ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾದ ಗೆಲುವನ್ನು ಅನೇಕರು, ಅನೇಕ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾ ರಂಗಕ್ಕೆ ಚೈತನ್ಯ ತುಂಬಿದ ಸಿನಿಮಾವಿದು ಎಂದು ಕೆಲವರು ಪ್ರಶಂಸೆ ಮಾಡುತ್ತಿದ್ದರೆ, ಶಾರುಖ್ ವಿರೋಧಿಗಳು ಈ ಗೆಲುವನ್ನು ಅರ್ಥೈಸುತ್ತಿರುವ ಪರಿಯೇ ವಿಚಿತ್ರವಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬಾಯ್ಕಾಟ್ (Boycott) ಪರಿಯನ್ನೇ ಅವರು ಪ್ರಶ್ನೆ ಮಾಡಿದ್ದಾರೆ.
ಪಠಾಣ್ ಸಿನಿಮಾ ಅತೀ ಹೆಚ್ಚು ಜನರಿಗೆ ತಲುಪುವಂತೆ ಮಾಡಿದ್ದು, ಸಿನಿಮಾದ ಕಂಟೆಂಟ್ ಗಿಂತಲೂ ವಿರೋಧಿಗಳು ನಡೆಸಿದ ಬಾಯ್ಕಾಟ್ ಎನ್ನುವ ಮಾತಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವು ಪ್ರತಿಭಟನೆಗಳು ಕೂಡ ನಡೆದವು. ಈ ಬಾಯ್ಕಾಟ್ ಸಿನಿಮಾಗೆ ವರವಾಯಿತು ಎಂದು ಹೇಳಲಾಗುತ್ತಿದೆ. ಇದೀಗ ಆ ಬಾಯ್ಕಾಟ್ ಬಗ್ಗೆಯೇ ಅಗ್ನಿಹೋತ್ರಿ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಸಮಂತಾ ಬಳಿಕ ವಿಚಿತ್ರ ಕಾಯಿಲೆ ಬಗ್ಗೆ ಬಾಯ್ಬಿಟ್ಟ ಅನುಷ್ಕಾ ಶೆಟ್ಟಿ
‘ನಿಜವಾಗಿಯೂ ಬಾಯ್ಕಾಟ್ ಮಾಡಿದ್ದು ಯಾರು? ಶಾರುಖ್ ಖಾನ್ ಅವರ ಗ್ಯಾಂಗೇ ಈ ರೀತಿಯಲ್ಲಿ ಪ್ರಚಾರ ಮಾಡಿತಾ ಎನ್ನುವ ಅನುಮಾನ ನನ್ನದು. ಬಾಯ್ಕಾಟ್ ಎನ್ನುವುದು ಸಿನಿಮಾ ಪ್ರಚಾರದ ಒಂದು ಭಾಗ ಆಗಿತ್ತಾ? ‘ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಪಠಾಣ್ ಗೆಲುವನ್ನು ತಾವು ಗೆಲುವು ಎಂದು ಕರೆಯುವುದಿಲ್ಲ ಎಂದೂ ಅವರು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k