Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋಮವಾರ ಮೋದಿ ಒನ್ ಡೇ ರಾಜ್ಯ ಪ್ರವಾಸ – ಬೆಂಗಳೂರು, ತುಮಕೂರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೋಮವಾರ ಮೋದಿ ಒನ್ ಡೇ ರಾಜ್ಯ ಪ್ರವಾಸ – ಬೆಂಗಳೂರು, ತುಮಕೂರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ

Bengaluru City

ಸೋಮವಾರ ಮೋದಿ ಒನ್ ಡೇ ರಾಜ್ಯ ಪ್ರವಾಸ – ಬೆಂಗಳೂರು, ತುಮಕೂರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ

Public TV
Last updated: February 5, 2023 9:29 pm
Public TV
Share
6 Min Read
NARENDRA MODI 1
SHARE

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಫೆಬ್ರವರಿ 6 ರಂದು ಕರ್ನಾಟಕಕ್ಕೆ (Karnataka) ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ಕ್ಕೆ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ 2023ರ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 3:30 ಕ್ಕೆ ತುಮಕೂರಿನಲ್ಲಿ (Tumakuru) ಹೆಚ್‌ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ತುಮಕೂರು ರಸ್ತೆಯಲ್ಲಿರುವ ಬೆಂಗಳೂರು (Bengaluru) ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ 2023 ರ (IEW) ಭಾರತ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ 6 ರಿಂದ 8 ರ ವರೆಗೆ ಐಇಡಬ್ಲ್ಯು ಆಯೋಜನೆಗೊಂಡಿದ್ದು, ಇದು ಭಾರತದ ಬೆಳವಣಿಗೆಯಾಗುತ್ತಿರುವ ಇಂಧನ ಪರಿವರ್ತನೆಯ ಶಕ್ತಿಕೇಂದ್ರವಾಗಿರುವುದನ್ನು ಅನಾವರಣಗೊಳಿಸಲಿದೆ.

NARENDRA MODI

ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕವಲ್ಲದ ಇಂಧನ ಕೈಗಾರಿಕೆ ವಲಯ, ಸರ್ಕಾರಗಳು ಮತ್ತು ಶೈಕ್ಷಣಿಕ ವಲಯದ ನಾಯಕರನ್ನು ಇದು ಒಟ್ಟಿಗೆ ತರಲಿದ್ದು, ಸವಾಲುಗಳು ಮತ್ತು ಜವಾಬ್ದಾರಿಯುತ ಇಂಧನ ಪರಿವರ್ತನೆಯ ಅವಕಾಶಗಳ ಕುರಿತು ಚರ್ಚಿಸಲಿದೆ. ಜಗತ್ತಿನಾದ್ಯಂತ 30ಕ್ಕೂ ಹೆಚ್ಚು ಸಚಿವರ ಸಮ್ಮುಖದಲ್ಲಿ, 30 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು, 1,000 ಮಳಿಗೆಗಳು, 500 ಕ್ಕೂ ಹೆಚ್ಚು ಭಾಷಣಕಾರರು ಭಾರತದ ಇಂಧನ ಭವಿಷ್ಯ ಕುರಿತ ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಚರ್ಚಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಜಾಗತಿಕ ತೈಲ ಮತ್ತು ಅನಿಲ ವಲಯದ ಸಿಇಒಗಳ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಸಿರು ಇಂಧನ ಕ್ಷೇತ್ರದಲ್ಲಿ ಬಹುಹಂತದ ಉಪಕ್ರಮಗಳಿಗೆ ಅವರು ಚಾಲನೆ ನೀಡಲಿದ್ದಾರೆ.

ಇಂಧನ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಎಥನಾಲ್ ಮಿಶ್ರಣ ಪ್ರಮುಖವಾಗಿ ಕೇಂದ್ರೀರಿಸಿದ ವಲಯವಾಗಿದೆ. ಸರ್ಕಾರದ ಸುಸ್ಥಿರ ಪ್ರಯತ್ನಗಳಿಂದಾಗಿ 2013-14 ರಿಂದ ಎಥನಾಲ್ ಉತ್ಪಾದನೆ 6 ಪಟ್ಟು ಏರಿಕೆಯಾಗಿದೆ. ಎಥನಾಲ್ ಮಿಶ್ರಣ ಮತ್ತು ಜೈವಿಕ ಇಂಧನ ಕಾರ್ಯಕ್ರಮದಡಿ ಕಳೆದ 8 ವರ್ಷಗಳ ಅವಧಿಯಲ್ಲಿ ಭಾರತದ ಸಾಧನೆಗಳು ಇಂಧನ ಭದ್ರತೆಯನ್ನು ಹೆಚ್ಚಿಸಿದೆಯಷ್ಟೇ. ಅಲ್ಲದೇ 318 ಮೆಟ್ರಿಕ್ ಟನ್ ಗಳಷ್ಟು ಸಿಒ2 ಹೊರಸೂಸುವಿಕೆ ಮತ್ತು 54 ಸಾವಿರ ಕೋಟಿ ರೂ. ಮೊತ್ತದ ವಿದೇಶಿ ವಿನಿಮಯ ಸೇರಿದಂತೆ ಇತರೆ ಪ್ರಯೋಜನಗೆಳಿಗೆ ಕಾರಣವಾಗಿದೆ. ಇದರ ಫಲವಾಗಿ 2014 ರಿಂದ 2022ರ ಅವಧಿಯಲ್ಲಿ 81,800 ಕೋಟಿ ರೂ. ಎಥನಾಲ್ ಪೂರೈಕೆದಾರರಿಗೆ ಪಾವತಿಸಲಾಗಿದೆ ಮತ್ತು ರೈತರಿಗೆ 49,000 ಕೋಟಿ ರೂ. ಮೊತ್ತವನ್ನು ವರ್ಗಾಯಿಸಲಾಗಿದೆ.

narendra modi basavaraj bommai

ಎಥನಾಲ್ ಮಿಶ್ರಣ ಮಾರ್ಗನಕ್ಷೆಯಡಿ ಪ್ರಧಾನಮಂತ್ರಿ ಅವರು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ತೈಲ ಮಾರುಕಟ್ಟೆ ಕಂಪನಿಗಳ 84 ಚಿಲ್ಲರೆ ಮಳಿಗೆಗಳಲ್ಲಿ ಇ20 ಇಂಧನ ಉಪಕ್ರಮವನ್ನು ಪ್ರಾರಂಭಿಸಲಿದ್ದಾರೆ. ಇ20 ಪೆಟ್ರೋಲ್ ನಲ್ಲಿ ಶೇ.20 ರಷ್ಟು ಎಥನಾಲ್ ಮಿಶ್ರಣ ಮಾಡಲಾಗುತ್ತದೆ. ಬರುವ 2025 ರ ವೇಳೆಗೆ ಶೇ.20 ರಷ್ಟು ಎಥನಾಲ್ ಮಿಶ್ರಣ ಮಾಡುವ ಗುರಿಯನ್ನು ಹೊಂದಲಾಗಿದೆ ಮತ್ತು ಇದರ ಪ್ರಗತಿಗಾಗಿ ತೈಲ ಮಾರುಕಟ್ಟೆ ಕಂಪೆನಿಗಳು 2ಜಿ-3ಜಿ ಎಥನಾಲ್ ಘಟಕಗಳನ್ನು ಪ್ರಾರಂಭಿಸಲಿವೆ.

ನಂತರ ಪ್ರಧಾನಮಂತ್ರಿ ಅವರು ಹಸಿರು ಸಾಗಣೆ ಜಾಥಾಗೆ ಚಾಲನೆ ನೀಡಲಿದ್ದಾರೆ. ಈ ಜಾಥ ಹಸಿರಿರುವ ಇಂಧನ ಮೂಲಗಳಿಂದ ಚಲಿಸುವ ವಾಹನಗಳ ಪಾಲ್ಗೊಳ್ಳುವಿಕೆಗೆ ಸಾಕ್ಷಿಯಾಗಲಿದೆ ಮತ್ತು ಹಸಿರು ಇಂಧನ ಕುರಿತು ಜಾಗೃತಿ ಮೂಡಿಸಲು ಸಹಾಯ ಮಾಡಲಿದೆ.

Hubballi yuvajanotsava 2023 The runway is ready learn the skills and take off PM Narendra Modi

ಬಳಿಕ ಪ್ರಧಾನಮಂತ್ರಿ ಅವರು ಶೀಶೆ ರಹಿತ ಉಪಕ್ರಮದಡಿ ಸಮವಸ್ತ್ರಗಳನ್ನು ಬಿಡುಗಡೆ ಮಾಡಲಿದ್ದಾರೆ. ಏಕ ಬಳಕೆ ಪ್ಲಾಸ್ಟಿಕ್ ಅನ್ನು ಹಂತ ಹಂತವಾಗಿ ತೊಡೆದುಹಾಕಲು ಪ್ರಧಾನಮಂತ್ರಿ ಅವರ ದೂರದೃಷ್ಟಿಯ ಮಾರ್ಗದರ್ಶನದಿಂದ ಭಾರತೀಯ ತೈಲ ನಿಗಮ ಮರು ಬಳಕೆಯ ಪಾಲಿಯಸ್ಟರ್ (RPET) ಮತ್ತು ಹತ್ತಿಯಿಂದ ಉತ್ಪಾದಿಸಿದ ಸಮವಸ್ತ್ರವನ್ನು ಚಿಲ್ಲರೆ ವಲಯ ಮತ್ತು ಎಲ್‌ಪಿಜಿ ವಿತರಣಾ ಸಿಬ್ಬಂದಿಗೆ ಸಮವಸ್ತ್ರವನ್ನು ವಿತರಿಸುವುದನ್ನು ಇದರಡಿ ಅಳವಡಿಸಿಕೊಳ್ಳಲಾಗಿದೆ.

ಭಾರತೀಯ ತೈಲ ನಿಗಮದ ಪ್ರತಿಯೊಂದು ಸಮವಸ್ತ್ರಕ್ಕೆ 28 ಪೆಟ್ ಶೀಶೆಗಳ ಮರು ಬಳಕೆಯನ್ನು ಮಾಡಲಾಗುತ್ತದೆ. ಭಾರತೀಯ ತೈಲ ನಿಗಮದ ಈ ಉಪಕ್ರಮ ಶೀಶೆ ರಹಿತ ಉಪಕ್ರಮಕ್ಕೆ ಮತ್ತಷ್ಟು ಉತ್ತೇಜನ ನೀಡಲಿದ್ದು, ಸುಸ್ಥಿರ ಉಡುಪುಗಳ ಬ್ರ‍್ಯಾಂಡ್‌ಗಳು, ಮರು ಬಳಕೆಯ ಪಾಲಿಯಸ್ಟರ್ ನಿಂದ ತಯಾರಿಸಿರುವ ಸರಕುಗಳಿಗಾಗಿ ಇದನ್ನು ಪ್ರಾರಂಭಿಸಲಾಗಿದೆ. ಈ ಬ್ರ‍್ಯಾಂಡ್ ನಡಿ ಭಾರತೀಯ ತೈಲ ನಿಗಮ ಇತರೆ ತೈಲ ಮಾರುಕಟ್ಟೆ ಕಂಪನಿಗಳ ಗ್ರಾಹಕರಿಗೆ ಸಮವಸ್ತ್ರದ ಅವಶ್ಯಕತೆಗಳನ್ನು ಪೂರೈಸುವ ಗುರಿ ಹೊಂದಿದೆ. ಸೇನೆಗೆ ಯುದ್ಧದ ಉದ್ದೇಶ ಹೊರತುಪಡಿಸಿದ ಸಮವಸ್ತ್ರಗಳು, ಸಂಸ್ಥೆಗಳಿಗೆ ಸಮವಸ್ತ್ರಗಳು, ಉಡುಪುಗಳು ಮತ್ತು ಚಿಲ್ಲರೆ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶವನ್ನು ಸಹ ಈ ಉಪಕ್ರಮದಡಿ ಹೊಂದಲಾಗಿದೆ.

HUBBALLI MODI 2

ಇದಾದ ನಂತರ ಪ್ರಧಾನಮಂತ್ರಿ ಅವರು ಭಾರತೀಯ ತೈಲ ನಿಮಗದ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಅವಳಿ ಕುಕ್ ಟಾಪ್ ಮಾದರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಮತ್ತು ಇದರ ವಾಣಿಜ್ಯ ಚಟುವಟಿಕೆಗೆ ಚಾಲನೆ ನೀಡಲಿದ್ದಾರೆ. ಭಾರತೀಯ ತೈಲ ನಿಗಮ ಈ ಹಿಂದೆ ಒಂದೇ ಕುಕ್ ಟಾಪ್ ನೊಂದಿಗೆ ನವೀನ ಮತ್ತು ಹಕ್ಕುಸ್ವಾಮ್ಯ ಪಡೆದ ಒಳಾಂಗಣ ಅಡುಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿತ್ತು. ಇದರ ಆಧಾರದ ಮೇಲೆ ಸ್ವೀಕರಿಸಿದ ಅಭಿಪ್ರಾಯಗಳಂತೆ 2 ಕುಕ್ ಟಾಪ್ ಒಳಗೊಂಡ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ವಿನ್ಯಾಸ ಹೆಚ್ಚು ಹೊಂದಾಣಿಕೆಯಾಗಲಿದೆ ಮತ್ತು ಸುಲಭವಾಗಿ ಬಳಸಬಹುದಾಗಿದೆ. ಇದು ಕ್ರಾಂತಿಕಾರಿ ಒಳಾಂಗಣ ಸೌರ ಅಡುಗೆಗೆ ಪರಿಹಾರವಾಗಿದ್ದು, ಸೌರ ಮತ್ತು ಸಹಾಯಕ ಶಕ್ತಿ ಮೂಲಗಳೆರೆಡರಲ್ಲೂ ಏಕಕಾಲದಲ್ಲಿ ಕಾರ್ಯನಿರ್ವಹಿಸುತ್ತದೆ. ಭಾರತಕ್ಕೆ ಅಡುಗೆ ವಲಯದಲ್ಲಿ ಇದು ವಿಶ್ವಾಸಾರ್ಹ ಪರಿಹಾರವಾಗಿದೆ.

ತುಮಕೂರಿನಲ್ಲಿ ಮೋದಿ:
ಬೆಂಗಳೂರು ಕಾರ್ಯಕ್ರಮದ ನಂತರ ತುಮಕೂರಿಗೆ ಪ್ರಯಾಣ ಬೆಳೆಸಲಿರುವ ಮೋದಿ ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತೊಂದು ಹೆಜ್ಜೆಯಾಗಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಮಂತ್ರಿ ಅವರು 2016 ರಲ್ಲಿ ಈ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಇದು ಹಸಿರು ವಲಯ ಸಮರ್ಪಿತ ಹೆಲಿಕಾಪ್ಟರ್ ಕಾರ್ಖಾನೆಯಾಗಿದ್ದು, ಇದರಿಂದ ಸಾಮರ್ಥ್ಯ ಹೆಚ್ಚಿಸಲಿದೆ ಮತ್ತು ಪರಿಸರ ಸ್ನೇಹಿ ಹೆಲಿಕಾಪ್ಟರ್‌ಗಳನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇದು ಏಷ್ಯಾದಲ್ಲಿಯೇ ಅತಿ ದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯವಿರುವ ಕಾರ್ಖಾನೆಯಾಗಿದೆ ಮತ್ತು ಆರಂಭಿಕವಾಗಿ ಹಗುರ ಬಳಕೆಯ ಹೆಲಿಕಾಪ್ಟರ್‌ಗಳನ್ನು (LUH) ಉತ್ಪಾದಿಸಲಾಗುತ್ತದೆ. ಎಲ್‌ಯುಹೆಚ್ ದೇಶೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ಅಭಿವೃದ್ಧಿಪಡಿಸಿದ 3-ಟನ್ ಶ್ರೇಣಿ, ಏಕ ಎಂಜಿನ್ ವಿವಿಧೋದ್ದೇಶ ಉಪಯುಕ್ತತೆಯ ಹೆಲಿಕಾಪ್ಟರ್ ಆಗಿದ್ದು, ಹೆಚ್ಚಿನ ಕುಶಲತೆಯ ವಿಶಿಷ್ಟ್ಯವಾದ ಲಕ್ಷಗಳನ್ನು ಹೊಂದಿದೆ.

HUBBALLI MODI 6

ಈ ಕಾರ್ಖಾನೆಯಲ್ಲಿ ಲಘು ಯುದ್ಧ ಹೆಲಿಕಾಪ್ಟರ್ (LCH) ಇತರೆ ಹೆಲಿಕಾಪ್ಟರ್‌ಗಳ ಉತ್ಪಾದನೆಯನ್ನು ಸಹ ವಿಸ್ತರಿಸಲಾಗುತ್ತದೆ ಮತ್ತು ಭಾರತೀಯ ಬಹುಪಾತ್ರದ ಹೆಲಿಕಾಪ್ಟರ್‌ಗಳು (IMRH) ಅಲ್ಲದೇ ದುರಸ್ತಿ ಮತ್ತು ಒಟ್ಟಾರೆ ಎಲ್‌ಸಿಹೆಚ್, ಎಲ್‌ಯುಹೆಚ್, ನಾಗರಿಕ ಎಎಲ್‌ಹೆಚ್ ಮತ್ತು ಐಎಂಆರ್‌ಹೆಚ್ ಹೆಲಿಕಾಪ್ಟರ್‌ಗಳನ್ನು ಭವಿಷ್ಯದಲ್ಲಿ ಉತ್ಪಾದಿಸಲಾಗುವುದು. ಬರುವ ದಿನಗಳಲ್ಲಿ ನಾಗರಿಕ ಎಲ್‌ಯುಹೆಚ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಈ ಕಾರ್ಖಾನೆ ಹೊಂದಿದೆ. ಇದನ್ನೂ ಓದಿ: ಸೋಮವಾರ ರಾಜ್ಯಕ್ಕೆ ಮೋದಿ ಆಗಮನ – ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

ಈ ಸೌಲಭ್ಯ ಭಾರತಕ್ಕೆ ತನ್ನ ಸಂಪೂರ್ಣ ಹೆಲಿಕಾಪ್ಟರ್‌ಗಳ ಅಗತ್ಯವನ್ನು ಸ್ಥಳೀಯವಾಗಿ ಪೂರೈಸಲು ಅನುವು ಮಾಡಿಕೊಡುತ್ತದೆ ಮತ್ತು ಭಾರತದಲ್ಲಿ ಹೆಲಿಕಾಪ್ಟರ್‌ಗಳ ವಿನ್ಯಾಸ, ಅಭಿವೃದ್ಧಿ ಮತ್ತು ತಯಾರಿಕೆಯಲ್ಲಿ ಸ್ವಾವಲಂಬನೆಯನ್ನು ಸಕ್ರಿಯಗೊಳಿಸುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.

narendra modi 1 1

ಈ ಕಾರ್ಖಾನೆ 4.0 ಮಾನದಂಡಗಳಡಿ ಉತ್ಪಾದನಾ ವ್ಯವಸ್ಥೆಯನ್ನು ಹೊಂದಿದ್ದು, ಮುಂದಿನ 20 ವರ್ಷಗಳಲ್ಲಿ ಹೆಚ್‌ಎಎಲ್ ತುಮಕೂರಿನಲ್ಲಿ 3 ರಿಂದ 15 ಟನ್ ಸಾಮರ್ಥ್ಯದ 1,000 ಕ್ಕೂ ಹೆಚ್ಚು ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುವ ಗುರಿ ಹೊಂದಿದೆ. ಈ ವಲಯದಲ್ಲಿ 6,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರೆಯಲಿದೆ.

ಇದರ ಬಳಿಕ ಪ್ರಧಾನಮಂತ್ರಿ ಅವರು ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ದಿ ಕಾರ್ಯಕ್ರಮದಡಿ ತುಮಕೂರಿನಲ್ಲಿ 3 ಹಂತಗಳಲ್ಲಿ 8,484 ಎಕರೆ ಪ್ರದೇಶದಲ್ಲಿ 3 ಹಂತಗಳ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಇದು ಚೆನ್ನೈ ಬೆಂಗಳೂರು ಕೈಗಾರಿಕಾ ಕಾರಿಡಾರ್‌ನ ಭಾಗವಾಗಿದೆ. ಇದನ್ನೂ ಓದಿ: ಗಂಧದಗುಡಿ ಉದ್ಯಾನವನ್ನು ಲೋಕಾರ್ಪಣೆಗೊಳಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

ನಂತರ ತುಮಕೂರಿನ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ್ ಜೀವನ್ ಅಭಿಯಾನದ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ತಿಪಟೂರಿನ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು 430 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಚಿಕ್ಕನಾಯಕನಹಳ್ಳಿಯ 147 ಜನವಸತಿ ಪ್ರದೇಶಗಳಿಗೆ 115 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ವಲಯದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶವನ್ನು ಈ ಯೋಜನೆ ಒಳಗೊಂಡಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurukarnatakanarendra moditumakuruಕರ್ನಾಟಕತುಮಕೂರುನರೇಂದ್ರ ಮೋದಿಬೆಂಗಳೂರು
Share This Article
Facebook Whatsapp Whatsapp Telegram

Cinema news

sudeep 1 1
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು – ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ; ಗುಡುಗಿದ ಕಿಚ್ಚ
Cinema Dharwad Latest Sandalwood Top Stories
Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post
nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories

You Might Also Like

DK Shivakumar 11
Bengaluru City

ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಕೆಶಿ

Public TV
By Public TV
2 minutes ago
Byrati Basavaraj 2
Bengaluru City

ಬಂಧನ ಭೀತಿಯಿಂದ ರಾಜ್ಯದಿಂದ ರಾಜ್ಯಕ್ಕೆ ಬೈರತಿ ಅಜ್ಞಾತ – ಮಾಜಿ ಸಚಿವನಿಗಾಗಿ ಸಿಐಡಿಯ 3 ತಂಡ ತೀವ್ರ ತಲಾಶ್

Public TV
By Public TV
23 minutes ago
TRAIN 1
Latest

ಡಿ.26 ರಿಂದ ರೈಲು ಪ್ರಯಾಣ ದರ ಏರಿಕೆ; ಎಸಿ – ನಾನ್‌ ಎಸಿಗೆ ಎಷ್ಟು ಏರಿಕೆ?

Public TV
By Public TV
1 hour ago
Mallikarjun Kharge 1
Districts

ರಾಜ್ಯದಲ್ಲಿ ನಾಯಕತ್ವ ಗೊಂದಲ ಹೈಕಮಾಂಡ್‌ ಸೃಷ್ಟಿಸಿಲ್ಲ, ಅವ್ರೇ ಮಾಡಿಕೊಂಡಿದ್ದಾರೆ: ಖರ್ಗೆ ಗರಂ

Public TV
By Public TV
2 hours ago
Gruhalakshmi Scheme 1
Bengaluru City

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Public TV
By Public TV
3 hours ago
RANJAN
Bengaluru City

ಮಕ್ಕಳ ಧ್ವನಿ, ಆಟವಾಡ್ತಿರೋದನ್ನ ಕಂಡ್ರೆ ನನಗೆ ಆಗಲ್ಲ – ಪೊಲೀಸರ ಮುಂದೆ ಸೈಕೋ ರಂಜನ್ ಹೇಳಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?