ಬೆಂಗಳೂರು: ರಮೇಶ್ ಜಾರಕಿಹೊಳಿ (Ramesh Jarkiholi) ಹಾಗೂ ಬಿಜೆಪಿ (BJP) ಇತರ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ (Election Commission Of India) ದೂರು ಸಲ್ಲಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ (Ramalinga Reddy), ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ಬೆಂಗಳೂರಿನಲ್ಲಿ ದೂರು ಸಲ್ಲಿಸಿದೆ. ಇದನ್ನೂ ಓದಿ: ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವುದಕ್ಕಿಂತ ಸಾಯುತ್ತೇನೆ: ನಿತೀಶ್ ಕುಮಾರ್
ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಿದ ‘ಕೈ’ ಪಡೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನ ಅಸ್ತ್ರ ಮಾಡಿಕೊಂಡಿದೆ. ಇದನ್ನೂ ಓದಿ: ನಾಗಚೈತನ್ಯ ಜೊತೆಗಿನ ಮದುವೆ ಸುದ್ದಿಗೆ ಮೌನ ಮುರಿದ ನಟಿ ಶೋಭಿತಾ
`ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು’ ಎಂದಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.
ಇದರೊಂದಿಗೆ ರಾಜ್ಯದ 5 ಕೋಟಿ ಮತದಾರರನ್ನ 30 ಸಾವಿರ ಕೋಟಿಗೆ ಖರೀದಿಸಲು ಬಿಜೆಪಿ ಸಂಚು ರೂಪಿಸಿದೆ. ಈ ಸಂಚಿಗೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda), ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಹ ಪ್ರೇರಣೆ ನೀಡಿದ್ದಾರೆ. ಹಾಗಾಗಿ ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶಿವಾಜಿನಗರದಲ್ಲಿ 9 ಸಾವಿರ ಮತದಾರರ ಹೆಸರು ಡಿಲಿಟ್ ಆಗಿರುವ ಬಗ್ಗೆ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ರಿಂದ ಚುನಾವಣಾ ಆಯೋಗಕ್ಕೆ ಮತ್ತೊಂದು ದೂರು ಸಲ್ಲಿಸಲಾಯಿತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k