BJP ಕಾರ್ಯಕರ್ತರು ಮೈ ಮರೆತ್ರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ: ಪ್ರತಾಪ್ ಸಿಂಹ

Public TV
1 Min Read
PRATAP SIMHA 2

ಮೈಸೂರು: ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ನಾಯಕರುಗಳ ವಾಕ್ಸಮರಗಳು ಜೋರಾಗುತ್ತಿದೆ. ಇದೀಗ ಸಂಸದ ಪ್ರತಾಪ್ ಸಿಂಹ (Pratap Simha) ಕಾಂಗ್ರೆಸ್‌ (Congress) ವಿರುದ್ಧ ಕಿಡಿಕಾರಿದ್ದಾರೆ.

PRATAP SIMHA 1

ಮೈಸೂರಿನಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ (Siddaramaiah) ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಮತ್ತೊಮ್ಮೆ ಬಿಜೆಪಿ ನೇತೃತ್ವದ ರಾಷ್ಟ್ರೀಯವಾದಿ ಸರ್ಕಾರವನ್ನು ತರಲು ಪ್ರಯತ್ನ ಮಾಡಿ ಎಂದು ಸಂಸದರು ಕರೆ ನೀಡಿದರು. ಇದನ್ನೂ ಓದಿ: ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸದೊಂದಿಗೆ ಹೋಗುತ್ತಿದ್ದೇನೆ: ಬಿಎಸ್‌ವೈ ವಿದಾಯ ಭಾಷಣ

SIDDARAMAIAH 1 4

ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮದುವೆ, ಮುಂಜಿ, ಬೀಗರ ಊಟ ಅನೇಕ ಕಾರ್ಯಕ್ರಮಕ್ಕೆ ಮೈಸೂರಿಗೆ ಬರುತ್ತಿದ್ದರು. ಆದರೆ ದುಷ್ಕರ್ಮಿಗಳಿಂದ ಹತ್ಯೆಯಾದ ಕ್ಯಾತಮಾರನಹಳ್ಳಿಯ ರಾಜುವಿನ ಮನೆಗೆ ಸೌಜನ್ಯಕ್ಕೂ ಭೇಟಿ ನೀಡಲಿಲ್ಲ. ಪಿಎಫ್‍ಐ (PFI), ಕೆಎಫ್ ಡಿಯ 175 ಸದಸ್ಯರ ಮೇಲಿದ್ದ ಪ್ರಕರಣವನ್ನು ಸಿದ್ದರಾಮಯ್ಯ ವಾಪಸ್ ಪಡೆದರು. ಪರಿಣಾಮ ಎರಡು ಡಜನ್ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯಲು ಕಾರಣವಾಯಿತು ಎಂದರು.

PRATAP SIMHA

ಈಗ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಹವಣಿಸುತ್ತಿದ್ದಾರೆ. ಒಂದು ವೇಳೆ ನಮ್ಮ ಕಾರ್ಯಕರ್ಯರು ಈ ವೇಳೆ ಮೈ ಮರೆತರೆ, ರಾಜ್ಯದಲ್ಲಿ ಮತ್ತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ವಾಗ್ದಾಳಿ ನಡೆಸಿದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *