ಮಾದನಾಯಕನಹಳ್ಳಿ ಇನ್ಸ್‌ಪೆಕ್ಟರ್‌ ಮಂಜುನಾಥ್‌ಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

Public TV
1 Min Read
Republic Day madanayakanahalli CPI Manjunath awarded Presidents Police Medal

ನೆಲಮಂಗಲ: ಗಣರಾಜ್ಯೋತ್ಸವ (Republic Day) ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ್ಕೆ ಬೆಂಗಳೂರು ಹೊರವಲಯ ನೆಲಮಂಗಲ (Nelamangala) ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಸುಪರ್ ಸಿಂಗಂ ಎಂದೇ ಜನರಿಂದ ಪ್ರಶಂಸೆ ಪಡೆದಿರುವ ಇನ್ಸ್‌ಪೆಕ್ಟರ್‌ ಮಂಜುನಾಥ್ (CPI Manjunath) ಆಯ್ಕೆಯಾಗಿದ್ದಾರೆ.

republic day president s medal to 20 policemen in karnataka 2

ಸೇವಾ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಬೆನ್ನತ್ತಿ ಸಮಾಜ ಘಾತುಕರಿಗೆ ಬಿಸಿ ಮುಟ್ಟಿಸಿ ಜನಸಾಮಾನ್ಯರ ಅಚ್ಚುಮೆಚ್ಚಿನ ಪೊಲೀಸ್‌ ಅಧಿಕಾರಿಯಾಗಿ ಮಂಜುನಾಥ್ ಗುರುತಿಸಿಕೊಂಡಿದ್ದಾರೆ. ನೆಲಮಂಗಲ ಹಾಗೂ ಮಾದನಾಯಕನಹಳ್ಳಿ ಭಾಗದ ಜನರು ಇವರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ

republic day president s medal to 20 policemen in karnataka 1

ಜನರ ನಾಡಿ ಮಿಡಿತ, ಕುಂದುಕೊರತೆಗಳು, ಜನಸಾಮಾನ್ಯರ ಪ್ರೀತಿ ವಿಶ್ವಾಸ, ಸ್ನೇಹ ಜೀವಿಯಂತೆ ಕೆಲಸ ಮಾಡಿ  ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಪ್ರತಿ ವರ್ಷ ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ನೀಡಿ ಪುರಸ್ಕರಿಸಲಾಗುತ್ತದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *