ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಮಹಿಳಾ ಕಾರ್ಯಕರ್ತೆಯರು – ಇಬ್ಬರ ಬಂಧನ

Public TV
1 Min Read
BALLARY CONGRESS

ಬಳ್ಳಾರಿ: ನಗರದಲ್ಲಿ ನಡೆದ ಕಾಂಗ್ರೆಸ್ (Congress) ಪಕ್ಷದ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು (Police) ಬಂಧಿಸಿದ್ದಾರೆ (Arreste).

CONGRESS

ಜನವರಿ 3 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಖಾಸಗಿ ಹೋಟೆಲ್‍ನಲ್ಲಿ (Hotel) ಕಾಂಗ್ರೆಸ್ ಪಕ್ಷದ ಸಭೆ ನಡೆಸಲಾಗಿತ್ತು. ಈ ವೇಳೆ ಹೊಸಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ ಮತ್ತು ಶಿಲ್ಪಾ ನಡುವೆ ಮಾರಾಮಾರಿ ನಡೆದಿತ್ತು. ಕಲ್ಯಾಣ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಶಿಲ್ಪಾ, ಮತ್ತು ಯೋಗಲಕ್ಷ್ಮಿ ಹಾಗೂ ಸಂದೀಪ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಕೂಡ ನಡೆದಿತ್ತು. ಆ ಬಳಿಕ ಶಿಲ್ಪಾ ಅವರು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯೋಗಲಕ್ಷ್ಮಿ ಮತ್ತು ಇತರರ ವಿರುದ್ಧ ದೂರು ಸಲ್ಲಿಸಿ, ಜಾತಿನಿಂದನೆ ಮತ್ತು ಮಾನಹಾನಿ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಅತಿಯಾದ ಹೇಳಿಕೆಗಳೇ ಕಾಂಗ್ರೆಸ್‌ಗೆ ದುಬಾರಿಯೋ? ಲಾಭವೋ!

ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಪಟ್ಟಣ ಪೊಲೀಸರು ಯೋಗಲಕ್ಷ್ಮಿ ಮತ್ತು ಇನ್ನೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಹಿಂದೆಯೂ ಕೂಡಾ ಈ ಇಬ್ಬರ ನಡುವೆ ಹಲವಾರು ಬಾರಿ ಜಗಳ ನಡೆದಿತ್ತು. ಇದೀಗ ಈ ಹಿಂದಿನ ದ್ವೇಷಕ್ಕೆ ಮತ್ತೊಮ್ಮೆ ಜಗಳವಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಇದನ್ನೂ ಓದಿ: ಸಿದ್ದು ನಾಯಿಮರಿ ಹೇಳಿಕೆ: ಸಿಎಂ ಸಾಫ್ಟ್ ನಡೆ – ಒಗ್ಗಟ್ಟಿಂದ ಮುಗಿಬಿದ್ದ ಬಿಜೆಪಿ ಟೀಮ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *