ಕಾಸರಗೋಡಿನ ಬೇಳದಲ್ಲಿ ಅದ್ದೂರಿಯಾಗಿ ನಡೆಯಿತು 17ನೇ ಕವಿತಾ ಫೆಸ್ಟ್

Public TV
1 Min Read
Kavita Fest 2

ಮಂಗಳೂರು: ಕವಿತಾ ಟ್ರಸ್ಟ್ (Kavita Trust) ವತಿಯಿಂದ ವರ್ಷಂಪ್ರತಿ ನಡೆಯುವ ‘ಕವಿತಾ ಫೆಸ್ಟ್’ (Kavita Fest) ಈ ಬಾರಿ ಕಾಸರಗೋಡು (Kasaragod) ಜಿಲ್ಲೆಯ ಬೇಳದಲ್ಲಿ (Bela)ಅದ್ದೂರಿಯಾಗಿ ನಡೆಯಿತು.

kavita fest 4

ಕಾರ್ಯಕ್ರಮನ್ನು ಕೊಂಕಣಿ ಬರಹಗಾರ ಹಾಗೂ ಪತ್ರಕರ್ತರಾದ ಆಸ್ಟಿನ್ ಡಿ ಸೋಜಾ ಪ್ರಭು ಉದ್ಘಾಟಿಸಿದರು. ಯುವ ಬರಹಗಾರರಾದ ಸ್ಟ್ಯಾನಿ ಬೇಳ ಹಾಗೂ ಕೆಬಿಎಂ ಗೋವಾದ ಅಧ್ಯಕ್ಷ ಅನ್ವೇಶ್ ಸಿಂಗ್ಭಾಳ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು.

Kavita Fest

ಕಾರ್ಯಕ್ರಮದ ಭಾಗವಾಗಿ ನೆಲ್ಸನ್ ಹಾಗೂ ಲವೀನಾ ರೋಡ್ರಿಕ್ಸ್ ಪ್ರಾಯೋಜಕತ್ವದ ಚಾಫ್ರಾ ದೆಕೋಸ್ತಾ ಸ್ಮಾರಕ ಅಖಿಲ ಭಾರತ ಕವನ ವಾಚನ ಸ್ಪರ್ಧೆ ನಡೆಯಿತು. ಕೊಂಕಣಿ ಬರಹಗಾರ, ನ್ಯಾಯವಾದಿ ಸಂತೋಷ್ ಪೆರ್ಲ ಹಾಗೂ ಕೊಂಕಣಿ-ಕನ್ನಡ ಕವಿ ವಿಲ್ಸನ್ ಕಟೀಲ್ ಅವರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು.

Kavita Fest 3

ಕವಿತಾ ಟ್ರಸ್ಟ್ ಟ್ರಸ್ಟಿಗಳಾದ ವಿಲಿಯಂ ಪಾಯ್ಸ್ ಹಾಗೂ ಟೈಟಸ್ ನೊರೊನ್ಹಾ ಸಂವಾದವನ್ನು ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ಕೊಂಕಣಿ ಕವಿ ಹಾಗೂ ಸಾಹಿತಿಗಳಾದ ವಿಲ್ಸನ್ ಕಟೀಲ್ ರಚನೆಯ ‘ಚಿತುರ್ಲೆಚೆ ಅಚ್ಛೇ ದಿನ್’ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಸಿದ್ದರಾಮಯ್ಯ – ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವ ತಂತ್ರ?

Kavita Fest 1

ನಿರಾಕರ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಪ್ರಶಾಂತ್ ನಾಯ್ಕ್ ಅವರು ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಗೀತಾರಚನೆಕಾರ ರತ್ನಮಾಲ ದಿವಾಕರ್ ಹಾಗೂ ಅನಿವಾಸಿ ಉದ್ಯಮಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಿರಿಯ ಕೊಂಕಣಿ ಕವಯತ್ರಿ ಇಂದು ಅಶೋಕ್ ಗೇರುಸೊಪ್ಪೆಯವರಿಗೆ ಮಥಾಯಸ್ ಕುಟಾಮ್ ಕವಿತಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಶತಕ ಹೊಡೆದು ಸಚಿನ್‌ ದಾಖಲೆ ಸರಿಗಟ್ಟಿದ ಕಿಂಗ್‌ ಕೊಹ್ಲಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *