ನಿಖರವಾಗಿ ಹೇಳುವುದು ಕಷ್ಟ, ಆದರೆ ಸೇತುವೆ ರೂಪದ ರಚನೆ ಇದೆ – ರಾಮ ಸೇತು ಬಗ್ಗೆ ಕೇಂದ್ರ ಉತ್ತರ

Public TV
2 Min Read
ram setu

ನವದೆಹಲಿ: ರಾಮ ಸೇತು(Ram Setu) ಇದೆಯೇ ಎಂದು ನಿಖರವಾಗಿ ಹೇಳುವುದು ಕಷ್ಟ ಸಾಧ್ಯ. ಆದರೆ ಅಲ್ಲಿ ಸೇತುವೆ ರೂಪದ ರಚನೆ ಇದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ(Rajya Sabha) ಉತ್ತರ ನೀಡಿದೆ.

ಹರ್ಯಾಣದ ಸ್ವತಂತ್ರ ಸಂಸದ ಕಾರ್ತಿಕೇಯ ಶರ್ಮಾ ಅವರು, ಈ ಹಿಂದಿನ ಸರ್ಕಾರ ರಾಮ ಸೇತು ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಈಗಿನ ಸರ್ಕಾರ ದೇಶದ ಗತಕಾಲದ ಚರಿತ್ರೆಗೆ ಸಾಕ್ಷಿಯಾಗಿರುವ ರಾಮ ಸೇತು ಬಗ್ಗೆ ವೈಜ್ಞಾನಿಕ ಸಂಶೋಧನೆಗೆ ಮುಂದಾಗಿದೆಯೇ ಎಂದು ಪ್ರಶ್ನೆ ಕೇಳಿದ್ದರು.

ಈ ಪ್ರಶ್ನೆಗೆ ಉತ್ತರ ನೀಡಿದ ಬಾಹ್ಯಾಕಾಶ ಖಾತೆಯ ರಾಜ್ಯ ಸಚಿವ ಜೀತೇಂದ್ರ ಸಿಂಗ್, 18 ಸಾವಿರ ವರ್ಷಗಳ ಹಿಂದೆ ನಿರ್ಮಾಣವಾಗಿರುವ ಸೇತುವೆಯ ಬಗ್ಗೆ ಈಗ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆ ಸೇತುವೆಯು ಸುಮಾರು 56 ಕಿಲೋಮೀಟರ್‌ಗಳಷ್ಟು ಉದ್ದವಾಗಿದ್ದು, ಇದನ್ನು ಕಂಡುಹಿಡಿಯಲು ನಮಗೆ ಕೆಲವು ಮಿತಿಗಳಿವೆ ಎಂದು ಹೇಳಿದರು.

ram setu

ಸ್ವಲ್ಪ ಮಟ್ಟಿಗೆ ಬಾಹ್ಯಾಕಾಶ ತಂತ್ರಜ್ಞಾನದ ಮೂಲಕ ತುಣುಕುಗಳು, ಕೆಲವು ರೀತಿಯ ಸುಣ್ಣದ ಕಲ್ಲುಗಳನ್ನು ಕಂಡುಹಿಡಿಯಲು ಸಾಧ್ಯವಾಗಿದೆ. ಇದು ಅವಶೇಷಗಳು ಅಥವಾ ಸೇತುವೆಯ ಭಾಗಗಳೇ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ಉತ್ತರಿಸಿದರು.

ಸಂಕ್ಷಿಪ್ತವಾಗಿ ಹೇಳುವುದಾದರೆ ಅಲ್ಲಿ ಅಸ್ತಿತ್ವದಲ್ಲಿದ್ದ ರಚನೆಯನ್ನು ನಿಖರವಾಗಿ ಗುರುತಿಸುವುದು ಕಷ್ಟ, ಆದರೆ ಆ ರಚನೆಗಳು ಅಸ್ತಿತ್ವದಲ್ಲಿವೆ ಎಂಬುದಕ್ಕೆ ನೇರ ಅಥವಾ ಪರೋಕ್ಷವಾಗಿ ಕೆಲವು ರೀತಿಯ ಸೂಚನೆಗಳಿವೆ. ಬಾಹ್ಯಾಕಾಶ ಇಲಾಖೆ ರಾಮಸೇತು ಬಗ್ಗೆ ಅಧ್ಯಯನದಲ್ಲಿ ತೊಡಗಿಸಿಕೊಂಡಿದೆ ಎಂದು ಸಂಸದರೊಂದಿಗೆ ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ ಎಂದು ಜೀತೇಂದ್ರ ಸಿಂಗ್(Jitendra Singh) ಹೇಳಿದರು. ಇದನ್ನೂ ಓದಿ: ರಾಮ ಸೇತುವೆ ಅಸ್ತಿತ್ವ ನಿಜ ಅಂತಿದೆ ಅಮೆರಿಕ ವಾಹಿನಿಯ ಈ ಪ್ರೋಮೋ

ಹಿಂದೂ ಪುರಾಣಗಳಲ್ಲಿ ತಮಿಳುನಾಡಿನ ಆಗ್ನೇಯ ಕರಾವಳಿಯಲ್ಲಿರುವ ಪಂಬನ್ ದ್ವೀಪ ಮತ್ತು ಮನ್ನಾರ್ ದ್ವೀಪದ ನಡುವಿನ ಸುಣ್ಣದ ಕಲ್ಲುಗಳ ಸಂಯೋಜನೆಯನ್ನು ರಾಮ ಸೇತು ಕರೆಯಲಾಗುತ್ತದೆ. ಯುಪಿಎ-1 ಅವಧಿಯಲ್ಲಿನ ವಿವಾದಿತ ಸೇತುಸಮುದ್ರಂ ಹಡಗು ಕಾಲುವೆ ಯೋಜನೆಯ ವಿರುದ್ಧ ಸುಬ್ರಮಣಿಯನ್‌ ಸ್ವಾಮಿ(Subramanian Swamy) ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

2018ರಲ್ಲಿ ಸೇತುಸಮುದ್ರಂ(Sethusamudram) ಯೋಜನೆಗಾಗಿ ಮೊದಲು ನಿಗದಿಯಾಗಿದ್ದ ಮಾರ್ಗಕ್ಕೆ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಲಾಗುವುದು. ರಾಷ್ಟ್ರದ ಹಿತದೃಷ್ಟಿಯಿಂದ ರಾಮಸೇತುವೆಗೆ ಯಾವುದೇ ಹಾನಿ ಮಾಡದಂತೆ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಹಿಂದೆ ಅಫಿಡವಿಟ್‍ನಲ್ಲಿ ಸುಪ್ರೀಂಗೆ ತಿಳಿಸಿತ್ತು. ಕೇಂದ್ರದಿಂದ ಈ ನಿರ್ಧಾರ ಬಂದ ಕೂಡಲೇ ಸುಬ್ರಮಣಿಯನ್‌ ಸ್ವಾಮಿ ರಾಮ ಸೇತುವೆಯನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವಾಗಿ(National Heritage Monument) ಘೋಷಿಸುವಂತೆ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ.

Subramanian Swamy

ಪ್ರಾಚೀನ ಪುರಾಣದ ದಂತಕತೆಗಳನ್ನೊಳಗೊಂಡ ರಾಮಸೇತು ಸುಣ್ಣದ ಕಲ್ಲುಗಳಿಂದ ಮಾಡಲ್ಪಟ್ಟಿದೆ. ಇದು ತಮಿಳುನಾಡಿನ ಆಗ್ನೇಯ ಕರಾವಳಿಯ ರಾಮೇಶ್ವರದಿಂದ ಶ್ರೀಲಂಕಾದ ವಾಯುವ್ಯ ಕರಾವಳಿಯ ಮನ್ನಾರ್ ದ್ವೀಪಕ್ಕೆ ಸಂಪರ್ಕಿಸುತ್ತದೆ. ಹಿಂದೂ ಪುರಾಣ ಹಾಗೂ ರಾಮಾಯಣದಲ್ಲಿ ರಾಮನು ರಾವಣನ ವಿರುದ್ಧ ಹೋರಾಡಲು ಲಂಕೆಗೆ ಹೋಗುತ್ತಿದ್ದಾಗ ರಾಮನ ಸೈನ್ಯ ಈ ಸೇತುವೆ ನಿರ್ಮಾಣ ಮಾಡಿದೆ ಎಂದು ಉಲ್ಲೇಖವಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *