ವ್ಯಕ್ತಿಯ ಮೇಲೆ ಹಲ್ಲೆ ಮಾಡಿ 2 ಕೈಗಳನ್ನು ಕತ್ತರಿಸಿ ಕೊಂಡೊಯ್ದ ದುಷ್ಕರ್ಮಿಗಳು

Public TV
1 Min Read
police

ಚಂಡೀಗಢ: ವ್ಯಕ್ತಿಯೊಬ್ಬನ (Man) 2 ಕೈಗಳನ್ನು (Hand) ಕತ್ತರಿಸಿ ಅದನ್ನು ತೆಗೆದುಕೊಂಡು ಹೋದ ಘಟನೆ ಹರಿಯಾಣದ (Haryana) ಕುರುಕ್ಷೇತ್ರದಲ್ಲಿ ನಡೆದಿದೆ.

ಜುಗ್ನು ಹಲ್ಲೆಗೊಳಗಾದ ವ್ಯಕ್ತಿ. ಹತ್ತರಿಂದ ಹನ್ನೆರಡು ಮಂದಿ ಅಪರಿಚಿತರು ಮುಖ ಮುಚ್ಚಿಕೊಂಡು ಕುರುಕ್ಷೇತ್ರ ಹವೇಲಿಗೆ ನುಗ್ಗಿದ್ದರು. ಈ ವೇಳೆ ಅಲ್ಲೇ ಇದ್ದ ಜುಗ್ನು ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಆತನ 2 ಕೈಗಳನ್ನು ಕತ್ತರಿಸಿದ್ದಾರೆ. ಅಷ್ಟಕ್ಕೆ ತೃಪ್ತರಾಗದ ಅವರು ಅದನ್ನು ತೆಗೆದುಕೊಂಡು ಹೋಗಿದ್ದಾರೆ.

crime

ಈ ವೇಳೆ ರಕ್ತದ ಮಡುವಿನಲ್ಲಿ ಮಲಗಿದ್ದ ಜಗ್ನುನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ:  ಮದುವೆ ಆಗಿಲ್ಲ ಎಂದು ಕಿಚಾಯಿಸಿದ ಸ್ನೇಹಿತನ ಕೊಲೆ

police jeep 1

ಘಟನೆಗೆ ಸಂಬಂಧಿಸಿದಂತೆ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶಿಲಿಸಲಾಗುತ್ತಿದ್ದು, ಇನ್ನೂ ಘಟನೆಯ ಹಿಂದಿನ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೇಮಾವತಿ ದಡದಲ್ಲಿ ಮೀನು ಹಿಡಿಯಲು ಹೋಗಿದ್ದವರಿಗೆ ಗುಂಡೇಟು- ಓರ್ವ ಸಾವು, ಇಬ್ಬರು ಗಂಭೀರ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *