‘ಅಲ್ಲಾ’ ಎಂಬ ಪದ ಸಂಸ್ಕೃತದಿಂದ ಬಂದಿದೆ: ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಹೇಳಿಕೆ

Public TV
1 Min Read
Shankaracharya Nischalanand Saraswati 1

ಲಕ್ನೋ: ‘ಅಲ್ಲಾ’ (Allah) ಎಂಬ ಪದ ಭಾರತದ ಪ್ರಾಚೀನ ಭಾಷೆಯಾದ ಸಂಸ್ಕೃತದಿಂದ (Sanskrit) ಬಂದಿದೆ ಎಂದು ವಾರಣಾಸಿಯ (Varanasi) ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ನಿಶ್ಚಲಾನಂದ ಸರಸ್ವತಿ (Shankaracharya Nischalanand Saraswati) ಹೇಳಿಕೆ ನೀಡಿದ್ದಾರೆ.

ಅಲ್ಲಾ ಎಂಬ ಪದ ಹೆಣ್ತನದ ಶಕ್ತಿಯನ್ನು ಸೂಚಿಸುತ್ತದೆ. ಈ ಪದವನ್ನು ದುರ್ಗಾ ದೇವಿಯನ್ನು ಪ್ರಾರ್ಥಿಸಲು ಬಳಸಲಾಗುತ್ತದೆ. ಜಗತ್ತಿನಲ್ಲಿ ಇರುವುದು ಕೇವಲ ಒಂದೇ ಧರ್ಮ. ಅದು ಹಿಂದೂ ಸನಾತನ ಧರ್ಮ. ಉಳಿದ ಎಲ್ಲಾ ಧರ್ಮಗಳು ಕೇವಲ ಪಂಗಡಗಳು. ಧರ್ಮದ ಬಗ್ಗೆ ಪ್ರಶ್ನೆಯನ್ನು ಎತ್ತುವವರು ಮೊದಲು ಸಂಸ್ಕೃತ ವ್ಯಾಕರಣವನ್ನು ಕಲಿತುಕೊಳ್ಳಿ ಎಂದು ಹೇಳಿದರು. ಇದನ್ನೂ ಓದಿ: ದೆಹಲಿ ಪಾಲಿಕೆಯಲ್ಲಿ ಹೈಡ್ರಾಮಾ – ಪರಸ್ಪರ ಹೊಡೆದಾಡಿಕೊಂಡ ಬಿಜೆಪಿ, ಆಪ್ ಸದಸ್ಯರು

Shankaracharya Nischalanand Saraswati

‘ಅಲ್ಲಾ’ ಮತ್ತು ‘ಓಂ’ ಪದಗಳೆರಡೂ ಒಂದೇ ಎಂಬ ಮೌಲಾನಾ ಸೈಯದ್ ಅರ್ಷದ್ ಮದನಿಯವರ ಹೇಳಿಕೆಯನ್ನು ಟೀಕಿಸಿದ ನಿಶ್ಚಲಾನಂದ ಸರಸ್ವತಿ, ಬೇರೆ ಧರ್ಮದ ಗ್ರಂಥಗಳ ವಿರುದ್ಧ ಮಾತನಾಡುವ ಧೈರ್ಯ ಯಾರಿಗೂ ಇಲ್ಲ. ರಾಮಚರಿತಮಾನಸಗಳನ್ನು ಪ್ರಶ್ನಿಸುವವರು ಚಾಣಕ್ಯ ನೀತಿಯನ್ನು ಓದಬೇಕು ಎಂದರು.

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರನ್ನು ಹಾಡಿ ಹೊಗಳಿದ ಅವರು, ಶಾಸ್ತ್ರಿ ಅವರು ಅಲೆದಾಡುತ್ತಿರುವ ಹಿಂದೂಗಳನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ. ದೇವರ ಹೆಸರನ್ನು ತೆಗೆದುಕೊಂಡು ಅವರು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರು ಎಂದಿಗೂ ತಾವು ಪವಾಡಗಳನ್ನು ಮಾಡಿರುವುದಾಗಿ ಹೇಳಿಕೊಂಡಿಲ್ಲ. ಅವರು ಹೇಳಿರುವ ಎಲ್ಲಾ ವಿಚಾರಗಳೂ ನಿಜವಾಗಿದೆ. ಇದಕ್ಕೆಲ್ಲಾ ಕಾರಣ ಭಗವಾನ್ ಹನುಮಂತನ ಶಕ್ತಿ ಎಂದರು. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಪಂಜಾಬ್ ಆಪ್ ಶಾಸಕ ಬಂಧನ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *