Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದಲ್ಲಿ ಮತ್ತೊಂದು ದೈವದ ಸಿನಿಮಾ : ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕನ್ನಡದಲ್ಲಿ ಮತ್ತೊಂದು ದೈವದ ಸಿನಿಮಾ : ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

Cinema

ಕನ್ನಡದಲ್ಲಿ ಮತ್ತೊಂದು ದೈವದ ಸಿನಿಮಾ : ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

Public TV
Last updated: January 14, 2023 3:05 pm
Public TV
Share
4 Min Read
FotoJet 3 18
SHARE

ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದರಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಇವರು ಕೊರಗಜ್ಜನ ಜೊತೆ ಬರುವ ಗುಳಿಗನ್ ಪಾತ್ರ ನಿರ್ವಹಿಸಿದ್ದಾರೆ. ಅಂತರರಾಷ್ಟ್ರೀಯ ಈ ಕಲಾವಿದ ಇದೇ ಮೊದಲಬಾರಿಗೆ ಕನ್ನಡ ಸಿನಿಮಾವೊಂದರಲ್ಲಿ ನಟಿಸಿರುವುದು ವಿಶೇಷ.

FotoJet 6 9

ಈ ಸಿನಿಮಾ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ‘ನಿನ್ನೆಯಷ್ಟೇ ಕೊರಗಜ್ಜ ಕೋಲು ಕೊಡುವ ಮೂಲಕ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಶೂಟಿಂಗ್ ಮುಗಿಸಲಾಯಿತು. ಚಿತ್ರೀಕರಣ ಸಂದರ್ಭದಲ್ಲಿ ಸಾಕಷ್ಟು ಪವಾಡಗಳು ನಡೆದಿದ್ದು, ಎಲ್ಲರ ಅನುಭಕ್ಕೆ ಬಂದಿದೆ. ಇದು ಕೊರಗಜ್ಜ ಎಂದು ಕರೆಯುವ 22, 23 ವರ್ಷ ಬದುಕಿದ್ದ ಹುಡುಗನ ಕಥೆ. ಇದರಲ್ಲಿ ಹಾಲಿವುಡ್ ಕೋರಿಯೋಗ್ರಾಫರ್ ಹಾಗೂ ನಟ ಸಂದೀಪ್ ಸೋಪರ್ಕರ್ ಗುಳಿಗನ್ ಪಾತ್ರ ಮಾಡಿದ್ದಾರೆ. ಇದು ಕೊರಗಜ್ಜನ ಜೊತೆಗೆ ಸಾಗುತ್ತದೆ. ಗುಳಿಗನ್ ಪಾತ್ರವನ್ನು ಡ್ಯಾನ್ಸ್ ಬೇಸ್ ನಲ್ಲಿ ತೋರಿಸಲಾಗಿದ್ದು ಆ ಪಾತ್ರಕ್ಕೆ ಸಂದೀಪ್ ಅವರು ಸೂಕ್ತರಾಗಿದ್ದಾರೆ. ಈ ಮೊದಲು ಕೊರಗಜ್ಜನ ಬಗ್ಗೆ 7-8 ಜನ ಸಿನಿಮಾ ಮಾಡಲು ಪ್ರಯತ್ನ ಮಾಡಿದ್ರು ಆಗಿರಲಿಲ್ಲ. ನಮಗೆ ದೇವರ ಅಪ್ಪಣೆ ಸಿಕ್ಕಮೇಲೆ ಈ ಸಿನಿಮಾ ಮಾಡಲು ಮುಂದಾದೆವು. 12ನೇ ಶತಮಾನದ ಕಥೆ ಇದಾಗಿದ್ದು, ಚಿತ್ರದಲ್ಲಿ ಬುರ್ದಗೋಳಿ ಉತ್ಪತ್ತಿ ಕಲ್ಲು ಮುಖ್ಯವಾಗುತ್ತದೆ. ನಾವು ಈ ದೃಶ್ಯವನ್ನು ಸೋಮೇಶ್ವರದಲ್ಲಿ ಶೂಟ್ ಮಾಡುವ ಮೂಲಕ ಚಾಲನೆ ನೀಡಿದೆವು. ನಮಗೆಲ್ಲ ಶೂಟಿಂಗ್ ಸಂದರ್ಭದಲ್ಲಿ ಒಂದಿಷ್ಟು ಅನುಭವ ಆಗಿವೆ. ಈ ಸಿನಿಮಾವನ್ನು ನಾನು ಮಾಡಲಿಲ್ಲ. ಆ ದೈವ  ನನ್ನ ಕೈಲಿ ಮಾಡಿಸಿದ್ದಾರೆ. ನಮ್ಮ ಚಿತ್ರದಲ್ಲಿ ಭೈರಕ್ಕಿ ಪಾತ್ರ ಮುಖ್ಯವಾಗಿದ್ದು, ಭೈರಕ್ಕಿ ಕೊರಗಜ್ಜನ ಸಾಕು ತಾಯಿ. ಈ ಪಾತ್ರವನ್ನು ನಟಿ ಶ್ರುತಿ ನಿರ್ವಹಿಸಿದ್ದಾರೆ. ಇಂದು ಮಂಗಳೂರು ಕಡೆ ಮನೆ ಮನೆಯಲ್ಲಿ ಕೊರಗಜ್ಜನ ಆರಾಧಿಸುತ್ತಾರೆ. ಜನ ವಿಸ್ಕಿ, ಬ್ರಾಂದಿ, ಕೊರಗಜ್ಜಗೆ ನೀಡುತ್ತಿದ್ದು, ಅಂದಿನ ಕಾಲದಲ್ಲಿ ಇವುಗಳು ಇರಲಿಲ್ಲ. ಕಳ್ಳಬಟ್ಟಿ ಇತ್ತು. ದೇವರಿಗೆ ನಾವು ಎನೂ ಬೇಕಾದರೂ ಕೊಡಬಹುದು. ಇಂದಿನ ಜನ ವಿಸ್ಕಿ, ಬ್ರಾಂದಿ ಕೊಡುತ್ತಿರುವುದು ಕೊರಗ ಜನಾಂಗಕ್ಕೆ ಬೇಸರ ತಂದಿದೆ. ಈ ಚಿತ್ರದಲ್ಲಿ ಕೊರಗಜ್ಜನ ನೈಜ ಕಥೆ ಹೇಳಲಾಗಿದ್ದು, ಕಥೆಯನ್ನು ಕೊರಗ ಜನಾಂಗದಿಂದ ಕಲೆಕ್ಟ್ ಮಾಡಿ ಸಿನಿಮಾ ಮಾಡಲಾಗಿದೆ’ ಎಂದು ಹೇಳಿದರು. ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮಕ್ಕಾಗಿ ಮತ್ತೆ ಜೊತೆಯಾದ ಬಿಗ್ ಬಾಸ್ ಸ್ಪರ್ಧಿಗಳು

FotoJet 5 12

ನಂತರ ಮಾತನಾಡಿದ ಹಾಲಿವುಡ್ ನಟ ಸಂದೀಪ್ ಸೋಪರ್ಕರ್ ಮಾತನಾಡಿ ‘ಈ ಚಿತ್ರ ನಂಗೆ ಒಳ್ಳೆ ಅನುಭವ ನೀಡಿದೆ. ಈ ತಂಡ ಹಾಗೂ ಸಿನಿಮಾದಲ್ಲಿ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಒಳ್ಳೆಯ ತಂಡ ಇದಾಗಿದ್ದು ಅದ್ಭುತ ಕೆಲಸ ಮಾಡಿದೆ. ನಾನು ಮಾಡಿರುವ ಪಾತ್ರ ಅದ್ಭುತವಾಗಿದ್ದು ಹೊಸ ರೀತಿಯಲ್ಲಿ ಅನುಭವ ನೀಡಿತು. ಈ ಪಾತ್ರವನ್ನು ನಾನು ನನ್ನ ಸಿಸ್ಟರ್ಸ್ ಜೊತೆಗೆ ರೀಸರ್ಚ್ ಮಾಡಿ ಮಾಡಿದ್ದೇನೆ. ಒಳ್ಳೆ ರೀತಿ ಶೂಟಿಂಗ್ ಆಯ್ತು. ಈ ಪಾತ್ರ ಮಾಡಿದ್ದು ಖುಷಿ ಇದ್ದು, ಇದರಲ್ಲಿ ನಾನು ಡ್ಯಾನ್ಸ್ ಜೊತೆ ನಟನೆ ಕೂಡ ಮಾಡಿದ್ದೇನೆ. ಶೂಟಿಂಗ್ ಮಾಡುವ ಸಂದರ್ಭದಲ್ಲಿ ಸಾಕಷ್ಟು ಜನ ಗಲಾಟೆ ಮಾಡಿ 2 ದಿನ ಶೂಟಿಂಗ್ ನಿಂತಿತು. ನಂತರ ನಿರ್ದೇಶಕ, ನಿರ್ಮಾಪಕರು ಕಷ್ಟಪಟ್ಟು ಶೂಟಿಂಗ್ ಮಾಡಿಸಿದರು. ಮೊದಲಬಾರಿಗೆ ಜಾನಪದ ಶೈಲಿಯಲ್ಲಿ ಡ್ಯಾನ್ಸ್ ಮಾಡಿದ್ದು ಶಿವನ ನೃತ್ಯ ಮಾಡಿರುವ ಒಳ್ಳೆ ಅನುಭವ ಮರೆಯಲಾಗದು’ ಎಂದರು. ಕೊರಗಜ್ಜನ ಸಾಕು ತಾಯಿ ಪಾತ್ರ ನಿರ್ವಹಿಸಿರುವ ನಟಿ ಶ್ರುತಿ ಮಾತನಾಡಿ, ‘ಈ ಸಿನಿಮಾ ನನ್ನ ಮನಸ್ಸಿನಲ್ಲಿ ವಿಷೇಶವಾದ ಸ್ಥಾನ ಪಡೆಯುತ್ತದೆ. ನಾನಿಲ್ಲಿ ಭೈರಕ್ಕಿ ಪಾತ್ರ ಮಾಡಿದ್ದೇನೆ. ದೈವದ ಕಥೆ ಅದ್ಭುತವಾಗಿ ಇದ್ದು ಈ ಕಥೆಯನ್ನು ಹೆಕ್ಕಿ ತೆಗೆದ ನಿರ್ದೇಶಕರ ಧೈರ್ಯ ಮೆಚ್ಚಬೇಕು. ಚಿತ್ರಕ್ಕಾಗಿ ನಿರ್ಮಾಪಕರು ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ. ಯಾರಿಗೂ ಸಿಗದೆ ಇರುವ ಅವಕಾಶ ಈ ತಂಡಕ್ಕೆ ಸಿಕ್ಕಿದೆ. ಇದರಲ್ಲಿ ಬರುವ ಪ್ರತಿಯೊಬ್ಬರ ಪಾತ್ರ ಪೇಂಟಿಂಗ್ ತರಾ ಇದ್ದು ನಿರ್ದೇಶಕರು ಅಷ್ಟು ತಯಾರಿ ಮಾಡಿಕೊಂಡು ಸಿನಿಮಾ ಮಾಡಿದ್ದಾರೆ. ಭೈರಕ್ಕಿ ಕೊರಗಜ್ಜ ಸಾಕು ತಾಯಿ 2 ಸೇಡ್ ಪಾತ್ರಕ್ಕಿದೆ. ಇದರಲ್ಲಿ ಕೊರಗಜ್ಜಗೆ ತನಿಯಾ/ ಕಾಂತಾರೆ ಹೆಸರು. ನಾನು ಕಳ್ಳಬಟ್ಟಿ ಮಾರುತ್ತಿರುತ್ತೇನೆ. ಇದರಲ್ಲಿ ತಾಯಿ ಮಗನ ಬಾಂಧವ್ಯವನ್ನು ಅದ್ಭುತವಾಗಿ ತೋರಿಸಲಾಗಿದೆ. ನಮ್ಮ ಜೊತೆ ಸಾಕಷ್ಟು ರಂಗಭೂಮಿ ಕಲಾವಿದರು ಇದರಲ್ಲಿ ನಟನೆ ಮಾಡಿದ್ದಾರೆ. ನಾನು ಈ ಸಿನಿಮಾ ಮಾಡಿದ್ದು ಧನ್ಯತಾ ಭಾವ ಇದೆ’ ಎಂದರು.

FotoJet 4 14

ಇದೇ ಸಂದರ್ಭದಲ್ಲಿ ಮಾತನಾಡಿದ ಮತ್ತೋರ್ವ ನಟಿ ಭವ್ಯ ‘ಈ ಚಿತ್ರದಲ್ಲಿ ನಾನು ವಿಷೇಶವಾದ ಪಾತ್ರ ಮಾಡಿದ್ದು, ಶೂಟಿಂಗ್ ಮಾಡುವಾಗ ಮಿರಾಕಲ್ ಆಗತಾ ಇತ್ತು. ಒಂದು ದೃಶ್ಯದಲ್ಲಿ ಗ್ಲಿಸರಿನ್ ಇಲ್ಲದೆ ಅತ್ತಿದ್ದೇನೆ ಕೂಡ’ ಎಂದು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು. ಚಿತ್ರದ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ‘ತುಳು ನಾಡ ಜನರ ಸಂಸ್ಕೃತಿ ತೋರಿಸುವ ಆಸೆ ಇತ್ತು. ಅದು ಈ ಚಿತ್ರದ ಮೂಲಕ ಇಡೇರಿದೆ. ಸೋಮೇಶ್ವರ, ಉಲ್ಲಾಳ, ಮಡನ್ ತ್ಯಾರ್ ಮುಂತಾದ ಸ್ಥಳದಲ್ಲಿ ಶೂಟಿಂಗ್ ಮಾಡಲಾಗಿದ್ದು ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರವನ್ನು ಮೇ ನಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇದೆ’ ಎನ್ನುವರು. ಚಿತ್ರದಲ್ಲಿ ಪ್ರಮುಖ ಪ್ರಾತ್ರವೊಂದರಲ್ಲಿ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ. ನಾಯಕನಾಗಿ ಭರತ್ ಸೂರ್ಯ ನಟನೆ ಮಾಡಿದ್ದು, ಇವರು ಸಿನಿಮಾ ಶೂಟಿಂಗ್ ಮುಗಿಯುವ ವರೆಗೆ ಕಾಲಿಗೆ ಚಪ್ಪಲಿ ಹಾಕಿಲ್ಲವಂತೆ. ಇನ್ನು ನಾಯಕಿಯಾಗಿ ವೃತಿಕಾ ಅಭಿನಯಿಸಿದ್ದಾರೆ. ಚಿತ್ರವನ್ನು ಏಕಕಾಲದಲ್ಲಿ ಕನ್ನಡ, ತುಳು ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಿಸಲಾಗುತ್ತಿದೆ. ಧ್ರತಿ ಕ್ರಿಯೇಷನ್ಸ್ ಹಾಗೂ ಸಕ್ಸಸ್ ಫಿಲಂಸ್ ಬ್ಯಾನರ್ ನಲ್ಲಿ ಈ ನಿರ್ಮಾಣ ಮಾಡಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:koragajjaSandeep SoparkarShrutiSudhir AttavarTrivikrama Sapalyaಕೊರಗಜ್ಜತ್ರಿವಿಕ್ರಮ ಸಪಲ್ಯಶ್ರುತಿಸಂದೀಪ್ ಸೋಪರ್ಕರ್ಸುಧೀರ್ ಅತ್ತಾವರ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
22 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
43 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
44 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
49 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
54 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?