ಹಾವೇರಿ : ವರದಾ ನದಿಯಲ್ಲಿ ತಾಡಪತ್ರೆಗಳನ್ನು ತೊಳೆಯಲು ಹೋದ ಯುವಕ ಈಜು ಬಾರದೆ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಸೂರ ಗ್ರಾಮದ ಬಳಿ ಇರುವ ವರದಾ ನದಿಯಲ್ಲಿ (River) ನಡೆದಿದೆ.
ಮೃತ ಯುವಕನನ್ನು ಹಾವೇರಿ (Haveri) ತಾಲೂಕಿನ ದೇವಗಿರಿ ಗ್ರಾಮದ ಟಿಪ್ಪುಸುಲ್ತಾನ್ ಮೇಡ್ಲೇರಿ (23) ಎಂದು ಗುರುತಿಸಲಾಗಿದೆ. ಯುವಕ ಟಿಪ್ಪುಸುಲ್ತಾನ್ ತಾಡಪತ್ರೆಗಳನ್ನು ತೊಳೆಯಲು ವರದಾ ನದಿಯ ಕಳಸೂರ ಗ್ರಾಮದ ಬಳಿ ಇರುಬ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ತೆರಳಿದ್ದ. ನದಿಯ ನೀರಿನಲ್ಲಿ ತಾಡಪತ್ರೆ ತೊಳೆಯುತ್ತಿದ್ದ ವೇಳೆ ಪಕ್ಕದಲ್ಲಿದ್ದ ಬಕೆಟ್ ನದಿಯಲ್ಲಿ ತೇಲಿ ಹೋಗುತ್ತಿದ್ದನ್ನು ಕಂಡು, ಅದನ್ನು ಹಿಡಿಯಲು ಹೋಗಿದ್ದಾನೆ. ಆದರೆ ಈಜು ಬಾರದೆ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬಾಂಬ್ ಬೆದರಿಕೆ – ಮಾಸ್ಕೋದಿಂದ ಗೋವಾ ಬರಬೇಕಿದ್ದ ವಿಮಾನ ಉಜ್ಬೇಕಿಸ್ತಾನದಲ್ಲಿ ಲ್ಯಾಂಡ್
ವಿಷಯ ತಿಳಿಯುತ್ತಿದ್ದಂತೆ ಹಾವೇರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ನದಿಯಲ್ಲಿ ಕಾರ್ಯಾಚರಣೆ ನಡೆಸಿ, ಮೃತ ಟಿಪ್ಪುಸುಲ್ತಾನನ ಮೃತದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದ ಜನರ ವಿಶ್ವಾಸ ಸಂಪಾದನೆ ಮಾಡುವಲ್ಲಿ ಪಕ್ಷ ಯಶಸ್ಸು ಕಂಡಿದೆ: ಅಶ್ವಥ್ ನಾರಾಯಣ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k