Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯ ಡೈನಾಮಿಕ್ ನಾಯಕತ್ವ ಬಂದ್ಮೇಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಳ – ಜೆ.ಪಿ.ನಡ್ಡಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮೋದಿಯ ಡೈನಾಮಿಕ್ ನಾಯಕತ್ವ ಬಂದ್ಮೇಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಳ – ಜೆ.ಪಿ.ನಡ್ಡಾ

Chikkamagaluru

ಮೋದಿಯ ಡೈನಾಮಿಕ್ ನಾಯಕತ್ವ ಬಂದ್ಮೇಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಳ – ಜೆ.ಪಿ.ನಡ್ಡಾ

Public TV
Last updated: February 21, 2023 11:07 pm
Public TV
Share
2 Min Read
j.p.nadda chikkamagaluru
SHARE

ಚಿಕ್ಕಮಗಳೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಳಗೊಂಡಿದೆ. ಅಭಿವೃದ್ಧಿ ಕೆಲಸಗಳು ವೇಗ ಪಡೆದುಕೊಂಡಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಹೇಳಿದ್ದಾರೆ.

ಮಂಗಳವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಬಿಜೆಪಿ ಆಯೋಜಿಸಿದ್ದ ವೃತ್ತಿಪರ ಮತ್ತು ಚಿಂತಕರ ಸಭೆಯಲ್ಲಿ ಮಾತನಾಡಿದರು. 9 ವರ್ಷದ ಹಿಂದೆ ದೇಶದ ಪರಿಸ್ಥಿತಿ ಹೇಗಿತ್ತು ಎಂಬುದನ್ನ ಊಹಿಸಿಕೊಳ್ಳಿ. ಮಿತಿಮೀರಿದ ಭ್ರಷ್ಟಾಚಾರ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಕೀಳಾಗಿ ಕಾಣಲಾಗುತಿತ್ತು. ಮೋದಿ ಬಂದ ಬಳಿಕ ರಾಜಕೀಯವಾಗಿ ಕೈಗೊಂಡ ಅತ್ಯುತ್ತಮ ನಿರ್ಧಾರಗಳಿಂದ ದೇಶ ಪ್ರಗತಿ ಪಥದಲ್ಲಿ ಸಾಗಿದ್ದರಿಂದ, ಹತ್ತಾರು ದೇಶಗಳು ಭಾರತದತ್ತ ತಿರುಗಿ ನೋಡುತ್ತಿವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹೆಚ್ಚು ವಿತರಣೆ ಮಾಡೋರಿಗೆ ಟಿವಿ ಗಿಫ್ಟ್ – ಡಿಕೆಶಿ ಘೋಷಣೆ

j.p.nadda chikkamagaluru 1

ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿ ಶಾರದಾಂಬೆ ದರ್ಶನ ಪಡೆದಿದ್ದರಿಂದ ಸೌಭಾಗ್ಯ ಪ್ರಾಪ್ತಿಯಾಗಿದೆ. ದತ್ತಪೀಠಕ್ಕೆ ನಮಸ್ಕರಿಸುವ ಮೂಲಕ ಮಾತು ಆರಂಭಿಸುತ್ತೇನೆ ಎಂದು ಮಾತು ಆರಂಭಿಸಿದರು. ಅರಣ್ಯ, ಗಿರಿಶಿಖರಗಳನ್ನ ಹೊಂದಿರುವ ಈ ಜಿಲ್ಲೆ ಉತ್ತಮ ಪರಿಸರ ಹೊಂದಿದೆ. ತುಂಗಾ-ಭದ್ರಾ-ವೇದಾವತಿ-ಯಗಚಿ-ಹೇಮಾವತಿ ನದಿಗಳ ಉಗಮಸ್ಥಾನವಾಗಿದೆ ಎಂದು ಜಿಲ್ಲೆಯ ಸೌಂದರ್ಯವನ್ನ ಬಣ್ಣಿಸಿದರು.

ದೇಶದ ಜಿಡಿಪಿ ಶೇ. 7.4 ರಷ್ಟಿದೆ. ಅಮೆರಿಕಾದ್ದು ಶೇ.2.3, ಚೀನಾ ಶೇ.3.3, ಫ್ರಾನ್ಸ್ ಶೇ.1.5 ಆಗಿದೆ. ದೇಶದ ಅಭಿವೃದ್ಧಿಗೆ ಮೋದಿ ದೃಢ ನಿಲುವು ತಾಳಿದ್ದರಿಂದ ಅಭಿವೃದ್ಧಿ ಕೆಲಸಗಳು ವೇಗ ಪಡೆದುಕೊಂಡವು. ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಕೊರೊನಾ ಸೋಂಕಿನ ವೇಳೆಯಲ್ಲಿ ಜನ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಮಾ.1 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಕರೆ

MODI

ರಷ್ಯಾ-ಉಕ್ರೇನ್ ನಡುವೆ ಯುದ್ಧ ಆರಂಭವಾದಾಗ ವಿದೇಶಾಂಗ ಸಚಿವರು ರಷ್ಯಾ ಸೇರಿದಂತೆ ಹಲವು ದೇಶಗಳೊಂದಿಗೆ ಮಾತುಕತೆ ನಡೆಸಿದರು. ಉಕ್ರೇನ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಮೋದಿ ಮುಂದಾದರು. ವಿಶೇಷ ವಿಮಾನಗಳ ವ್ಯವಸ್ಥೆ ಮಾಡಲಾಯಿತು. ಕೆಲವು ನಿಮಿಷ ಯುದ್ಧ ಸ್ಥಗಿತಗೊಳಿಸುವಲ್ಲಿ ಭಾರತ ಯಶಸ್ವಿಯಾಗಿದ್ದರಿಂದ ಆ ಅವಧಿಯಲ್ಲಿ ದೇಶದ ವಿದ್ಯಾರ್ಥಿಗಳು ತಿರಂಗ ಧ್ವಜ ಹಿಡಿದು ಮುನ್ನೆಡೆಯಲು ಸಾಧ್ಯವಾಯಿತು. ಬೇರೆ ದೇಶದ ವಿದ್ಯಾರ್ಥಿಗಳು ಭಾರತದ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕುವ ಮೂಲಕ ಅವರು ಆ ದೇಶ ಸೇರಿಕೊಳ್ಳಲು ಸಾಧ್ಯವಾಯಿತು. ಕರ್ನಾಟಕದ 600 ಮಂದಿ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಸುರಕ್ಷಿತವಾಗಿ ವಾಪಸ್ ಬಂದರು ಎಂದು ನೆನಪಿಸಿಕೊಂಡರು.

ದೇಶದಲ್ಲಿಯೇ ಕರ್ನಾಟಕ ಎಲೆಕ್ಟ್ರಾನಿಕ್ ಉಪಕರಣ ತಯಾರಿಕೆಯಲ್ಲಿ 2ನೇ ಸ್ಥಾನದಲ್ಲಿದೆ. ಬಹುತೇಕ ದೇಶಗಳಿಗೆ ಭಾರತದಲ್ಲಿ ತಯಾರಾಗುತ್ತಿರುವ ವಸ್ತುಗಳನ್ನು ರಫ್ತು ಮಾಡಲಾಗುತ್ತಿದೆ ಎಂದರು. ಇದೇ ವೇಳೆ ರಾಜ್ಯದ ಅಭಿವೃದ್ಧಿ ಬಗ್ಗೆ ಮಾತನಾಡಿದ ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಹಲವು ವರ್ಗಗಳಿಗೆ ಅನುಕೂಲವಾಗಿದೆ. ಸಿದ್ಧರಾಮಯ್ಯ ಅವಧಿಯಲ್ಲಿ ವಿದ್ಯುತ್ ಕಡಿತಗೊಳ್ಳುತ್ತಿತ್ತು. ಈಗ ಗುಣಮಟ್ಟದಲ್ಲಿ ನಿರಂತರವಾಗಿ ವಿದ್ಯುತ್ ನೀಡಲಾಗುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ಅಧಿಕಗೊಂಡಿತ್ತು. ಒಡೆಡು ಆಳುವ ನೀತಿ ಅನುಸರಿಸಿದರು. ನಾವು ಪಿಎಫ್‍ಐ ಸಂಘಟನೆಯನ್ನು ಬ್ಯಾನ್ ಮಾಡಿದರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆ ಸಂಘಟನೆಯ ಮುಖಂಡರ ಮೇಲಿದ್ದ 175 ಕೇಸುಗಳನ್ನು ವಾಪಸ್ ಪಡೆಯಲಾಯಿತು. ಲೋಕಾಯುಕ್ತವನ್ನು ಕೈಬಿಡಲಾಯಿತು ಎಂದು ಸಿದ್ದರಾಮಯ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ನಾಯಕ, ರಾಜ್ಯಕ್ಕೆ ಅನ್ನದಾತ – ಡಿಕೆಶಿ ಗುಣಗಾನ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj BommaibjpChikkamagaluruJ P Naddanarendra modiಚಿಕ್ಕಮಗಳೂರುಜೆ.ಪಿ.ನಡ್ಡಾನರೇಂದ್ರ ಮೋದಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

WhatsApp
Court

ಡಿಜಿಟಲ್ ಅರೆಸ್ಟ್ ವಂಚನೆಗಳಲ್ಲಿ ತೊಡಗಿದ್ದ 9,400 ವ್ಯಾಟ್ಸಪ್ ಖಾತೆಗಳು ಡಿಲೀಟ್‌

Public TV
By Public TV
3 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
19 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
38 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
38 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
56 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?