Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಕೆಜಿಎಫ್ 2’ ಬಗ್ಗೆ ನಾನು ಮಾತನಾಡಿದ್ದೇ ಬೇರೆ, ಚರ್ಚೆ ಆಗಿದ್ದೇ ಬೇರೆ: ನಟ ಕಿಶೋರ್

Public TV
Last updated: January 9, 2023 9:35 am
Public TV
Share
2 Min Read
kishor
SHARE

ತಾವು ಕೆಜಿಎಫ್ 2 ಸಿನಿಮಾ ಬಗ್ಗೆ ಆಡಿದ ಮಾತನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ನಟ ಕಿಶೋರ್ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ತಾವು ಆಡದ ಪದಗಳನ್ನು ಬಳಸಿ ತಪ್ಪಾಗಿ ಗ್ರಹಿಸುವಂತೆ ಮಾಡಲಾಗಿದೆ. ನಾನು ಕೆಲವು ಮಾತುಗಳನ್ನು ಆಡಿರಲೇ ಇಲ್ಲ, ಅದನ್ನು ಬೇರೆ ರೀತಿಯಲ್ಲಿ ತಲುಪಿಸುವ ಪ್ರಯತ್ನ ಆಗಿದೆ. ಇದಕ್ಕೆ ನನ್ನ ವಿಷಾದವಿದೆ ಎಂದು ಕಿಶೋರ್ ಬರೆದುಕೊಂಡಿದ್ದಾರೆ.

KISHORE 1

ರಶ್ಮಿಕಾ ವಿಷಯದ ಚರ್ಚೆಯಲ್ಲಿ ಆಯ್ಕೆಯ ಸ್ವಾತಂತ್ರ್ಯದ ಮಾತುಗಳ ನಡುವೆ ಹೇಗ ಸುಳಿದ ಮಾತುಗಳಲ್ಲಿ ಯಾರ ಮನಸ್ಸನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಮೈಂಡ್ ಲೆಸ್ ನನ್ನ ಪದವಲ್ಲ. ಚರ್ಚಿಸಲು, ಚಿಂತಿಸಲು ನಿಜವಾದ ಸಮಸ್ಯೆಗಳು ಹಲವಿರುವಾಗ ನನ್ನ ಲೋಕಾಭಿರಾಮದ ಯಾವುದೇ ಮಾತು ಚರ್ಚೆಗೆ ಗ್ರಾಸವಾಗುವುದೋ, ಜನರ ಸಮಯ ಹಾಳು ಮಾಡುವುದೋ ನನ್ನ ಮಟ್ಟಿಗೆ ಅಕ್ಷಮ್ಯ. ಆದರೂ ಅದಕ್ಕಾಗಿ ಕ್ಷಮೆ ಇರಲಿ ಎಂದು ನಟ ಕಿಶೋರ್ ಪ್ರತಿಕ್ರಿಯಿಸಿದ್ದಾರೆ.

KISHORE

ಕಿಶೋರ್ ದಿನಕ್ಕೊಂದು ಆಡುತ್ತಿರುವ ಮಾತುಗಳು ಭಾರತೀಯ ಸಿನಿಮಾ ರಂಗದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕುತ್ತಿವೆ. ಕಾಂತಾರ ಸಿನಿಮಾದಿಂದ ಶುರುವಾದ ಅವರ ಮಾತುಗಳು, ಕೆಜಿಎಫ್ 2 ಅನ್ನೂ ಸೇರಿಸಿಕೊಂಡವು. ಇದೀಗ ಬಾಲಿವುಡ್ ನಲ್ಲಿ ನಡೆಯುತ್ತಿರುವ ಬಾಯ್ಕಾಟ್ ಕುರಿತಾಗಿಯೂ ಅವರು ಬರೆದುಕೊಂಡಿದ್ದಾರೆ. ಬಾಲಿವುಡ್ ಅನ್ನು ನಾವು ರಕ್ಷಿಸಬೇಕು. ಇಡೀ ದೇಶವೇ ಬಾಲಿವುಡ್ ಪರ ನಿಲ್ಲಬೇಕು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿಗೆ ಶೂಟಿಂಗ್‌ ವೇಳೆ ಅಪಘಾತ: ಆಸ್ಪತ್ರೆಗೆ ದಾಖಲು

KISHORE 2

ನಾನಾ ಕಾರಣಗಳಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಬಾಲಿವುಡ್ ಅನ್ನು ತೆಗಳುವ ವಾತಾವರಣ ಭಾರತದಲ್ಲಿ ಉಂಟಾಗಿದೆ. ಅನೇಕ ಸಿನಿಮಾಗಳು ಬಾಯ್ಕಾಟ್ ಬಿಸಿಗೆ ಬೆಂದು ಹೋದವು. ಅನೇಕ ಕಲಾವಿದರು ವೈಯಕ್ತಿಕ ನಿಂದನೆಗೆ ಗುರಿಯಾದರು. ಹಲವಾರು ನಿರ್ದೇಶಕರು ಹಾಗೂ ತಂತ್ರಜ್ಞರು ಕೂಡ ನಿಂದನೆಗೆ ಒಳಗಾದರು. ಅದರಲ್ಲೂ ಶಾರುಖ್ ಖಾನ್, ಸಲ್ಮಾನ್ ಖಾನ್ ರೀತಿಯ ಖಾನ್ ಖಾಂದಾನ್ ಗಳನ್ನೂ ಒಟ್ಟಾಗಿಸಿ ಸೇರಿಸಿ ಮಂಗಳಾರತಿ ಮಾಡಲಾಯಿತು. ಈ ಕಡೆ ದೀಪಿಕಾ ಪಡುಕೋಣೆ, ಕಂಗನಾ ರಣಾವತ್ ಕೂಡ ಬೈಯಿಸಿಕೊಳ್ಳುವುದನ್ನು ಬಿಡಲಿಲ್ಲ.

kantara 1

ಇದೆಲ್ಲವನ್ನೂ ಕಂಡಿರುವ ಕಿಶೋರ್, ಇನ್ಸ್ಟಾದಲ್ಲಿ ಸುದೀರ್ಘ ಬರಹವೊಂದನ್ನು ಪೋಸ್ಟ್ ಮಾಡಿದ್ದಾರೆ. ಆ ಬರಹದಲ್ಲಿ ‘ಇಡೀ ದೇಶದ ಚಿತ್ರರಂಗ ಒಕ್ಕೊರಲಿನಿಂದ ಬಾಲಿವುಡ್ ನ ವಿರುದ್ಧ ನಡೆಯುತ್ತಿರುವ ಬಾಯ್ಕಾಟ್ ಟ್ರೆಂಡನ್ನು, ಮತಾಂಧ ಗೂಂಡಾಗಿರಿಯನ್ನು, ದ್ವೇಷದ ರಾಜಕೀಯವನ್ನು ಖಂಡಿಸಿ ಬಾಲಿವುಡ್ ನ ಪರವಾಗಿ ನಿಲ್ಲುವ ಕಾಲ ಬಂದಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಒಂದು ವ್ಯಾಪಾರ ಅಥವಾ ಉದ್ಯಮದ ಸುರಕ್ಷತೆಯನ್ನು ಖಚಿತಪಡಿಸಲು ಸಾಧ್ಯವಾಗದಿರುವುದು ಸರ್ಕಾರಗಳ ವೈಫಲ್ಯಕ್ಕೆ ಸಾಕ್ಷಿ. ಇಷ್ಟಾದರೂ ಚಿತ್ರರಂಗದವರು ಮಾತನಾಡದೇ ಕೂತಿರುವ ಹೆದರಿಕೆಯ ವಾತಾವರಣ ಸೃಷ್ಟಿಯಾಗಿರುವುದು, ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತ ಸರ್ಕಾರಿ ಅಧಿಕಾರಿಗಳಿಗೆ ನಾಚಿಕೆಗೇಡಿನ ಸಂಗತಿ. ಇದು ಸಮಾಜವನ್ನು ವಿಷಪೂರಿತಗೊಳಿಸುವ ಸ್ಪಷ್ಟ ಕಾನೂನು ಉಲ್ಲಂಘನೆಯಾಗಿದ್ದು, ಇದನ್ನು ತಡೆಯಬೇಕಿದೆ, ಶಿಕ್ಷಿಸಬೇಕಾಗಿದೆ. ದ್ವೇಷದ ಈ ಬೆಂಕಿ ಸ್ಥಳೀಯ ಚಿತ್ರೋದ್ಯಮಗಳಿಗೂ ವ್ಯಾಪಿಸುವ ಮುನ್ನ’ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodControversyKGF-2Kishoreಕಿಶೋರ್ಕೆಜಿಎಫ್-2ಬಾಲಿವುಡ್ವಿವಾದ
Share This Article
Facebook Whatsapp Whatsapp Telegram

You Might Also Like

Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
20 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
26 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
43 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
47 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
50 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?