ತಿರುವನಂತಪುರಂ: ಕೇರಳದ (Kerala) ಕೊಟ್ಟಾಯಂ (Kottayam) ಜಿಲ್ಲೆಯ 3 ಪಂಚಾಯಿತಿಗಳಲ್ಲಿ ಏಕಾಏಕಿ ಹಕ್ಕಿ ಜ್ವರ (Bird Flu) ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ 6,000ಕ್ಕೂ ಅಧಿಕ ಪಕ್ಷಿಗಳನ್ನು (Birds) ಹತ್ಯೆ ಮಾಡಲಾಗಿದೆ.
ಈಗಾಗಲೇ ಜಗತ್ತಿನಾದ್ಯಂತ ಕೊರೊನಾ ಭೀತಿ ಆವರಿಸಿದ್ದು, ಈ ಮಧ್ಯೆ ದೇಶದಲ್ಲಿ ಹಕ್ಕಿ ಜ್ವರ ಸದ್ದು ಮಾಡುತ್ತಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ವೇಚೂರು, ನಿಂದೂರು ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ 6,017 ಪಕ್ಷಿಗಳನ್ನು ಸಂಹರಿಸಲಾಗಿದೆ. ಅದರಲ್ಲೂ ಹೆಚ್ಚಾಗಿ ಬಾತುಕೋಳಿಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕೇರಳದ ವೇಚೂರಿನಲ್ಲಿ ಸುಮಾರು 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನಿಂದೂರಿನಲ್ಲಿ 2,753 ಬಾತುಕೋಳಿಗಳು ಮತ್ತು ಅರ್ಪೂಕರದಲ್ಲಿ 2,975 ಬಾತುಕೋಳಿಗಳನ್ನು ಕೊಲ್ಲಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ರೆಡ್ಡಿ ಪಕ್ಷದಿಂದ ಬಿಜೆಪಿಗೆ ಸಂಕಷ್ಟ ಆಗುತ್ತಾ? – ಅಂಕಿ ಸಂಖ್ಯೆ ಏನು ಹೇಳುತ್ತೆ?
ಈ ಹಕ್ಕಿ ಜ್ವರದ ಭೀತಿಯಿಂದಾಗಿ ಇಂದು ಮುಂಜಾನೆ ಕೇರಳದ ರೈತರು ಬಾತುಕೋಳಿಗಳನ್ನು ಹಿಡಿದು ಅವುಗಳನ್ನು ಆರೋಗ್ಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಕೇರಳದಲ್ಲಿ ಹಕ್ಕಿಜ್ವರದ ಹರಡುತ್ತಿರುವುದರ ಬಗ್ಗೆ ವರದಿಯಾದ ಬೆನ್ನಲ್ಲೇ ಲಕ್ಷದ್ವೀಪಗಳಿಗೆ ಕೋಳಿಯನ್ನು ಸಾಗಿಸುವುದನ್ನು ನಿಷೇಧಿಸಿದೆ ಎಂದು ಅಲ್ಲಿನ ಆಡಳಿತ ತಿಳಿಸಿದೆ. ಇದನ್ನೂ ಓದಿ: ರಾಜಕೀಯ ಜಂಜಾಟದ ನಡುವೆ ಯುವಕರೊಂದಿಗೆ ಕಬಡ್ಡಿ ಆಡಿದ ಶಾಸಕ ಶಿವಲಿಂಗೇಗೌಡ