ತವರು ಜಿಲ್ಲೆಯಲ್ಲೇ ಸಿದ್ದರಾಮಯ್ಯಗೆ ಭಾರೀ ಅಪಮಾನ!

Public TV
1 Min Read
PRAJADVANI2

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಜಾಧ್ವನಿ ಸಮಾವೇಶದಲ್ಲಿ ಅಪಮಾನ ಮಾಡಿರುವ ಘಟನೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ.

ANIL CHIKKAMADU

ಸಮಾವೇಶದಲ್ಲಿ ವೇದಿಕೆ ಮೇಲಿನ ಬ್ಯಾನರ್‍ನಲ್ಲಿ 31 ನಾಯಕರ ಫೋಟಗಳಿದ್ದರೂ ಸಿದ್ದರಾಮಯ್ಯ ಅವರ ಫೋಟೋ (Photo) ಮಾತ್ರ ಇಲ್ಲ. ತವರು ಜಿಲ್ಲೆಯಲ್ಲೇ ಸಿದ್ದರಾಮಯ್ಯ ಅವರ ವರ್ಚಸ್ಸು ಕುಗ್ಗಿಸುವ ತಂತ್ರವಾಗಿ ಇದು ಕಾಣಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

PRAJADVANI

ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ (D.K.Shivakumar) ಪಕ್ಕದಲ್ಲಿ ಕುಳಿತಿದ್ದ ಶಾಸಕ ಅನಿಲ್ ಚಿಕ್ಕಮಾದು ಸಹ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿರುವುದಾಗಿ ತಿಳಿದುಬಂದಿದೆ. ಶಾಸಕ ಅನಿಲ್ ಸಮಾವೇಶದಲ್ಲಿ ಮಾತನಾಡುತ್ತಾ, ನನ್ನ ತಂದೆಗೆ ಶಿವಕುಮಾರ್ ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ಹೊಗಳಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಯಾವ ಕೆಲಸಗಳನ್ನು ಪ್ರಸ್ತಾಪಿಸಿಲ್ಲ.

ಚುನಾವಣೆ ಹೊತ್ತಿನ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿಯ ಫೋಟೋ ಬಳಕೆ ಮಾಡದೇ ಇರುವುದು, ಶಾಸಕರ ಭಾಷಣದಲ್ಲಿ ಸಾಧನೆ ಉಲ್ಲೇಖಿಸದೆ ಇರುವುದು ಸಿದ್ದರಾಮಯ್ಯರ ಕಡಗಣನೆಯಾಗಿ ಕಾಣಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ 10 ಮಂದಿ ಸಿಎಂ ಆಗುವ ಕನಸು ಹೊಂದಿದ್ದಾರೆ: ಪರಮೇಶ್ವರ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *