Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರದೇಶಿ ಟಿಪ್ಪುವನ್ನು ಹೊಗಳಿ, ಸಾವರ್ಕರ್ ಫೋಟೋ ಕಂಡರೂ ಉರಿದು ಬೀಳುವವರು ದೇಶ ವಿರೋಧಿಗಳು: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರದೇಶಿ ಟಿಪ್ಪುವನ್ನು ಹೊಗಳಿ, ಸಾವರ್ಕರ್ ಫೋಟೋ ಕಂಡರೂ ಉರಿದು ಬೀಳುವವರು ದೇಶ ವಿರೋಧಿಗಳು: ಬಿಜೆಪಿ

Bengaluru City

ಪರದೇಶಿ ಟಿಪ್ಪುವನ್ನು ಹೊಗಳಿ, ಸಾವರ್ಕರ್ ಫೋಟೋ ಕಂಡರೂ ಉರಿದು ಬೀಳುವವರು ದೇಶ ವಿರೋಧಿಗಳು: ಬಿಜೆಪಿ

Public TV
Last updated: December 19, 2022 5:11 pm
Public TV
Share
3 Min Read
Savarkar Photo 1
SHARE

ಬೆಂಗಳೂರು: ಅರ್ಜುನನನ್ನು ಶಂಕಿಸಬಹುದು. ಆದರೆ ಗಾಂಢೀವವನ್ನು ಶಂಕಿಸಬಹುದೇ? ಸಾವರ್ಕರ್ ಎಂದರೆ ಗಾಂಢೀವ! ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕಾಂಗ್ರೆಸ್‍ಗೆ (Congress) ಜನರಿಗಿಂತ ನಿಮ್ಹಾನ್ಸ್ ಆಸ್ಪತ್ರೆಯ ನುರಿತ ಮನೋವೈದ್ಯರ ಅವಶ್ಯಕತೆ ಹೆಚ್ಚಾಗಿದೆ. ಪರದೇಶಿ ಟಿಪ್ಪುವನ್ನು (Tippu) ಹೊಗಳುವವರು, ದೇಶಪ್ರೇಮಿ ಸಾವರ್ಕರ್ (Savarkar) ಫೋಟೋ ಕಂಡರೂ ಉರಿದು ಬೀಳುವವರು ಒಂದೋ ದೇಶ ವಿರೋಧಿಯಾಗಿರಬೇಕು ಅಥವಾ ಮಾನಸಿಕ ಅಸ್ವಸ್ಥರಾಗಿರಬೇಕು ಎಂದು ಬಿಜೆಪಿ (BJP) ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

BJP

ಟ್ವೀಟ್‍ನಲ್ಲಿ ಏನಿದೆ?
1970ರಲ್ಲಿ ಇಂದಿರಾ ಗಾಂಧಿ (Indira Gandhi) ಸರ್ಕಾರ ವೀರ ಸಾವರ್ಕರ್ ಅಂಚೆ ಚೀಟಿ ಬಿಡುಗಡೆ ಮಾಡಿತ್ತು. ಸಾವರ್ಕರ್ ಕುರಿತು ಡಾಕ್ಯುಮೆಂಟರಿ ನಿರ್ಮಾಣಕ್ಕಾಗಿ ಸಾವರ್ಕರ್ ಸ್ಮಾರಕ ಸಮಿತಿಗೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ದರು. ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ? ಸಾವರ್ಕರ್ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಖುದ್ದು ಸಾವರ್ಕರ್ ಹೋರಾಟವನ್ನು ಕೊಂಡಾಡಿ ಅವರೊಬ್ಬ ಅದ್ಭುತ ಸ್ವಾತಂತ್ರ್ಯ ಹೋರಾಟಗಾರ ಎಂದು ಶ್ಲಾಘಿಸಿ ಪತ್ರ ಬರೆದಿದ್ದರು. ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಸಾವರ್ಕರ್‌ ಸೇರಿ 7 ಮಂದಿ ಫೋಟೋ ಅನಾವರಣ

CONGRESS 4

ಇದರ ಜೊತೆಗೆ ವೀರ ಸಾವರ್ಕರ್ ಸ್ಮಾರಕ ನಿಧಿಗೆ ವೈಯುಕ್ತಿಕವಾಗಿ 11,000 ರೂಪಾಯಿ ದೇಣಿಗೆ ಕೂಡಾ ನೀಡಿದ್ದರು. ಸಾವರ್ಕರ್ ಅಸ್ಪೃಶ್ಯತಾ ನಿವಾರಣೋಪಾಯಗಳು ಅಂಬೇಡ್ಕರ್ ಅವರಿಗೆ ಪ್ರೇರಣೆಯಾಗಿತ್ತು, ಆದರೆ ಕಾಂಗ್ರೆಸ್ಸಿಗರಿಗೆ ಆಗಲೇ ಇಲ್ಲ! ‘ಅಸ್ಪೃಶ್ಯತೆ ನಿವಾರಿಸಲು ನನ್ನ ಆಶಯಕ್ಕನುಗುಣವಾಗಿ ಸಮಾಜದೊಳಗಿದ್ದು ಶ್ರಮಿಸುತ್ತಿರುವ ಕೆಲವೇ ಕೆಲವು ಮಂದಿಯಲ್ಲಿ ಸಾವರ್ಕರ್ ಕೂಡಾ ಒಬ್ಬರು’ ಎಂದು ಅಂಬೇಡ್ಕರ್ ಕೊಂಡಾಡಿದ್ದರು. ತಾಯಿ ಭಾರತಿಗೆ ಕನ್ನಡದಾರತಿ ಎತ್ತುವೆ ಎಂದ ಆಲೂರು ವೆಂಕಟರಾಯರಿಗೆ, ಭಾರತ ಜನನಿಯ ತನುಜಾತೆ ಎಂದ ಕುವೆಂಪುರವರಿಗೆ, ಭಾಷೆಯಲ್ಲ, ಕಾವ್ಯವೇ ನವಮೇಘರೂಪ ಎಂದ ಬೇಂದ್ರೆಯವರಿಗೆ ಪ್ರೇರಣೆಯಾದವರು ಸಾವರ್ಕರ್. ಅಂಥಹ ವೀರ ಸಾವರ್ಕರ್ ಅವರು ಕಾಂಗ್ರೆಸ್ಸಿಗೆ ಮಾತ್ರ ವಿರೋಧಿಸುವುದೇಕೆ? ಸಿಂಗಾಪುರದ “ಫ್ರೀ ಇಂಡಿಯಾ ರೇಡಿಯೋ” ಭಾಷಣದಲ್ಲಿ ನೇತಾಜಿ, “ರಾಜಕೀಯ ಪ್ರಬುದ್ಧತೆಯಿಲ್ಲದ ಕಾಂಗ್ರೆಸ್ ಸೈನಿಕರನ್ನು ಹಣಕ್ಕಾಗಿ ಮಾರಿಕೊಂಡವರು ಎಂದು ಹೀಯಾಳಿಸುತ್ತಿರುವಾಗ ಸಾವರ್ಕರ್ ಸೇನೆಗೆ ಸೇರಿ ಎನ್ನುತ್ತಿರುವುದು ಸ್ಫೂರ್ತಿದಾಯಕ” ಎಂದಿದ್ದರು.

ಸಾವರ್ಕರ್ ನಿಂದಕರೆಲ್ಲರೂ ನೇತಾಜಿ ನಿಂದಕರೂ ಆಗಿದ್ದಾರೇಕೆಂದು ಈಗ ತಿಳಿಯಿತೇ? ಕಾಂಗ್ರೆಸ್ ಇಂದು ಸಾವರ್ಕರ್‌ರನ್ನು ವಿರೋಧಿಸಬಹುದು. ಆದರೆ ಸಾವರ್ಕರ್‌ರನ್ನು ಅಪಾರವಾಗಿ ಪ್ರೀತಿಸುವವರು, ಗೌರವಿಸುವವರ ಸಾಲಲ್ಲಿ ಗಾಂಧೀಜಿಯೂ ನಿಲ್ಲುತ್ತಾರೆ. ಗಾಂಧೀಜಿ ಪತ್ರಗಳಲ್ಲಿ ಸಾವರ್ಕರ್‌ರನ್ನು ಪ್ರೀತಿಯಿಂದ ‘ಭಾಯ್’ ಎಂದು ಸಂಬೋಧಿಸುತ್ತಿದ್ದರು. ಕಾಂಗ್ರೆಸ್ ಗಾಂಧೀಜಿಯನ್ನೂ ವಿರೋಧಿಸುವುದೇ? ಒಂದು ಸಮುದಾಯದ ಓಲೈಕೆಯಲ್ಲೇ ನಿರತರಾಗಿರುವ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‍ಗೆ ಟಿಪ್ಪು, ಶಾರಿಕ್‍ನಂಥವರೇ ದೇವರಾಗಿದ್ದಾರೆಯೇ ವಿನಾ, ದಲಿತರಿಗೂ ಪತಿತ ಪಾವನ ಮಂದಿರ ಕೊಟ್ಟ ಸಾವರ್ಕರ್ ದೇವರಾಗಲಿಲ್ಲ. ಇದನ್ನೂ ಓದಿ: ನಾವು ಹಿಂದೂಗಳೇ – ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ: ಡಿಕೆಶಿ

ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ @INCKarnataka ಕ್ಕೆ ಜನರಿಗಿಂತ ನಿಮ್ಹಾನ್ಸ್‌ ಆಸ್ಪತ್ರೆಯ ನುರಿತ ಮನೋವೈದ್ಯರ ಅವಶ್ಯಕತೆ ಹೆಚ್ಚಾಗಿದೆ.

ಪರದೇಶಿ ಟಿಪ್ಪುವನ್ನು ಹೊಗಳುವವರು, ದೇಶಪ್ರೇಮಿ ಸಾವರ್ಕರ್‌ ಫೋಟೊ ಕಂಡರೂ ಉರಿದು‌ ಬೀಳುವವರು ಒಂದೋ ದೇಶವಿರೋಧಿಯಾಗಿರಬೇಕು ಅಥವಾ ಮಾನಸಿಕ ಅಸ್ವಸ್ಥರಾಗಿರಬೇಕು!

11/11#AntiNationalCongress

— BJP Karnataka (@BJP4Karnataka) December 19, 2022

ಸಮಾಜವಾದಿ ಸಿದ್ದರಾಮಯ್ಯ ಈಗೆಲ್ಲಿ ಹೋದರು? ಮಾನ್ಯ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ, ಸಾವರ್ಕರ್ ಅವರನ್ನು ಓದುವುದು ಬೇಡ. ಕೇವಲ ನಿಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಮಾತನ್ನು ನೀವು ಅರ್ಥ ಮಾಡಿಕೊಂಡಿದ್ದರೂ, ಸಾವರ್ಕರ್ ಅವರ ಭಾವಚಿತ್ರಕ್ಕೆ ನೀವೇ ಹಾರ ಹಾಕುತ್ತಿದ್ದಿರೇನೋ! ಮಸ್ತಕದಲ್ಲೂ ಏನಿಲ್ಲ, ಪುಸ್ತಕವೂ ಓದಲ್ಲ ಎನ್ನುವವರಿಗೆ ಏನೆನ್ನೋಣ? ಅಂಡಮಾನಿನ ಕತ್ತಲ ಕೋಣೆಯಲ್ಲಿ ವೀರ ಸಾವರ್ಕರ್ ಕಾಲ ಕಳೆಯದಿರುತ್ತಿದ್ದರೆ, ಅವರ ಚಿಂತನೆಗಳು ರಾಷ್ಟ್ರದಲ್ಲಿ ಹರಿಯದಿರುತ್ತಿದ್ದರೆ ಭಾರತ 1947 ರಲ್ಲಿ ಸ್ವತಂತ್ರವಾಗುತ್ತಲೂ ಇರಲಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತಲೂ ಇರಲಿಲ್ಲ! ಅಂದು ವೀರ ಸಾವರ್ಕರ್ ಕತ್ತಲ ಕೋಣೆಯಲ್ಲಿ ಕಾಲ ಕಳೆಯದಿರುತ್ತಿದ್ದರೆ, ಇಂದು ವಿರೋಧಿಸುವವರಿಗೆ ಧ್ವನಿಯೇ ಇರುತ್ತಿರಲಿಲ್ಲ. ಇಂದಿನ ಆಡಳಿತದ ಯಾವ ಸಂಕೇತಗಳೂ ಇರುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಸುಳ್ಳಿನ ರಾಜ – ನಮ್ಮ ಒತ್ತಾಯದಿಂದ ಅಧಿವೇಶನ ನಡೆಯುತ್ತಿದೆ: ಡಿಕೆಶಿ ಕಿಡಿ

Live Tv
[brid partner=56869869 player=32851 video=960834 autoplay=true]

TAGGED:belagavibjpcongressKarnataka Assembly Winter Sessionsavarkar photoಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿಸಾವರ್ಕರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
9 minutes ago
Donald Trump 1
Latest

ನಾಳೆಯಿಂದ ಸುಂಕ ಸಂಗ್ರಹ ನಿಲ್ಲಿಸಲಿದೆ ಅಮೆರಿಕ – 175 ಶತಕೋಟಿ ಡಾಲರ್‌ ನಷ್ಟದ ಆತಂಕ

Public TV
By Public TV
9 minutes ago
BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
36 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
55 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
59 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?