Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಮುಚ್ಚಿಹಾಕಲೆಂದೇ ಲೋಕಾಯುಕ್ತ ಮುಚ್ಚಿದರು: ಬೊಮ್ಮಾಯಿ

Public TV
Last updated: January 23, 2023 4:08 pm
Public TV
Share
3 Min Read
BASAVARAJ BOMMAI 13
SHARE

ಬೆಂಗಳೂರು: ಕಾಂಗ್ರೆಸ್ (Congress) ಮಾಡಿರುವ ಕರ್ಮಕಾಂಡ ಮುಚ್ಚಿಹಾಕಲೆಂದೇ ಲೋಕಾಯುಕ್ತ (Lokayukta) ಸಂಸ್ಥೆಯನ್ನು ಮುಚ್ಚಿಹಾಕಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Karnataka Lokayukta

ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು (Bengaluru) ಉಳಿಸಿ ಎಂದು ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಶೇ.60 ರಷ್ಟು ಪ್ರೀಮಿಯಂ ಬೆಂಗಳೂರಿನಲ್ಲಿ ನೀಡಿರುವ ದಾಖಲೆ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಸರ್ಕಾರದ ದಾಖಲೆಗಳಲ್ಲಿದೆ. ಸುಮಾರು 800 ಕೋಟಿ ರೂ.ಗಳಲ್ಲಿ ಶೇ.60 ರಷ್ಟು ಪ್ರೀಮಿಯಂನ್ನು ದೇಶದಲ್ಲಿ ಎಲ್ಲಿಯಾದರೂ ಕೊಟ್ಟಿದ್ದಾರೆಯೇ? ಇವರು ಅಂತಹ ಶೂರರು. ಇಷ್ಟು ಮುಕ್ತವಾಗಿ 40-60 ಪ್ರೀಮಿಯಂ ಕೊಟ್ಟು ಭ್ರಷ್ಟಾಚಾರ ನಡೆಸಿ, ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಅದು ಸೊಗಲಾಡಿತನ. ತಾವು ಮಾಡಿರುವುದನ್ನು ಮುಚ್ಚಿಕೊಳ್ಳುವ ಸಲುವಾಗಿ ಈ ರೀತಿ ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಿದೆ. ಆರೋಪ ಮಾಡುತ್ತಿರುವುದರ ಪ್ರಕರಣದ ಬಗ್ಗೆ ವಿವರಗಳನ್ನು ಲೋಕಾಯುಕ್ತಕ್ಕೆ ನೀಡಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದ ಮುಂಭಾಗದಲ್ಲಿ ಬೋಸ್ ಪ್ರತಿಮೆ ಮರು ಪ್ರತಿಷ್ಠಾಪನೆ: ಬೊಮ್ಮಾಯಿ

CONGRESS 4

ನೈತಿಕ ಹಕ್ಕಿಲ್ಲ:
ಲೋಕಾಯುಕ್ತ ಮುಚ್ಚಿದ ಪುಣ್ಯಾತ್ಮರು ಇವರು. 300 ಕಡೆ ಪ್ರತಿಭಟನೆ ಮಾಡುತ್ತಿರುವವರು ಲೋಕಾಯುಕ್ತ ಎಂಬ ಸ್ವತಂತ್ರ, ಸಂವಿಧಾನಬದ್ಧ ಸಂಸ್ಥೆಯನ್ನು ಮುಚ್ಚಿರುವ ಇವರು ನಮಗೆ ಪಾಠ ಹೇಳುತ್ತಾರೆ. ಲೋಕಾಯುಕ್ತ ಯಾಕೆ ಮುಚ್ಚಿದರು? ಇವರ ವಿರುದ್ಧ 59 ಪ್ರಕರಣಗಳು ಮುಖ್ಯಮಂತ್ರಿಗಳ ಸಮೇತವಾಗಿ ದಾಖಲಾಗಿತ್ತು. ಎಸಿಬಿ ತಂದು ಪ್ರಕರಣ ಮುಚ್ಚಿಹಾಕಲು ಬಿ ವರದಿ ಹಾಕಿದರು. ಅವೆಲ್ಲವನ್ನೂ ಲೋಕಾಯುಕ್ತಕ್ಕೆ ಶಿಫಾರಸು ಮಾಡುತ್ತಿದ್ದೇವೆ. ಇವರಿಗೆ ಯಾವ ನೈತಿಕ ಹಕ್ಕಿದೆ. ಲೋಕಾಯುಕ್ತ ಮುಚ್ಚಿದ ಪ್ರಶಸ್ತಿ ಭ್ರಷ್ಟಾಚಾರ ಬೆಂಬಲಿಸಲು, ಅದರ ಪರವಾಗಿ, ಕುಮ್ಮಕ್ಕು ನೀಡಲು, ಭ್ರಷ್ಟಾಚಾರದೊಂದಿಗೆ ಕೈಜೋಡಿಸಿ ಸರ್ಕಾರ ನಡೆಸಿದವರು. ಭ್ರಷ್ಟಾಚಾರ ಇವರ ಸರ್ಕಾರದ ಆಡಳಿತದ ಒಂದು ಭಾಗವಾಗಿದೆ. ಅದಕ್ಕಾಗಿ ಅದನ್ನು ಮುಚ್ಚಿಹಾಕಿದರು. ದಾಖಲೆ ಸಮೇತ ದೂರು ನೀಡಿದರೆ ವಿಚಾರಣೆಯನ್ನೂ ಮುಚ್ಚಿಹಾಕುವ ಕೆಲಸ ಮಾಡಿದ್ದಾರೆ. ತಾವು ಮಾಡಿರುವ ಕೆಲಸವನ್ನು ಮುಚ್ಚಿಕೊಳ್ಳಲು ಈ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಾಧುಸ್ವಾಮಿ ಮೊದಲು ಮಾತಾಡಲಿ- ಸಚಿವರ ಹೇಳಿಕೆಗೆ ಸಿಎಂ ವ್ಯಂಗ್ಯ

BASAVARAJ BOMMAI 1 8

ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ:
ಜನ ಇದನ್ನು ಒಪ್ಪುವುದಿಲ್ಲ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಎಂದರೆ ನಿಜವಾಗಿಯೂ ಹಾಸ್ಯಾಸ್ಪದ. ಇದು ನ್ಯಾಯವೇ ಎಂದು ಪ್ರಶ್ನಿಸಿದರು. ತಮ್ಮ ಕೈಗೆ ಹತ್ತಿರುವ ಮಸಿಯನ್ನು ಮೊದಲು ನೋಡಿಕೊಳ್ಳಲಿ. ತಮ್ಮ ಎಲೆಯಲ್ಲಿ ಕತ್ತೆ ಬಿದ್ದಿರುವುದನ್ನು ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ.

ಜನ ಬೆಂಬಲವಿದೆ:
ಪ್ರಧಾನಿಗಳನ್ನು ಹಿಟ್ಲರ್ ಎಂದು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ಟೀಕೆಗಳನ್ನು ನಾನು ಯಶಸ್ಸಿನ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳುತ್ತೇನೆ. ಪ್ರಧಾನಿಗಳು ವಿಶ್ವವ್ಯಾಪಿ ನಾಯಕರು. ಇಡೀ ಭಾರತ ದೇಶದಲ್ಲಿ ಜನಮನ್ನಣೆ ಗಳಿಸಿದವರು. ಅವರ ಬಗ್ಗೆ ಇರುವ ಸದಭಿಪ್ರಾಯ ಬಹುತೇಕ ಯಾವುದೇ ಪ್ರಧಾನಿಗಳಿಗಿಲ್ಲ. ಅಂತವರ ಬಗ್ಗೆ ಮಾತನಾಡಿದರೆ ಜನ ನಂಬುವುದಿಲ್ಲ. ಆಕಾಶಕ್ಕೆ ಉಗುಳಿದಂತೆ. ಗುಜರಾತ್‍ನಲ್ಲಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕಾಂಗ್ರೆಸ್ ನಾಯಕಿ ಮೋತ್ ಕಾ ಸೌದಾಗರ್ ಎಂದಿದ್ದರು. ಆಗ ಅವರಿಗೆ ಹೆಚ್ಚು ಮತ ದೊರೆತು ಜಾಸ್ತಿ ಸ್ಥಾನಗಳು ದೊರೆಯಿತು. ಅವರು ಏನು ಹೇಳುತ್ತಾರೋ ಹೇಳಲಿ ಜನಬೆಂಬಲ ನಮ್ಮ ಜೊತೆಗಿದೆ. ಇನ್ನಷ್ಟು ಬೆಂಬಲ ಹೆಚ್ಚಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಮೊದಲು ಬಸವರಾಜ ಬೊಮ್ಮಾಯಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿಂದ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ನಮನ ಸಲ್ಲಿಸಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj Bommaikarnatakalokayuktaಎಸಿಬಿಕಾಂಗ್ರೆಸ್ಬಸವರಾಜ ಬೊಮ್ಮಾಯಿಲೋಕಾಯುಕ್ತ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Usiru Movie Team
ತಿಲಕ್ ನಟನೆಯ ʻಉಸಿರುʼ ಸಿನಿಮಾ ಟ್ರೈಲರ್ ರಿಲೀಸ್
Cinema Latest Sandalwood Top Stories
Rini Ann George
3 ವರ್ಷದಿಂದ ಅಶ್ಲೀಲ ಮೆಸೇಜ್‌ ಕಳಿಸ್ತಿದ್ದಾರೆ, ಹೋಟೆಲ್‌ಗೆ ಕರೀತಿದ್ದಾರೆ – ರಾಜಕಾರಣಿ ವಿರುದ್ಧ ನಟಿ ರಿನಿ ಜಾರ್ಜ್ ಆರೋಪ
Cinema Crime Latest Main Post National
Daali Dhananjaya
ಬರ್ತ್‌ ಡೇ ಸೆಲೆಬ್ರೇಷನ್ – ಅಭಿಮಾನಿಗಳಿಗೆ ಶಾಕ್ ಕೊಟ್ಟ ನಟ ಡಾಲಿ ಧನಂಜಯ್!
Cinema Latest Sandalwood Top Stories
mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories

You Might Also Like

Ramanagara Fraud Case
Crime

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ – ನಿವೃತ್ತ ಲೋಕೋಪೈಲೆಟ್ ಅರೆಸ್ಟ್

Public TV
By Public TV
3 minutes ago
youtuber sameer
Bengaluru City

ಯಾವುದೇ ಕ್ಷಣದಲ್ಲಿ ಯೂಟ್ಯೂಬರ್‌ ಸಮೀರ್‌ ಅರೆಸ್ಟ್‌ ಸಾಧ್ಯತೆ

Public TV
By Public TV
10 minutes ago
G PARAMESHWAR
Bengaluru City

ಚಿತ್ರದುರ್ಗ ವರ್ಷಿತಾ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಪರಮೇಶ್ವರ್

Public TV
By Public TV
20 minutes ago
belthangady police registered an FIR against Girish Mattannavar Mahesh Shetty Thimarodi Sameer
Dakshina Kannada

ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

Public TV
By Public TV
34 minutes ago
Eshwara Khandre
Bengaluru City

ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ, ರಾಜ್ಯದ ಕುರಿಗಾಹಿಗಳಿಗೆ ಇಲ್ಲ ತೊಂದರೆ: ಈಶ್ವರ್ ಖಂಡ್ರೆ

Public TV
By Public TV
48 minutes ago
DK Shivakumar 6
Bengaluru City

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?