ಕಲಬುರಗಿ: ರಾಜ್ಯದಲ್ಲಿ 2013 ರಿಂದ 2018ರವರೆಗೂ ಹಸಿದವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು,ನಮ್ಮ ಸಿದ್ದರಾಮಯ್ಯ (Siddaramaiah) ಅವರ ಸರ್ಕಾರವೆಂದು ಶಾಸಕ ಜಮೀರ್ ಅಹ್ಮದ್ (Zameer Ahmed Khan) ಹೇಳಿದ್ದಾರೆ.
ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ಬಡವರಿಗೆ ನೀಡಿದೆ. ಇವುಗಳು ಹೇಳಿಕೊಳ್ಳುವಂತಹ ಯೋಜನೆಗಳಾಗಿವೆ ಎಂದರು.
ಮುಸ್ಲಿಮರು ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು. ಸಾರೇ ಜಹಾಂಸೆ ಅಚ್ಛಾ, ಹಿಂದೂಸ್ಥಾನ ಹಮಾರಾ ಎಂದು ಇಸ್ಲಾಂ ಧರ್ಮ ಹೇಳಿದ್ದು, ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವುದು ನಮ್ಮ ಕಾಂಗ್ರೆಸ್ ಸರ್ಕಾರ (Congress Government) ವೆಂದು ಹೇಳಿದರು.
ಈ ಬಾರಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಕರ್ನಾಟಕದ ಜನರು ಈ ಬಾರಿ ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಶೇ.50 ಫೈನ್ ಡಿಸ್ಕೌಂಟ್ಗೆ ಫುಲ್ ರೆಸ್ಪಾನ್ಸ್ – 5 ದಿನದಲ್ಲಿ 50 ಕೋಟಿ ರೂ. ದಂಡ ವಸೂಲಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k