ಇಂದಿರಾ ಕ್ಯಾಂಟೀನ್‌ನಲ್ಲಿ ನೀರಿನ ಸಮಸ್ಯೆ ಆಯ್ತು – ಈಗ ಆಹಾರ ಸಮಸ್ಯೆ

Public TV
1 Min Read
indira canteen 3

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಡವರ ಹಸಿವು ನೀಗಿಸಲು ಆರಂಭಿಸಿದ ಇಂದಿರಾ ಕ್ಯಾಂಟೀನ್ (Indira Canteen) ಯೋಜನೆ ನಿರ್ವಹಣೆಯಲ್ಲಿ ಬಿಬಿಎಂಪಿ (BBMP) ಹಿಂದೆ ಬಿದ್ದಿದೆ.

ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀರಿನ ಸಮಸ್ಯೆ ಬಿಗಾಡಿಯಿಸಿದ್ದು, ನೀರಿನ ಬಿಲ್ (Water Bill) ಕಟ್ಟದೇ ಇರುವುದಕ್ಕೆ ನೀರಿನ ಪೂರೈಕೆ ಸ್ಥಗಿತವಾಗಿದೆ. ಈಗ ಬಿಬಿಎಂಪಿ ಗುತ್ತಿಗೆದಾರರಿಗೆ ಹಣ ಪಾವತಿ ಮಾಡದ ಕಾರಣ ಇಂದಿರಾ ಕ್ಯಾಂಟೀನ್‌ಗಳಿಗೆ ಕೆಲ ಆಹಾರ ಪೂರೈಕೆ ಸ್ಥಗಿತವಾಗಿದೆ.

indira canteen 2

ಬೆಳಗ್ಗೆ ತಿಂಡಿಗೆ ಇಡ್ಲಿ, ಸಾಂಬಾರ್ ಪೂರೈಕೆ ಆಗುತ್ತಿತ್ತು. ಮಧ್ಯಾಹ್ನ ಅನ್ನ ಸಾಂಬಾರ್, ಮೊಸರನ್ನ, ಪಲಾವ್ ನೀಡಲಾಗುತ್ತಿತ್ತು. ಆದರೆ ಈಗ ಇಡ್ಲಿ, ಸಾಂಬಾರ್, ಚಟ್ನಿ ಸ್ಥಗಿತವಾಗಿದೆ. ಜೊತೆಗೆ ಮಧ್ಯಾಹ್ನ ಮೊಸರನ್ನ, ಪಲಾವ್ ಮತ್ತು ಪಾಯಸವೂ ಸ್ಥಗಿತ ಮಾಡಿದ್ದಾರೆ. 4-5 ಆಹಾರಗಳು ಸ್ಥಗಿತವಾಗಿ ಈಗ ಬೆಳಗ್ಗೆ ರೈಸ್ ಬಾತ್, ಮಧ್ಯಾಹ್ನ ಅನ್ನ ಸಾಂಬಾರ್ ನೀಡುತ್ತಾ ಇದ್ದಾರೆ. ಐಟಂ ಪೂರೈಕೆ ಸ್ಥಗಿತ ಆಗಿರುವ ಬಗ್ಗೆ ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಪವರ್ ಸ್ಟಾರ್ ಪ್ರೇರಣೆ – 150ಕ್ಕೂ ಹೆಚ್ಚು ಜನರಿಂದ ಅಂಗಾಂಗ ದಾನಕ್ಕೆ ಪ್ರತಿಜ್ಞೆ

Indira Canteen

ಇಂದಿರಾ ಕ್ಯಾಂಟೀನ್‌ನಿಂದ ಬಡವರ ಹೊಟ್ಟೆ ತುಂಬುತ್ತಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದೇ ಮುಚ್ಚಿ ಹೋಗುವ ಸಾಧ್ಯತೆಯಿದೆ. ಸರ್ಕಾರ ಮತ್ತು ಬಿಬಿಎಂಪಿ ಬಿಲ್‌ಗಳನ್ನು ಪಾವತಿ ಮಾಡಿ ಆಹಾರ ಪೂರೈಕೆ ಮಾಡುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ChatGPT ಬಳಕೆಗೆ ಕಡಿವಾಣ ಹಾಕಲು ಬೆಂಗ್ಳೂರು ಕಾಲೇಜುಗಳ ನಿರ್ಧಾರ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *