ಆರ್‌ಎನ್ ರವಿ ಭಾಷಣಕ್ಕೆ ಸ್ಟಾಲಿನ್ ಆಕ್ಷೇಪ – ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

Public TV
2 Min Read
RN Ravi MK Stalin 1

ಚೆನ್ನೈ: ತಮಿಳುನಾಡಿನ ರಾಜ್ಯಪಾಲ (Tamil Nadu Governor) ಆರ್‌ಎನ್ ರವಿ (RN Ravi) ಅವರು ಸೋಮವಾರ ವಿಧಾನಸಭಾ ಅಧಿವೇಶನದ ವೇಳೆ ಗದ್ದಲ ಕೋಲಾಹಲದ ನಡುವೆ ವಿಧಾನಸಭೆಯಿಂದ (Assembly) ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ಕಡತಕ್ಕೆ ತೆಗೆದುಕೊಳ್ಳಬೇಕು, ರಾಜ್ಯಪಾಲರು ಸೇರಿಸಿರುವ ಉಳಿದ ಭಾಷಣವನ್ನು ತೆಗೆದುಹಾಕಬೇಕು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಸ್ಪೀಕರ್‌ಗೆ ಹೇಳಿದ್ದು, ಈ ಬಳಿಕ ಗವರ್ನರ್ ಆರ್‌ಎನ್ ರವಿ ಸದನದಿಂದ ಹೊರ ನಡೆದರು. ಇದನ್ನೂ ಓದಿ: ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ – ಇಬ್ಬರಿಗೆ 25 ಸಾವಿರ ದಂಡ

MK Stalin RN Ravi

ಜಾತ್ಯತೀತತೆ ಸೇರಿದಂತೆ ಪೆರಿಯಾರ್, ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಮತ್ತು ಕರುಣಾನಿಧಿ ಅವರಂತಹ ನಾಯಕರ ಉಲ್ಲೇಖವನ್ನು ರಾಜ್ಯ ಸರ್ಕಾರ ಭಾಷಣದಲ್ಲಿ ಸಿದ್ಧಪಡಿಸಿತ್ತು. ಆದರೆ ಭಾಷಣದ ಆ ಭಾಗಗಳನ್ನು ಅವರು ಬಿಟ್ಟುಬಿಟ್ಟಿದ್ದಾರೆ. ಆಡಳಿತಾರೂಢ ಡಿಎಂಕೆ ಪ್ರಚಾರ ಮಾಡುವ ದ್ರಾವಿಡ ಮಾದರಿಯ ಉಲ್ಲೇಖವನ್ನೂ ಅವರು ಓದಿಲ್ಲ. ರಾಜ್ಯಪಾಲರ ಕ್ರಮ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಎಂಕೆ ಸ್ಟಾಲಿನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಆರ್‌ಎನ್ ರವಿ ಅವರು ತಮಿಳುನಾಡು ಹೆಸರು ಸರಿಯಾಗಿಲ್ಲ ಎಂದು ಹೇಳಿರುವುದಕ್ಕೆ ಕಿಡಿ ಕಾರಿದ ಡಿಎಂಕೆ ಶಾಸಕರು, ಇಲ್ಲಿ ನೀವು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗಳಂತಹ ಸಿದ್ಧಾಂತಗಳನ್ನು ಹೇರಬೇಡಿ. ಇದು ನಾಗಾಲ್ಯಾಂಡ್ ಅಲ್ಲ. ಇದು ನಮ್ಮ ಹೆಮ್ಮೆಯ ತಮಿಳುನಾಡು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪುರಭವನದಲ್ಲಿ ಭಾರೀ ಹೈಡ್ರಾಮಾ – ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *