ಸಿದ್ದರಾಮಯ್ಯ ಜೀವಂತ ಇದ್ದಾಗಲೇ ಬಿಜೆಪಿ ಸೇರಿಸಲ್ಲ, ಇನ್ನು ಅವರ ಹೆಣ ಇಟ್ಕೊಂಡು ಏನು ಮಾಡ್ಲಿ?: ಕೆ.ಎಸ್ ಈಶ್ವರಪ್ಪ

Public TV
1 Min Read
Siddaramaiah and eshwarappa

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವಂತ ಇದ್ದಾಗಲೇ ಬಿಜೆಪಿ ಸೇರಿಸಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸತ್ತರೂ ಬಿಜೆಪಿ ಸೇರಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ (Siddaramaiah) ಜೀವಂತ ಇದ್ದಾಗಲೇ ಬಿಜೆಪಿ (BJP) ಸೇರಿಸಲ್ಲ. ಇನ್ನು ಅವರ ಹೆಣ ತಗೊಂಡು ಏನು ಮಾಡೋದು. ಅವರ ಹೆಣ ನಾಯಿ ಕೂಡ ಮೂಸಲ್ಲ ಎಂದು ವ್ಯಂಗ್ಯವಾಡಿದರು.

siddaramaiah 1 5

ಸಿದ್ದರಾಮಯ್ಯ ಹಣೆಬರಹ ಮತದಾರರಿಗೆ ಗೊತ್ತು. ಈ ಮನುಷ್ಯ ನಂಬಿಗಸ್ತ ಅಲ್ಲ, ಸುಧಾರಿಸಲ್ಲ ಅಂತ. ಚುನಾವಣೆಯಲ್ಲಿ ಸೋಲಿಸ್ತಾರೆ ಎಂಬ ಒಂದೇ ಕಾರಣಕ್ಕೆ ಕ್ಷೇತ್ರ ಹುಡುಕುತ್ತಿದ್ದಾರೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ: ರೇಣುಕಾಚಾರ್ಯ

SUMALATHA AMBAREESH

ಸುಮಲತಾ (Sumalatha Ambareesh) ಬಗ್ಗೆ ರಾಷ್ಟ್ರೀಯ ನಾಯಕರು ವಿಚಾರ ಮಾಡುತ್ತಾರೆ. ಅವರ ಬಗ್ಗೆ ರಾಷ್ಟ್ರೀಯ ನಾಯಕರು ವಿಚಾರ ಮಾಡ್ತಾರೆ. ಇವತ್ತಲ್ಲ ನಾಳೆ, ಕೇಂದ್ರ-ರಾಜ್ಯದಲ್ಲಿ ಬಿಜೆಪಿ ಬಿಟ್ರೆ ಬೇರೆ ಪಕ್ಷ ಅಧಿಕಾರಕ್ಕೆ ಬರಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ramesh jarakiholi dk shivakumar

ಇದೇ ವೇಳೆ ರಮೇಶ್ ಜಾರಕಿಹೊಳಿ (Ramesh Jarakiholi) ಸಿಡಿ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದರ ಬಗ್ಗೆ ಡಿಕೆಶಿ ಏನೂ ಉತ್ತರ ಕೊಟ್ಟಿಲ್ಲ. ಯಾವ್ಯಾವ ದೇಶದಲ್ಲಿ ಮನೆ ಮಾಡಿದ್ದೇನೆ ಅಂತ ಡಿಕೆಶಿ ಆಡಿಯೋದಲ್ಲಿ ಒಪ್ಪಿಕೊಂಡಿದ್ದಾರೆ. ಅದು ಅವರ ವೈಯಕ್ತಿಕ, ಕಮೆಂಟ್ ಮಾಡಲ್ಲ. ಆದರೆ ಆಡಿಯೋ ಬಗ್ಗೆ ಅವರು ಉತ್ತರ ಕೊಡಲಿ. ಸರಿನೋ, ತಪ್ಪೋ, ಸುಳ್ಳೋ ಏನಾದ್ರೂ ಹೇಳಲಿ. ಏನೂ ಹೇಳದೆ ಬೇರೆ ಬೇರೆ ಉತ್ತರ ಕೊಡೋದು ಸರಿಯಲ್ಲ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *