ಬಿಗ್ ಬಾಸ್ ಸೀಸನ್ 9ರ (Bigg Boss Kannada 9) ಸ್ಪರ್ಧಿ ದಿವ್ಯಾ ಉರುಡುಗ (Divya Uruduga) ಮತ್ತೆ ಸುದ್ದಿಯಲ್ಲಿದ್ದಾರೆ. ಮಲೆನಾಡಿನ ಸುಂದರಿ ದಿವ್ಯಾ, ಸಾಗರದ ಜಾತ್ರೆಯಲ್ಲಿ (Sagara Jatre) ಭಾಗಿಯಾಗಿ ಸುತ್ತಾಡಿದ್ದಾರೆ. ಈ ಕುರಿತ ಫೋಟೋ ಮತ್ತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
View this post on Instagram
ದೊಡ್ಮನೆಯಲ್ಲಿ ಮಿಂಚಿದ ದಿವ್ಯಾ ಉರುಡುಗ ಅವರು ಮೂಲತಃ ಮಲೆನಾಡು ತೀರ್ಥಹಳ್ಳಿಯವರಾಗಿದ್ದು, ತಮ್ಮ ಊರಿನ ಬಗ್ಗೆ ವಿಶೇಷ ಪ್ರೀತಿಯನ್ನ ಇಟ್ಟುಕೊಂಡಿದ್ದಾರೆ. ಇದೀಗ ಸಾಗರದ ಜಾತ್ರೆಯಲ್ಲಿ ಮಾಸ್ಕ್ ಧರಿಸಿ, ದೇವರ ದರ್ಶನ ಮಾಡಿದ್ದಾರೆ. ಬಳಿಕ ತಾಯಿಯ ಜೊತೆ ಜಾತ್ರೆಯಲ್ಲಿ ಸುತ್ತಿದ್ದಾರೆ. ಕುಟುಂಬದ ಜೊತೆ ಮಸ್ತ್ ಆಗಿ ಸಮಯ ಕಳೆದಿದ್ದಾರೆ. ಸಾಗರ ಜಾತ್ರೆಯ ವೀಡಿಯೋವನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
View this post on Instagram
ನಟಿಗೆ ಈ ವೀಡಿಯೋ ಈಗ ಬಗೆ ಬಗೆಯ ಕಾಮೆಂಟ್ ಹರಿದು ಬರುತ್ತಿದೆ. ನೆಟ್ಟಿಗನೊಬ್ಬ, ಛೇ ಜಾತ್ರೆಯಲ್ಲಿ ನಿಮ್ಮನ್ನ ಗುರುತಿಸಲು ಆಗಲಿಲ್ಲ ಎಂದು ಬೇಸರ ಮಾಡಿಕೊಂಡರೆ, ಮತ್ತೊಬ್ಬರು, ಅರವಿಂದ್ ಕೆಪಿ ಎಲ್ಲಿ? ಅವರಿಗೂ ಜಾತ್ರೆ ತೋರಿಸಬಹುದಿತ್ತು ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್
ಇನ್ನೂ ದಿವ್ಯಾ ಮತ್ತು ಅರವಿಂದ್ ಕೆಪಿ (Aravindkp) ಅಭಿನಯದ `ಅರ್ದಂ ಬರ್ಧ ಪ್ರೇಮ ಕಥೆ’ ರಿಲೀಸ್ಗೆ ರೆಡಿಯಿದೆ. ಸದ್ಯದಲ್ಲೇ ತೆರೆಗೆ ಬರಲಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k