ಸ್ಯಾಂಡಲ್ ವುಡ್ ಹೆಸರಾಂತ ನಟ ಶ್ರೀಮುರಳಿ (Srimurali) ಎರಡು ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗೆ (Surgery) ಒಳಗಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದು, ಇದೀಗ ಮನೆಗೆ ಮರಳಿದ್ದಾರೆ. ಶೂಟಿಂಗ್ (Shooting) ವೇಳೆ ಅವರಿಗೆ ಮೊಣಕಾಲಿಗೆ ಪೆಟ್ಟು ಬಿದ್ದಿತ್ತು. ಆಗ ಆಸ್ಪತ್ರೆಗೆ ದಾಖಲಾಗಿದ್ದರು. ಮತ್ತೆ ಶೂಟಿಂಗ್ ನಲ್ಲೂ ಪಾಲ್ಗೊಂಡಿದ್ದರು. ನಂತರದ ದಿನಗಳಲ್ಲಿ ಮತ್ತೆ ಮತ್ತೆ ಮೊಣಕಾಲು ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಶಸ್ತ್ರ ಚಿಕಿತ್ಸೆಗೆ ಅವರು ಒಳಗಾಗಿದ್ದರು.
ಎರಡು ದಿನಗಳ ಹಿಂದೆ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಡಾ.ಶಂಕರ್ ಮತ್ತು ವೈದ್ಯರ ತಂಡ ಯಶಸ್ಸಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ತಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ, ಮೂರು ತಿಂಗಳ ಕಾಲ ಡ್ಯಾನ್ಸ್ ಹಾಗೂ ಫೈಟ್ ಮಾಡದಂತೆ ಸೂಚನೆ ಕೂಡ ನೀಡಿದ್ದಾರೆ. ಸ್ವಲ್ಪ ದಿನಗಳ ನಂತರ ವಾಕಿಂಗ್ ಮಾಡಲು ಕೂಡ ಹೇಳಿದ್ದಾರೆ. ಇದನ್ನೂ ಓದಿ: `ಪುಷ್ಪ 2′ ಬಗ್ಗೆ ಬಿಗ್ ಅಪ್ಡೇಟ್ ಕೊಟ್ರು ರಶ್ಮಿಕಾ ಮಂದಣ್ಣ
ಹೊಂಬಾಳೆ (Hombale Films) ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಬಘೀರ (Bagheera) ಸಿನಿಮಾದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆದಿತ್ತು. ಇದೇ ವೇಳೆ ಶ್ರೀಮುರಳಿ ಮೊಣಕಾಲಿಗೆ ಏಟು ಮಾಡಿಕೊಂಡಿದ್ದರು. ಆ ಸಮಯದಲ್ಲಿ ಅದೊಂದು ಸಣ್ಣ ಪೆಟ್ಟು ಎಂದೇ ಹೇಳಲಾಗಿತ್ತು. ಆದರೆ, ತೀವ್ರವಾಗಿ ನೋವು ಕಾಣಿಸಿಕೊಂಡ ನಂತರ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆ ಮಾಡಲೇಬೇಕು ಎಂದು ವೈದ್ಯರು ಸೂಚಿಸಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k