ರಾಮನಗರ: ಮಹಿಳೆಯೊಬ್ಬರು (Women) ರಸ್ತೆ ಬದಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ಜಿಲ್ಲೆಯಲ್ಲಿ ನಡೆದಿದೆ.
ಕನಕಪುರ (Kanakapura) ತಾಲ್ಲೂಕಿನ ಮಾರಣ್ಣ ದೊಡ್ಡಿಯ ರಸ್ತೆ ಬಳಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮೃತ ಮಗಿಳೆ ಶೃತಿ (32) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ತೋಟದ ಮನೆಗೆ ಹೋಗಲು ಅಡ್ಡಿಯಾಗಿದ್ದನೆಂದು ಗಂಡನನ್ನೇ ಕೊಲೆಗೈದ ಪತ್ನಿ
ಕನಕಪುರ ಟೌನ್ ಕುರುಪೇಟೆ ಸೊಲ್ಲಾಪುರದಮ್ಮ ಬೀದಿ ನಿವಾಸಿ ಶೃತಿಯನ್ನ ಕೊಲೆ ಮಾಡಿ ರಸ್ತೆ ಬದಿ ಮೃತದೇಹ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸಾತನೂರು ಪೊಲೀಸರು (Sathanur Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಗೆ 6 ಸ್ಪರ್ಧಿಗಳ ಎಂಟ್ರಿ: ಕಾದಿದೆ ಮತ್ತೊಂದು ಶಾಕ್
ಇತ್ತೀಚೆಗೆ ರಾಮನಗರ ಜಿಲ್ಲೆಯ ಕೆಂಪೇಗೌಡನ ದೊಡ್ಡಿ ಬಳಿ ದಶಪಥ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಹೆಂಡತಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಚನ್ನಪಟ್ಟಣ ತಾಲೂಕಿನ ರಾಮನರಸಿಂಹರಾಜಪುರ (ಕೃಷ್ಣಾಪುರ) ನಿವಾಸಿ ದೇಸೇಗೌಡನನ್ನು(45) ಕೊಲೆಗೈದಿರುವುದು ಸಾಬೀತಾಗಿತ್ತು. ಬಳಿಕ ಹೆಂಡತಿ ಹಾಗೂ ಪ್ರಿಯಕರನನ್ನ ಬಂಧಿಸಲಾಗಿತ್ತು.