ವೈದ್ಯರ ನಿರ್ಲಕ್ಷ್ಯಕ್ಕೆ ಜ್ಯೂನಿಯರ್ ಆರ್ಟಿಸ್ಟ್ ಬಲಿ : ತಾಯಿಯ ಆರೋಪ

Public TV
1 Min Read
Sinchana 4

ವೈದ್ಯರ (Doctor) ನಿರ್ಲಕ್ಷ್ಯ ಕಾರಣದಿಂದಾಗಿ ಜ್ಯೂನಿಯರ್ ಆರ್ಟಿಸ್ಟ್ (Junior Artist)ಒಬ್ಬರು ಬಲಿಯಾದ ಪ್ರಕರಣ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ. ಹದಿನೈದರ ವಯಸ್ಸಿನ ಸಿಂಚನಾ (Sinchana) ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಹ ಕಲಾವಿದೆಯಾಗಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರು ವಾಂತಿ ಬೇಧಿಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಮನೆಯ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ನಿರ್ಲಕ್ಷ್ಯ ಕಾರಣದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಸಿಂಚನಾ ತಾಯಿ ನೇತ್ರಾವತಿ (Netravati) ಆರೋಪಿಸಿದ್ದಾರೆ.

Sinchana 3

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಎರಡು ದಿನಗಳಿಂದ ನನ್ನ ಮಗಳು ವಾಂತಿ ಬೇಧಿಯಿಂದ ಬಳಲುತ್ತಿದ್ದಳು. ಮೊದಲು ಕ್ಲಿನಿಕ್ ನಲ್ಲಿ ತೋರಿಸಿದ್ದೆವು. ತುಂಬಾ ಸುಸ್ತಾಗಿದ್ದರಿಂದ ದೊಡ್ಡ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸಲಹೆ ನೀಡಿದರು. ಮನೆಯ ಸಮೀಪದಲ್ಲೇ ಇದ್ದ ಖಾಸಗಿ ಆಸ್ಪತ್ರೆಗೆ ಮಗಳನ್ನು ದಾಖಲಿಸಲಾಯಿತು. ಆದರೆ, ಅವಳಿಗೆ ಸರಿಯಾದ ವೇಳೆಗೆ ಚಿಕಿತ್ಸೆ ದೊರೆಯಲಿಲ್ಲ. ಇದೇ ನನ್ನ ಮಗಳ ಸಾವಿಗೆ ಕಾರಣವಾಗಿದೆ’ ಎನ್ನುತ್ತಾರೆ ಸಿಂಚನಾ ತಾಯಿ.

Sinchana 2

ಮುಂದುವರೆದು ಮಾತನಾಡಿದ ಅವರು, ‘ಸಿಂಚನಾಗೆ ಕತ್ತಿನ ಭಾಗಕ್ಕೆ ಇಂಜೆಕ್ಷನ್ ನೀಡಿದ್ದರು. ಕತ್ತಿನಲ್ಲಿ ರಕ್ತಸ್ರಾವ ಹೆಚ್ಚಾಯಿತು. ಅದನ್ನು ವೈದ್ಯರ ಗಮನಕ್ಕೆ ತಂದರೂ, ಅವರು ಅದನ್ನು ಗಂಭೀರವಾಗಿ ತಗೆದುಕೊಳ್ಳಲಿಲ್ಲ. ತರಬೇತಿ ವೈದ್ಯರು ನನ್ನ ಮಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ನುರಿತ ವೈದ್ಯರನ್ನು ಕರೆಯಿಸುವಂತೆ ಬೇಡಿಕೊಂಡರೂ, ಅವರು ಕೇಳಲಿಲ್ಲ. ಹಾಗಾಗಿ ನನ್ನ ಮಗಳನ್ನು ಕಳೆದುಕೊಳ್ಳಬೇಕಾಯಿತು’ ನೇತ್ರಾವತಿ. ಇದನ್ನೂ ಓದಿ:ಬಾಲಿವುಡ್‌ನ `ಸಿಟಾಡೆಲ್’ ಸೀರಿಸ್ ಒಪ್ಪಿಕೊಂಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಮಂತಾ

Sinchana 1

ಈ ಸಾವಿನ ಕುರಿತಂತೆ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಗತ್ಯ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ತಗೆದುಕೊಳ್ಳುವ ಕುರಿತು ಪೊಲೀಸರು ಆಶ್ವಾಸನೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *