ಬೆಳಗಾವಿ: ಫೆಬ್ರವರಿ 27ರಂದು ಮೊದಲು ಶಿವಮೊಗ್ಗಕ್ಕೆ (Shivamogga) ಮಾತ್ರ ಸೀಮಿತವಾಗಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಕಾರ್ಯಕ್ರಮ ಇದೀಗ ಬೆಳಗಾವಿಗೂ (Belagavi) ಪ್ರವಾಸ ಫಿಕ್ಸ್ ಆಗಿದೆ. ಆದರೆ ದಿಢೀರ್ ಎಂಬಂತೆ ಬೆಳಗಾವಿಯಲ್ಲೂ ಕಾರ್ಯಕ್ರಮ ಇಟ್ಟುಕೊಂಡಿರುವುದಕ್ಕೆ ರಾಜಕೀಯ ವಲಯದಲ್ಲಿ ಹಲವು ಲೆಕ್ಕಾಚಾರಗಳು ನಡೆಯುತ್ತಿವೆ.
ದಿವಂಗತ ಸುರೇಶ್ ಅಂಗಡಿ ಕನಸಿನ ಯೋಜನೆ ನವೀಕೃತ ರೈಲ್ವೆ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಕೋವಿಡ್ನಿಂದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರು ಮೃತಪಟ್ಟಿದ್ದರು. ಕೋವಿಡ್ ಮಾರ್ಗಸೂಚಿಯಂತೆ ಸುರೇಶ್ ಅಂಗಡಿ ಪಾರ್ಥಿವ ಶರೀರ ಬೆಳಗಾವಿಗೆ ತರಲು ಆಗಿರಲಿಲ್ಲ. ದೆಹಲಿಯಲ್ಲಿಯೇ ಸುರೇಶ್ ಅಂತ್ಯಕ್ರಿಯೆ ಆಗಿತ್ತು. ಸುರೇಶ್ ಅಂಗಡಿ ಪಾರ್ಥಿವ ಶರೀರ ಸ್ವಕ್ಷೇತ್ರಕ್ಕೆ ತರಲು ಆಗಲಿಲ್ಲ ಎಂದು ಪದೇಪದೇ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ.
ಬೆಳಗಾವಿ ಭೇಟಿ ನೀಡಿದ ವೇಳೆ ಹಲವು ಬಾರಿ ಈ ವಿಷಯ ಪ್ರಸ್ತಾಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸುರೇಶ್ ಅಂಗಡಿ ಕನಸಿನ ಯೋಜನೆ ನವೀಕೃತ ರೈಲ್ವೆ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಾಧನೆ ಸ್ಮರಿಸಿ ಮತಗಟ್ಟಿ ಮಾಡಿಕೊಳ್ಳಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದೆ ಎಂದಿದ್ದಾರೆ. ಇದನ್ನೂ ಓದಿ: ಮದ್ಯ ಮಾರಾಟ, ಖರೀದಿಗೆ ವಯಸ್ಸು ಇಳಿಕೆ ಇಲ್ಲ: ಗೋಪಾಲಯ್ಯ
ಬೆಳಗಾವಿ ಜಿಲ್ಲಾ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಮತ್ತೊಂದೆಡೆ ಬೆಂಗಳೂರು ಹೊರತುಪಡಿಸಿದರೆ ಬೆಳಗಾವಿಯಲ್ಲೇ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳಿದ್ದು, ಜಿಲ್ಲೆಯ 18ಕ್ಕೆ 18ಸ್ಥಾನ ಗೆದ್ದು ಕ್ಲೀನ್ಸ್ವೀಪ್ ಮಾಡಿಕೊಳ್ಳಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಹೀಗಾಗಿ ಪ್ರಧಾನಿ ಮೋದಿ ಕರೆಯಿಸಿ ಬೃಹತ್ ರೋಡ್ ಶೋ ನಡೆಸಲು ಬಿಜೆಪಿ ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಮೌನವಹಿಸಿದ್ದು ಯಾಕೆ: ಸಿದ್ದು ಪ್ರಶ್ನೆ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
Your point of view caught my eye and was very interesting. Thanks. I have a question for you.