿಗಳು ಬೀದಿ-ಬೀದಿಯಲ್ಲಿ ಮೈಕ್ ಹಿಡಿದು ಅನೌನ್ಸ್ ಮಾಡಿದ್ದರು. ಒಂದು ಪುಂಡ ಕಾಡಾನೆ ಮಲೆನಾಡಿಗರಿಗೆ ಈ ಮಟ್ಟಕ್ಕೆ ರೋಧನೆ ಕೊಟ್ಟಿದ್ದು ಇದೇ ಮೊದಲು.

Elephant Mudigere Bhaira finally caught 2

ಆನೆಗಳೇ ವಾಪಸ್ ಹೋಗಿದ್ವು :
ಭೈರನ ಸೆರೆಗೆ ಅರಣ್ಯ ಇಲಾಖೆ ಪ್ರಯತ್ನಿಸಿದ್ದು ಇದೇ ಮೊದಲಲ್ಲ. ಕಳೆದ ಎರಡು ತಿಂಗಳ ಹಿಂದೆಯೂ ಇವನನ್ನು ಹಿಡಿಯೋಕೆ ಎಂದು ದಸರಾ ಆನೆಗಳ ಜೊತೆ ಮಡಿಕೇರಿಯಿಂದ ಒಟ್ಟು ಆರು ಕಾಡಾನೆಗಳು ಬಂದಿದ್ದವು. ಎರಡು ಮೂರು ದಿನ ಕಾರ್ಯಾಚರಣೆ ಕೂಡ ನಡೆಸಿದ್ದವು. ಆದರೆ ಆ ಹೊತ್ತಿಗಾಗಲೇ ಈ ಭೈರ ಕಾಡಿನಲ್ಲಿ ಕಣ್ಮರೆಯಾಗಿದ್ದ.

ಈ ವೇಳೆ ಆನೆಗಳಿಗೆ ಜ್ವರ ಹಾಗೂ ಹೊಟ್ಟೆ ಕೆಟ್ಟಿತ್ತು ಎಂದು ಕಾರ್ಯಾಚರಣೆ ಸ್ಥಗಿತಗೊಳಿಸಿ ವಾಪಸ್ ಕಳಿಸಿದ್ದರು. ಸಾಕಾನೆಗಳು ಹೋಗುತ್ತಿದ್ದಂತೆ ಮತ್ತೆ ಬಂದ ಈ ಪುಂಡ ಸಿಕ್ಕಾಪಟ್ಟೆ ಕಾಟ ನೀಡಲು ಶುರುಮಾಡಿದ್ದ. ಎರಡನೇ ಬಾರಿ ಮತ್ತೆ ಬಂದ ಆರು ಸಾಕಾನೆಗಳು ಎಂಟು ದಿನಗಳ ಕಾಲ ನಿರಂತರ ಕಾರ್ಯಾಚರಣೆಯ ಬಳಿಕ ಈ ಭೈರನನ್ನ ಸೆರೆ ಹಿಡಿದಿವೆ.

Live Tv
[brid partner=56869869 player=32851 video=960834 autoplay=true]

TAGGED:elephantkarnatakaMudigere Bhairaಅರಣ್ಯ ಇಲಾಖೆಆನೆಮೂಡಿಗೆರೆಮೂಡಿಗೆರೆ ಭೈರ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
15 minutes ago
AI ಚಿತ್ರ
Latest

ಉಡುಪಿಯಲ್ಲಿ ಭಾರೀ ಮಳೆ – ಬೈಂದೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Public TV
By Public TV
34 minutes ago
human bridge punjab
Latest

ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

Public TV
By Public TV
53 minutes ago
Amit Shah 1
Latest

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ – ಸದನದಲ್ಲಿ ಅನುಮೋದನೆ

Public TV
By Public TV
60 minutes ago
Digital Arrest 2
Crime

Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

Public TV
By Public TV
2 hours ago
captain brijesh chowta nitin gadkari
Dakshina Kannada

ಸಂಸತ್‌ ಕಚೇರಿಯಲ್ಲಿ ನಿತಿನ್‌ ಗಡ್ಕರಿ ಭೇಟಿಯಾದ ಕ್ಯಾ.ಬ್ರಿಜೇಶ್‌ ಚೌಟ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?