ಶಾಸಕ ಸತೀಶ್ ರೆಡ್ಡಿ ಕೊಲೆಗೆ 2 ಕೋಟಿ ಸುಪಾರಿ – ಇಬ್ಬರು ಅರೆಸ್ಟ್, ವಿಲ್ಸನ್ ಗಾರ್ಡನ್ ನಾಗ ಪರಾರಿ

Public TV
2 Min Read
satish reddy

ಬೆಂಗಳೂರು: ಬಿಜೆಪಿ (BJP) ಶಾಸಕ ಮತ್ತು ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕ ಸತೀಶ್ ರೆಡ್ಡಿ (Satish Reddy) ಕೊಲೆಗೆ 2 ಕೋಟಿ ರೂ. ಸುಪಾರಿ ನೀಡಿರುವ ಆರೋಪದಲ್ಲಿ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸರು (Bommanahalli Police) ಹೊಳಲ್ಕೆರೆಯಲ್ಲಿ ಬಂಧಿಸಿದ್ದಾರೆ.

ಆಕಾಶ್, ಗಗನ್ ಬಂಧಿತ ಆರೋಪಿಗಳು. ಬಂಧಿತರನ್ನು ಕಸ್ಟಡಿಗೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮುಖ್ಯ ಆರೋಪಿ (ಎ1) ವಿಲ್ಸನ್ ಗಾರ್ಡನ್ ನಾಗ (Wilson Garden Naga) ಪರಾರಿಯಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ.

satish reddy murder case Wilson Garden Naga 1

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?:
ಶಾಸಕರ ಪಿಎ ಹರೀಶ್ ಬಾಬು ಅವರಿಗೆ ಫೆ.11 ರಂದು ಬೊಮ್ಮನಹಳ್ಳಿ ನಿವಾಸಿ ಚಂದ್ರು ಎಂಬುವವರು ಕರೆ ಮಾಡಿ, ಶಾಸಕ ಸತೀಶ್ ರೆಡ್ಡಿ ಕೊಲೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎಂದು ತಿಳಿಸಿದ್ದ. ಚಂದ್ರುಗೆ ಭೈರೇಶ್ ಎಂಬುವನು ಫೋನ್ ಮಾಡಿ ವಿಚಾರ ತಿಳಿಸಿದ್ದಾಗಿ ಹರೀಶ್ ಬಾಬು ಬಳಿ ಹೇಳಿದ್ದ. ಭೈರೇಶ್‍ಗೆ ಆತನ ಸ್ನೇಹಿತ ಹೊಳಲ್ಕೆರೆಯ ಆಕಾಶ್ ವಿಚಾರ ತಿಳಿಸಿದ್ದಾಗಿ ಹೇಳಿದ್ದ.

ಶಾಸಕರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾಗಿ ಹೊಳಲ್ಕೆರೆಯ ಆಕಾಶ್, ಭೈರೇಶ್‍ಗೆ ಹೇಳಿದ್ದ. ಭೈರೇಶ್ ಈ ವಿಚಾರ ಚಂದ್ರುಗೆ ಹೇಳಿದ್ದ. ಚಂದ್ರು ಈ ವಿಚಾರವನ್ನ ಶಾಸಕರ ಪಿಎ ಹರೀಶ್ ಬಾಬುಗೆ ಹೇಳಿದ್ದ. ವಿಲ್ಸನ್ ಗಾರ್ಡನ್ ನಾಗ ಎರಡು ಕೋಟಿ ರೂ.ಗೆ ಸುಪಾರಿ ಪಡೆದಿದ್ದಾನೆ. ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ರೂಪಿಸಿದ್ದಾನೆ ಎಂದು ಚಂದ್ರು ತಿಳಿಸಿದ್ದ. ಈ ವಿಚಾರ ತಿಳಿದು ಹರೀಶ್ ಬಾಬು ಬೊಮ್ಮನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು.

ಘಟನೆಗೆ ಸಂಬಂಧಿಸಿದಂತೆ ಮೊದಲು ಎನ್‍ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿದ್ದ ಪೊಲೀಸರು, ನಂತರ ಕೋರ್ಟ್‍ನಿಂದ ಒಪ್ಪಿಗೆ ಪಡೆದು ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ವೇಳೆ 2 ಕೋಟಿ ರೂ. ಹಣಕ್ಕೆ ಡೀಲ್ ನೀಡಲಾಗಿದೆ. ಕೊಲೆ ಮಾಡಲು ಸುಪಾರಿ ಪಡೆದಿದ್ದು ವಿಲ್ಸನ್ ಗಾರ್ಡ್‍ನ ನಾಗ ಎನ್ನುವುದು ಫೋಟೋ ಮುಖಾಂತರ ಬೆಳಕಿಗೆ ಬಂದಿದೆ. ಸದ್ಯ ತಮಿಳುನಾಡಿನಲ್ಲಿ ವಿಲ್ಸನ್ ಗಾರ್ಡನ್ ನಾಗ ಆಶ್ರಯ ಪಡೆದುಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕುಟುಂಬ ಸಮೇತ ರಾಜ್ಯಪಾಲ ಗೆಹ್ಲೋಟ್‌ ಧರ್ಮಸ್ಥಳಕ್ಕೆ ಭೇಟಿ

ಈ ಹಿಂದೆ ಶಾಸಕ ಸತೀಶ್ ರೆಡ್ಡಿ ನಿವಾಸದ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಫಾರ್ಚೂನರ್ ಕಾರು ಹಾಗೂ ಮಹೀಂದ್ರಾ ಥಾರ್ ಜೀಪ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ರಾಜ್ಯ ರಾಜಕೀಯದಲ್ಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೇ ದಿನಗಳಲ್ಲಿ ಆರೋಪಿಗಳ ಬಂಧನ ಆಗಿತ್ತು. ನಾಲ್ವರು ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ತಂದು ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದನ್ನೂ ಓದಿ: ಸಿದ್ದು ಪ್ರಚಾರಕ್ಕೆ ಕೋಲಾರದಲ್ಲಿ ವಾರ್‌ ರೂಂ ಓಪನ್‌

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *